ಮಡಿಕೇರಿ: ರಾಜ್ಯದಲ್ಲಿ ಕೊರೊನಾ ಭೀತಿ ತೀವ್ರವಾಗಿ ಕಾಡುತ್ತಿದ್ದು, ಮಾಸ್ಕ್ ಸಿಗದ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕರೊಬ್ಬರು ಹೆಲ್ಮೆಟ್ ಧರಿಸಿ ಬಸ್ ಚಾಲನೆ ಮಾಡುತ್ತಿದ್ದಾರೆ.
ಮಡಿಕೇರಿ ಘಟಕದ ಡ್ರೈವರ್ ಉಷಾಕುಮಾರ್ ಕೊರೊನಾ ಭೀತಿಯಿಂದ ಹೆಲ್ಮೆಟ್ ಧರಿಸಿ ಬಸ್ ಚಾಲನೆ ಮಾಡುತ್ತಿದ್ದಾರೆ. ಕೊಡಗಿನಲ್ಲೂ ಕೊರೊನಾ ವೈರಸ್ ಸೋಂಕಿತ ಶಂಕಿತರು ಪತ್ತೆಯಾಗುತ್ತಿದ್ದಂತೆ ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಹೀಗಾಗಿ ಚಾಲಕ ಉಷಾಕುಮಾರ್ ಮಾಸ್ಕ್ ಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಮಾಸ್ಕ್ ಸಿಗದ ಹಿನ್ನೆಲೆಯಲ್ಲಿ ಹೆಲ್ಮೆಟ್ ಧರಿಸಿ ಬಸ್ ಚಾಲನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ದುಬೈನಿಂದ ಬಂದ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
ಮಡಿಕೇರಿಯಿಂದ ಕುಶಾಲನಗರ ಮಾರ್ಗದಲ್ಲಿ ಬಸ್ಸು ಓಡಿಸುವ ಇವರು, ಬಹುತೇಕ ಮೆಡಿಕಲ್ ಶಾಪ್ಗಳಲ್ಲಿ ಮಾಸ್ಕ್ ಗಳನ್ನು ಕೇಳಿದ್ದಾರೆ. ಆದರೆ ಎಲ್ಲೂ ಸಿಕ್ಕಿಲ್ಲ, ಈ ಹಿನ್ನೆಲೆ ಆತಂಕಗೊಂಡು ಹೆಲ್ಮೆಟ್ ಮೊರೆ ಹೋಗಿದ್ದಾರೆ ತಿಳಿದುಬಂದಿದೆ.