Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚೀನಾ, ಇಟಲಿ, ಇರಾನಿನಲ್ಲಿ ನಾವಿಲ್ಲ, ಭಾರತದಲ್ಲಿದ್ದೇವೆ – ಸಾವು ಗೆದ್ದ ಟೆಕ್ಕಿಯ ಪತ್ನಿಯ ಮಾತು

Public TV
Last updated: March 17, 2020 8:09 pm
Public TV
Share
3 Min Read
tekki wife
SHARE

– ಆಸ್ಪತ್ರೆಯ ವೈದ್ಯರಿಗೆ, ಸಿಬ್ಬಂದಿಗೆ ಧನ್ಯವಾದ
– ಈಗ ಮತ್ತೆ ನಮಗೆ ಆತ್ಮವಿಶ್ವಾಸ ಮೂಡಿದೆ

ಬೆಂಗಳೂರು: ಇಡೀ ಜಗತ್ತೇ ಕೊರೊನಾ ವೈರಸ್‍ಗೆ ಸಿಲುಕಿ ಒದ್ದಾಡುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಆಗಿದೆ. ಆದರೆ ಈ ಹೊತ್ತಲ್ಲಿ ಕರ್ನಾಟಕದ ಮಂದಿಗೆ ಸಿಹಿಸುದ್ದಿ ಸಿಕ್ಕಿದೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ಬೆಂಗಳೂರಿನ ಕುಟುಂಬ ಕೊರೊನಾ ಜಯಿಸಿದೆ. ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಸತತ 10 ದಿನಗಳ ಚಿಕಿತ್ಸೆ ಪಡೆದ ಟೆಕ್ಕಿ ಕುಟುಂಬ ಕೊರೊನಾ ಸೋಂಕಿನಿಂದ ಪಾರಾಗಿದೆ. ತಮ್ಮ ಇಡೀ ಕುಟುಂಬವನ್ನು ಕೊರೊನಾದಿಂದ ಪಾರು ಮಾಡಿದ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ವೈದ್ಯರಿಗೆ, ನರ್ಸ್‌ಗಳಿಗೆ ಸಿಬ್ಬಂದಿಗೆ ಟೆಕ್ಕಿ ಪತ್ನಿ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ. ಇದನ್ನೂ ಓದಿ: ಮತ್ತೊಂದು ಪಾಸಿಟಿವ್ – ದುಬೈನಿಂದ ಬಂದ ಬೆಂಗ್ಳೂರಿನ ಮಹಿಳೆಗೆ ಕೊರೊನಾ

coronavirus

ಪತ್ರದಲ್ಲಿ ಏನಿದೆ?
ನಾನು ಮತ್ತು ನನ್ನ ಕುಟುಂಬ ಕೊರೊನಾ ಸೋಂಕಿತರಾಗಿ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾದ್ವಿ. ಅಂದಿನಿಂದ ನಮ್ಮನ್ನು ಐಸೋಲೇಷನ್‍ನಲ್ಲಿ ಇಟ್ಟಿದ್ದರು. ಅಂದಿನಿಂದ ನಮಗೆ ಸರ್ಕಾರಿ ಸೌಲಭ್ಯದೊಂದಿಗೆ ಚಿಕಿತ್ಸೆ ನೀಡಲಾಯಿತು. ಆಸ್ಪತ್ರೆಯಲ್ಲಿ ನಮಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಂಡರು. ನಮಗೆ ಈ ರೋಗದ ಭೀತಿಯಿಂದ ಹೊರಬರಲು ನೆರವಾದರು.

