Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನತೆಗೆ ಸಿಹಿಸುದ್ದಿ – ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳೋದು ಅನುಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನತೆಗೆ ಸಿಹಿಸುದ್ದಿ – ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳೋದು ಅನುಮಾನ

Bengaluru City

ಜನತೆಗೆ ಸಿಹಿಸುದ್ದಿ – ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳೋದು ಅನುಮಾನ

Public TV
Last updated: September 30, 2021 12:43 pm
Public TV
Share
3 Min Read
corona 3rd wave bang
SHARE

ಬೆಂಗಳೂರು: ಕೊರೊನಾ ಎರಡು ಅಲೆಗಳಿಂದ ಜನ ತತ್ತರಿಸಿ ಹೋಗಿ ಭಾರೀ ಸಾವು, ನೋವುಗಳು ಸಂಭವಿಸಿವೆ. ಈಗ ಜನ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಹೊತ್ತಲ್ಲಿ ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆಯನ್ನು ಸಹ ನೀಡಿದ್ದರು. ಆದರೆ ಇದೀಗ ಹೊಸ ಅಧ್ಯಯನದ ಪ್ರಕಾರ ಮೂರನೇ ಅಲೆ ಬರೋದು ಅನುಮಾನ ಎನ್ನಲಾಗುತ್ತಿದೆ.

ಮೂರನೇ ಅಲೆ ಆಗಸ್ಟ್ ಮೂರನೇ ವಾರ ಇಲ್ಲವೇ ಕೊನೆಯ ವಾರ ಕಾಣಿಸಿಕೊಳ್ಳಬಹುದು. ಸೆಪ್ಟೆಂಬರ್ ಮೊದಲನೇ ವಾರ ಇಲ್ಲವೇ ಎರಡನೇ ವಾರ ಕಾಣಿಸಿಕೊಳ್ಳುತ್ತೆ ಎಂದು ಕೆಲ ಅಧ್ಯಯನಗಳು ಹೇಳಿದ್ದವು. ಅಧ್ಯಯನಗಳ ಈ ಊಹೆ ಈಗ ಉಲ್ಟಾ ಆಗಿದೆ. ಹೀಗಾಗಿ ಕೊರೊನಾ ಮೂರನೇ ಅಲೆ ಯಾವಾಗ ಬರುತ್ತೆ ಎಂದು ಹೇಳುವುದು ಅಸಾಧ್ಯವಾಗಿದೆ

ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ, ಯಾವಾಗ ಹರಡುವಿಕೆ ಪ್ರಮಾಣ ಕಡಿಮೆಯಾಗುತ್ತದೆಯೋ ಆಗ ಸಹಜವಾಗಿಯೇ ರೂಪಾಂತರ ವೈರಸ್ ಪತ್ತೆ ಕಡಿಮೆಯಾಗುತ್ತದೆ. ಆದರೆ ಇದು ಬೂದಿ ಮುಚ್ಚಿದ ಕೆಂಡದ ರೀತಿಯ ಸ್ಥಿತಿ. ಹೀಗಾಗಿ ಮುಂಜಾಗೃತಾ ಕ್ರಮಗಳನ್ನು ಮರೆಯಬಾರದು ಎಂದು ತಿಳಿಸಿದರು. ಇದನ್ನೂ ಓದಿ: 39 ಕೋಟಿ ತೆರಿಗೆ ಬಾಕಿ- ಬಿಬಿಎಂಪಿಯಿಂದ ಮಂತ್ರಿ ಮಾಲ್‍ಗೆ ಬೀಗ

