ಗಿರಿಜನರಿಗೆ ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಟಿಬೇಟಿಯನ್ ಕ್ಯಾಂಪ್ ಜನತೆ

Public TV
1 Min Read
tibetian

ಚಾಮರಾಜನಗರ: ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಮುಂದಿನ ಜೀವನ ನಿರ್ವಹಣೆಗೆ ಹೇಗೆ ಎಂದು ಕಂಗಾಲಾಗಿರುವ ಗಿರಿಜನ ಹಾಡಿಗಳ ಜನರಿಗೆ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

vlcsnap 2020 04 14 22h14m31s246

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶವನ್ನೇ ಲಾಕ್‍ಡೌನ ಮಾಡಿದೆ. ಇದರಿಂದ ದಿನಗೂಲಿ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಪರಿಸ್ಥಿತಿ ಅರಿತ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಹಾಗೂ ಟಿಬೇಟಿಯನ್ನರು ಸ್ವಯಂ ಪ್ರೇರಿತರಾಗಿ ಹಳ್ಳಿಗಳಲ್ಲಿ ದೇಣಿಗೆ ಸಂಗ್ರಹಿಸಿ ಗಿರಿ ಜನರಿಗೆ ಸಹಾಯ ಮಾಡಿದ್ದಾರೆ.

vlcsnap 2020 04 14 22h15m02s59

ತಾಲೂಕಿನ ಗಿರಿಜನ ಹಾಡಿಗಳಾದ ಹಾವಿನಮೂಳೆ, ಮಾವತ್ತೂರು, ಯರಗಬಾಳು, ಉದ್ದಟಿ, ಜಿರಿಗಿಗದ್ದೆ, ಹಿರಿಯಂಬಲಬ ಹಾಗೂ ಕತ್ತೆಕಾಲು ಪೋಡುಗಳ ಗಿರಿಜನರಿಗೆ ಆಹಾರ ಪದಾರ್ಥ ವಿತರಿಸಿದ್ದಾರೆ. ಸುಮಾರು 500 ಸೋಲಿಗ ಕುಟುಂಬಗಳಿಗೆ 2 ಕೆ.ಜಿ ರಾಗಿ, ಬೆಲ್ಲ, ಎಣ್ಣೆ, ಬಿಸ್ಕೆಟ್, ಚಹಾ ಪುಡಿ ಸೇರಿದಂತೆ ಇನ್ನಿತರೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಗಿರಿಜನ ಹಾಡಿಗಳ ಜನರಿಗೆ ಆಸರೆಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *