ರಾಮನವಮಿಗೂ ಕೊರೊನಾ ಬಿಸಿ- ಭಣಗುಡುತ್ತಿವೆ ದೇವಸ್ಥಾನಗಳು

Public TV
1 Min Read
ramanavami

– ಮಜ್ಜಿಗೆ, ಪಾನಕ, ಕೋಸಂಬರಿ ಘಮವಿಲ್ಲ
– ಸರಳ ಪೂಜೆ ಮೂಲಕ ಆಚರಣೆ

ಬೆಂಗಳೂರು: ದೇವಸ್ಥಾನಗಳಲ್ಲಿ ರಾಮನವಮಿ ಸಂಭ್ರಮ, ಮಜ್ಜಿಗೆ, ಪಾನಕ, ಕೋಸಂಬರಿ ಘಮ ಘಮಿಸುತ್ತಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಎಲ್ಲ ದೇವಸ್ಥಾನಗಳಲ್ಲಿ ಸರಳವಾಗಿ ಪೂಜೆ ಮಾಡುವ ಮೂಲಕ ರಾಮನವಮಿ ಆಚರಿಸಲಾಗುತ್ತಿದೆ.

vlcsnap 2020 04 02 08h50m30s840

ಬೆಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ವಿವಿಧೆಡೆಗಳಲ್ಲಿ ರಾಮನವಮಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಪೂಜೆಗೆ ಮಾತ್ರ ರಾಮನವಮಿ ಸೀಮಿತವಾಗಿದ್ದು, ಎಲ್ಲ ರಾಮ ಮಂದಿರಗಳಲ್ಲೂ ಸರಳವಾಗಿ ರಾಮನವಮಿ ಆಚರಿಸಲಾಗುತ್ತಿದೆ. ಮಂದಿರ ಸ್ವಚ್ಛಗೊಳಿಸಿ ಪೂಜೆ ಮಾಡಲಾಗುತ್ತಿದೆ. ಆದರೆ ಮಜ್ಜಿಗೆ, ಪಾನಕ, ಕೋಸಂಬರಿಗೆ ಬ್ರೇಕ್ ಹಾಕಲಾಗಿದೆ. ಕೇವಲ ದೇವಸ್ಥಾನದವರು ಮಾತ್ರ ಪೂಜೆಯಲ್ಲಿ ಭಾಗಿಯಾಗುತ್ತಿದ್ದಾರೆ. ಪೂಜೆಯಲ್ಲಿ ಭಾಗವಹಿಸದಂತೆ ಸಾರ್ವಜನಿಕರಿಗೂ ನಿರ್ಬಂಧ ಹೇರಲಾಗಿದೆ.

vlcsnap 2020 04 02 08h51m08s274

ಸಿಲಿಕಾನ್ ಸಿಟಿಯಲ್ಲಿ ಪ್ರತಿ ವರ್ಷ ಹಲವು ದೇವಸ್ಥಾನಗಳಲ್ಲಿ ರಾಮನವಮಿಯನ್ನು ಭರ್ಜರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಕೊರೊನಾ ಭಿತಿ ಹಿನ್ನೆಲೆ ಎಲ್ಲವೂ ಸ್ತಬ್ಧವಾಗಿದ್ದು, ಶ್ರೀರಾಮನವಮಿ ಹಿನ್ನೆಲೆಯಲ್ಲಿ ಸದಾ ಕಳೆಕಟ್ಟುತ್ತಿದ್ದ ವೀರಾಂಜನೇಯ ದೇವಾಲಯ ಕೊರೋನಾ ವೈರೆಸ್ ಎಫೆಕ್ಟ್ ನಿಂದಾಗಿ ಬಂದ್ ಆಗಿದೆ. ಪೂಜೆ, ಪ್ರಸಾದ, ಮಜ್ಜಿಗೆ, ಪಾನಕ ಹಂಚಿಕೆಗೆ ಬ್ರೇಕ್ ಬಿದ್ದಿದೆ. ನಗರದ ಹಲವು ದೇವಾಲಯಗಳಲ್ಲಿ ಸರಳವಾಗಿ ರಾಮನವಮಿ ಆಚರಿಸಲಾಗುತ್ತಿದ್ದು, ಸರಳವಾಗಿ ಪೂಜೆ ಮಾತ್ರ ಮಾಡಲಾಗುತ್ತಿದೆ.

vlcsnap 2020 04 02 08h53m56s426

ಇತ್ತ ದಾವಣಗೆರೆಯಲ್ಲೂ ರಾಮನವಮಿ ಸ್ತಬ್ಧವಾಗಿದೆ. ಆದರೆ ದಾವಣಗೆರೆಯ ಹೂವಿನ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿದ್ದು, ಹೂವು ಹಾಗೂ ಹಣ್ಣುಗಳ ವ್ಯಾಪಾರ ಜೋರಾಗಿ ಸಾಗಿದೆ. ಮನೆ ಬಳಿಯೇ ಅಗತ್ಯ ವಸ್ತುಗಳು ಬರುತ್ತವೆ ಎಂದು ಹೇಳಿದರೂ ಜನ ಮಾರುಕಟ್ಟೆಗೆ ಬಂದು ಖರೀದಿಸುತ್ತಿದ್ದಾರೆ. ರಾಮನವಮಿ ಇದ್ದರೂ ಹೂವಿನ ಬೆಲೆ ಕುಸಿದಿದ್ದು, ಸೇವಂತಿಗೆ 20ರೂ., ಕನಕಾಂಬರ 30 ರೂ., ಸೇರಿದಂತೆ ಹಲವು ಹೂವುಗಳ ಬೆಲೆ ಕುಸಿತವಾಗಿದೆ.

vlcsnap 2020 04 02 08h54m10s843

Share This Article
Leave a Comment

Leave a Reply

Your email address will not be published. Required fields are marked *