ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್

Public TV
1 Min Read
MNG 4

ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಖಾಸಗಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೂ ದಿನಸಿ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಆದರೆ ಸ್ಥಳೀಯ ಅಂಗಡಿಗಳಲ್ಲಿ ಮಾತ್ರ ದಿನಸಿ, ತರಕಾರಿ ಖರೀದಿಸಬಹುದಾಗಿದೆ. ತಮ್ಮ ವಾಹನಗಳಲ್ಲಿ ಬೇರೆ ಕಡೆ ಖರೀದಿಗೆ ಹೋದ್ರೆ ವಾಹನ ಜಪ್ತಿ ಮಾಡಲಾಗುತ್ತಿದ್ದು, ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲೂ ಖಾಸಗಿ ಸಂಚಾರ ನಿರ್ಬಂಧಿಸಲಾಗಿದೆ ಎಂದಿದ್ದಾರೆ.

MNG 2 2

ಒಟ್ಟಿನಲ್ಲಿ ವಾಹನ ಜಪ್ತಿ ಕ್ರಮ ಮಂಗಳೂರಿನಲ್ಲಿ ಬಹುತೇಕ ಸಕ್ಸಸ್ ಆಗುತ್ತಿದ್ದು, ಜನ ನಡೆದುಕೊಂಡೇ ಸ್ಥಳೀಯ ಅಂಗಡಿಗಳಿಗೆ ತೆರಳುತ್ತಿದ್ದಾರೆ. ಆದರೆ ಕೆಲವರು ಆದೇಶ ದಿಕ್ಕರಿಸಿ ವಾಹನ ರಸ್ತೆಗಿಳಿಸಿದ್ದಾರೆ. ಸ್ಥಳೀಯ ಆಂಗಡಿಗಳನ್ನು ಬಿಟ್ಟು ಕದ್ರಿಯ ಮಲ್ಲಿಕಟ್ಟೆ ಮಾರುಕಟ್ಟೆ ವಾಹನಗಳಲ್ಲಿ ಜನರು ಬರುತ್ತಿದ್ದು, ಜಿಲ್ಲಾಡಳಿತದ ಆದೇಶಕ್ಕೆ ಕಿಮ್ಮತ್ತು ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಂತಹ ವಾಹನಗಳನ್ನು ಪೊಲೀಸರು ಸೀಜ್ ಮಾಡುತ್ತಿದ್ದಾರೆ.

MNG 1 1

Share This Article
Leave a Comment

Leave a Reply

Your email address will not be published. Required fields are marked *