ಈಗೀಗ ಶಾಲೆ, ಕಾಲೇಜುಗಳು ಪ್ರಾರಂಭವಾಗುತ್ತಿವೆ. ಬಿಸಿನೆಸ್ ವಲಯ ಚೇತರಿಸಿಕೊಳ್ಳುತ್ತಿದೆ. ಇದೆಲ್ಲದರ ಮಧ್ಯೆ ಕೊರೊನಾ ನಿಯಮಗಳನ್ನು ಮರೆಯಬಾರದು. ಪರಿಸರಕ್ಕೆ ಅನುಗುಣವಾಗಿ ವೈರಸ್ ರೂಪಾಂತರವಾಗುತ್ತದೆ. ನಾವು ಕೊರೊನಾ ನಿಯಮ ಪಾಲಿಸುವ ಮೂಲಕ, ನಮಗೆ ಬರದಂತೆ ನೋಡಿಕೊಂಡರೆ ವೈರಸ್ ರೂಪಾಂತರ ಹಾಗೂ 3ನೇ ಅಲೆಯನ್ನು ತಡೆಯಬಹುದು ಎಂದು ತಿಳಿಸಿದರು.

ಕಾಣಿಸಿಕೊಂಡಿಲ್ಲ ಯಾಕೆ?
ರಾಜ್ಯದಲ್ಲಿ ಈ ವರೆಗೆ ಹೊಸ ತಳಿ ಕಾಣಿಸಿಕೊಂಡಿಲ್ಲ. ಹೊಸ ತಳಿ ಕಾಣಿಸಿಕೊಂಡಾಗ ಮಾತ್ರ ಮೂರನೇ ಅಲೆ ಬರುವವುದರ ಬಗ್ಗೆ ಹೇಳಬಹುದಾಗಿದೆ. ಅಲ್ಲದೆ ಕೊರೊನಾ ವ್ಯಾಕ್ಸಿನೇಷನ್ ವೇಗ ಹೆಚ್ಚಾಗಿರುವುದು ಮೂರನೇ ಅಲೆ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ. ವ್ಯಾಕ್ಸಿನೇಷನ್ ಹೆಚ್ಚಾದಷ್ಟು ಮನುಷ್ಯನ ದೇಹದಲ್ಲಿ ಪ್ರತಿಕಾಯ ಸೃಷ್ಟಿಯಾಗಿ ರೂಪಾಂತರಿ ವೈರಸನ್ನು ತಡೆಗಟ್ಟಬಹುದಾಗಿದೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ – 30 ಅಡಿ ಮಣ್ಣು ಕುಸಿತ, ತಪ್ಪಿತು ಭಾರೀ ಅನಾಹುತ

ಕೊರೊನಾ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಪ್ರಮಾಣ ಸಹ ಕಡಿಮೆಯಾಗಿದ್ದು, ಎರಡೆರಡು ಅಲೆಯ ಸಾವು, ನೋವು ನೋಡಿ ಜನ ಮನೆಗಳಲ್ಲಿ ಜಾಗೃತರಾಗಿದ್ದಾರೆ. ಇವು ಮೂರನೇ ಅಲೆ ಕಾಣಿಸಿಕೊಳ್ಳದಿರುವುದಕ್ಕೆ ಪ್ರಮುಖ ಕಾರಣಗಳಾಗಿವೆ.

ಜನರ ದೇಹದಲ್ಲಿ ಆ್ಯಂಟಿ ಬಾಡಿ ಡೆವಲಪ್(ಪ್ರತಿಕಾಯ ಸೃಷ್ಟಿ) ಆಗಿರುವುದು ಮೂರನೇ ಅಲೆ ತಡವಾಗಿದೆ. ಕೊರೊನಾಗೆ ಮೃತಪಟ್ಟ ಕುಟುಂಬದಲ್ಲಿ ಮುನ್ನೆಚ್ಚರಿಕೆ ವಹಿಸಿರುವುದು. ಕೊರೊನಾ ಕೇಸ್ ಮತ್ತು ಸಾವು ಹೆಚ್ಚಾಗಿದ್ದ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಂಡ ಕ್ರಮಗಳು, ಲಾಕ್‍ಡೌನ್ ಮತ್ತು ಕಂಟೈನ್ಮೆಂಟ್ ಮಾಡಿ ವೈರಸ್ ಮ್ಯೂಂಟೆಟ್ ಆಗದಂತೆ ಮಾಡಿರುವುದು. ದೇಶದಲ್ಲಿ ಹೊಸ ಹೊಸ ವೆರಿಯಂಟ್ ಕಾಣಿಸಿಕೊಂಡರೂ ಅಷ್ಟೊಂದು ವೇಗವಾಗಿ ಹಬ್ಬುವ ವೈರಸ್ ಅಲ್ಲ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ವೈರಸ್ ತೀವ್ರತೆ ಕಡಿಮೆ ಆಗಿದೆ. ಇವು ಮೂರನೇ ಅಲೆ ವಿಳಂಬಕ್ಕೆ ಕಾರಣವಾಗಿವೆ.

3ನೇ ಅಲೆ ಭೀಕರತೆ ಇರಲ್ವಾ?
ಕೊರೊನಾ ಲಸಿಕೆ ಭಾಗಶಃ ಜನರಿಗೆ ಸಿಂಗಲ್ ಹಾಗೂ ಗಣನೀಯ ಪ್ರಮಾಣದಲ್ಲಿ ಡಬಲ್ ಡೋಸ್ ಮುಗಿದಿದೆ. ಚಿಕಿತ್ಸೆ ವಿಧಾನವೂ ಮತ್ತಷ್ಟು ಉನ್ನತೀಕರಣ ಕಂಡು ಕೊಂಡಿದೆ. ಜನರಲ್ಲಿ ಕೊರೊನಾ ಜಾಗೃತಿ ಸಹ ಹೆಚ್ಚಿನ ಪ್ರಮಾಣದಲ್ಲಿ ಪಸರಿಸಿದೆ. ಮಾಸ್ಕ್ ಹಾಕುವ ಪ್ರಮಾಣ ಹೆಚ್ಚಳವಾಗಿದೆ. ಎರಡನೇ ಅಲೆ ವೇಳೆ ಬಹುತೇಕರಿಗೆ ಸೋಂಕು ಹರಡಿದ ಹಿನ್ನೆಲೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಿದೆ. ಹೀಗಾಗಿ ಕೊರೊನಾ 3ನೇ ಅಲೆ ಬಂದರೂ 2ನೇ ಅಲೆಯಷ್ಟು ಭೀಕರತೆ ಇರುವುದಿಲ್ಲ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ:ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್

ಕೊರೊನಾ ರೋಗ ಲಕ್ಷಣ ಪತ್ತೆ ಸಮಯದಲ್ಲೇ ತೀಕ್ಷ್ಣ ಕ್ರಮ ವಹಿಸಲಾಗುತ್ತಿದೆ. ಕ್ಲಸ್ಟರ್ ಗಳನ್ನು ಗುರುತಿಸಿ ಪ್ರಾಥಮಿಕ ಹಂತದಲ್ಲಿ ನಿಯಂತ್ರಣ ಮಾಡಲಾಗುತ್ತಿದೆ. ಕೊರೊನಾ ಕೇಸ್ ಕಡಿಮೆಯಾದರೂ ಟೆಸ್ಟ್ ಪ್ರಮಾಣ ಹೆಚ್ಚಿನ ಸಂಖ್ಯೆಯಲ್ಲಿದೆ. ಕೊರೊನಾ ಮುನ್ನಚ್ಚರಿಕೆಗಾಗಿ ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇಸ್ ಕಂಡು ಬಂದರೂ ಶೀಘ್ರದಲ್ಲೇ ಕ್ರಮ ಜರುಗಿಸಲಾಗುತ್ತಿದೆ. ಇದರಿಂದಾಗಿ 3ನೇ ಅಲೆ ಅಪ್ಪಳಿಸುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ.

TAGGED:3rd wave3ನೇ ಅಲೆCorona VirusPublic TVಕೊರೊನಾ ವೈರಸ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
3 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
4 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?