ಕೊರೊನಾ ವೈರಸ್ ಎಂಬುದು ಜನರನ್ನು ಭಯಬೀತರಾಗಿ ಮಾಡಿದೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ವೈದ್ಯರು ಪ್ರಬುದ್ಧವಾಗಿ, ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ನನ್ನ ಪತಿಗೆ ಕೊರೊನಾ ಲಕ್ಷಣಗಳು ಕಾಣಿಸಿದಾಗ ನಾನೇ ಸ್ವತಃ ಅಂಬುಲೆನ್ಸ್‌ಗೆ ಕರೆ ಮಾಡಿ ಪತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಈ ವೇಳೆ ನಾವು ಯಾವುದೇ ಸಾರ್ವಜನಿಕರು, ಸಾರ್ವಜನಿಕ ಮತ್ತು ಖಾಸಗಿ ವಾಹನಕ್ಕೆ ತೊಂದರೆ ಮಾಡಲಿಲ್ಲ.

tekki wife 1

ಆಗ ವೈದ್ಯರು, ನರ್ಸ್ ಮತ್ತು ಇತರ ಎಲ್ಲ ಸಹಾಯಕ ಸಿಬ್ಬಂದಿ ನಮ್ಮ ಬಳಿ ಬಂದರು. ನಂತರ ಸ್ಕ್ರೀನಿಂಗ್ ಸೇರಿದಂತೆ ಎಲ್ಲಾ ರೀತಿಯ ಪರೀಕ್ಷೆಗೆ ಒಳಪಡಿಸಿದರು. ವರದಿಯಲ್ಲಿ ನಮಗೆ ಪಾಸಿಟಿವ್ ಬಂದ ಬಳಿಕ ನಮ್ಮನ್ನು ಐಸೋಲೇಷನ್ ವಾರ್ಡ್‌ಗೆ ಶಿಫ್ಟ್ ಮಾಡಿದರು. ವಾರ್ಡ್‍ನಲ್ಲಿ ಶುಚಿತ್ವದೊಂದಿಗೆ ನಮಗೆ ಬೇಕಾದ ಅಗತ್ಯತೆಗಳನ್ನು ನೋಡಿಕೊಂಡರು.

ನಮಗೆ ಕೊರೊನಾ ಪಾಸಿಟಿವ್ ಬಂದ ಮೇಲೆ ನಾವು ಸಂಪರ್ಕದಲ್ಲಿದ್ದವರಿಗೂ ಸಹ ಕ್ವಾರಂಟೇನ್ ಮಾಡಲಾಯಿತು. ನನ್ನ ಪತಿಯ ಕಂಪನಿ, ಸಹೋದ್ಯೋಗಿಗಳು, ನನ್ನ ಮಗುವಿನ ಶಾಲೆ, ಸ್ನೇಹಿತರು, ಕ್ಲಾಸ್‍ಮೆಟ್ಸ್, ನನ್ನ ಸ್ನೇಹಿತರು, ನೆರೆಹೊರೆಯವರು, ಅಪಾರ್ಟ್ ಮೆಂಟ್‍ನಲ್ಲಿದ್ದವರ ಮೇಲೆ ತುಂಬಾ ಅಚ್ಚುಕಟ್ಟಾಗಿ ನಿಗಾ ವಹಿಸಲಾಯಿತು.

Corona Virus 9

ಆರೋಗ್ಯಾಧಿಕಾರಿಗಳು ನಮ್ಮ ಗುರುತು ಹೊರಗೆ ಗೊತ್ತಾಗದಂತೆ ನೋಡಿಕೊಂಡರು. ಯಾವುದೇ ಮಾಧ್ಯಮದವರು ಸಂಪರ್ಕಿಸಲು ಬಿಡಲಿಲ್ಲ. ನಮಗೆ ಅತ್ಯುತ್ತಮ ಚಿಕಿತ್ಸೆ ನೀಡಿ ಗುಣಮುಖರಾಗುವಂತೆ ಮಾಡಿದ್ದಾರೆ. ಇದು ನಮ್ಮಲ್ಲಿ ಮತ್ತೆ ಆತ್ಮವಿಶ್ವಾಸ ಮೂಡಿಸಿದೆ. ನಮಗೆ ಅತ್ಯುತ್ತಮವಾದ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್‌ಗಳು, ವೈದ್ಯಕೀಯ ಸಿಬ್ಬಂದಿ ವರ್ಗದವರ ತಾಳ್ಮೆ, ಕ್ರಮಬದ್ಧ ಚಿಕಿತ್ಸೆ, ಚಿಕಿತ್ಸೆ ನೀಡಿದ ಪರಿ ನೋಡಿ ನಮ್ಮಲ್ಲಿ ಭವಿಷ್ಯದ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚು ಮಾಡಿತು.

ನಮ್ಮನ್ನು ಚೆನ್ನಾಗಿ ನೋಡಿಕೊಂಡ ವೈದ್ಯರು, ನರ್ಸ್‌ಗಳು, ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳು, ಸರ್ಕಾರ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದ ಹೇಳುತ್ತೇನೆ. ನಮ್ಮೆಲ್ಲರನ್ನೂ ಸುರಕ್ಷಿತವಾಗಿಡಲು ಎಲ್ಲರೂ ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಚೀನಾ, ಇಟಲಿ, ಇರಾನಿನಲ್ಲಿ ನಾವಿಲ್ಲ, ನಾವು ಭಾರತದಲ್ಲಿ ಇದ್ದೇವೆ ಎಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತೇನೆ. ನಮ್ಮನ್ನು ಕೊರೊನಾ ಸೋಂಕಿನಿಂದ ಪಾರು ಮಾಡಲು ಅವರು ಪಟ್ಟ ಶ್ರಮ ಪ್ರಶಂಸನೀಯ. ನಮ್ಮ ವ್ಯವಸ್ಥೆಯಲ್ಲಿ ಎಲ್ಲವೂ ಚೆನ್ನಾಗಿದೆ ಎಂದು ಪತ್ರದಲ್ಲಿ ಬರೆದು ತಿಳಿಸಿದ್ದಾರೆ.

ಟೆಕ್ಕಿ ಮಾರ್ಚ್ 1ರಂದು ನ್ಯೂಯಾರ್ಕ್-ದುಬೈ ಮೂಲಕ ಬೆಂಗಳೂರಿಗೆ ಬಂದಿದ್ದ. ಮಾರ್ಚ್ 8ರಂದು ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಕೂಡಲೇ ಆತನನ್ನು ಮತ್ತು ಆತನ ಪತ್ನಿ ಮತ್ತು ಪುತ್ರಿಯನ್ನು ರಾಜೀವ್ ಗಾಂಧಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್‍ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. 20 ತಜ್ಞ ವೈದ್ಯರು, 60 ದಾದಿಯರು ಹಗಲಿರುಳೆನ್ನದೇ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ.

TAGGED:bengaluruCorona VirusdoctorgovernmenthospitalletterPublic TVtechietechie WifeThanksಆಸ್ಪತ್ರೆಕೊರೊನಾ ವೈರಸ್ಟೆಕ್ಕಿಟೆಕ್ಕಿ ಪತ್ನಿಧನ್ಯವಾದಪತ್ರಪಬ್ಲಿಕ್ ಟಿವಿಬೆಂಗಳೂರುವೈದ್ಯರುಸರ್ಕಾರ
Share This Article
Facebook Whatsapp Whatsapp Telegram

Cinema Updates

disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
10 minutes ago
Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
1 hour ago
sreeleela 4
ಬಾಲಿವುಡ್ ನಟನೊಂದಿಗೆ ಮದುವೆಗೆ ರೆಡಿಯಾದ್ರಾ ಶ್ರೀಲೀಲಾ?- ಅರಿಶಿಣ ಶಾಸ್ತ್ರದ ಫೋಟೋ ವೈರಲ್
1 hour ago
shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
2 hours ago

You Might Also Like

CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
6 minutes ago
japan
Latest

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

Public TV
By Public TV
29 minutes ago
tumakuru outrage erupts against hemavati express link canal project work temporarily halted
Districts

ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

Public TV
By Public TV
31 minutes ago
Shashi Tharoor 3
Latest

ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು

Public TV
By Public TV
41 minutes ago
Narendra Modi 5
Latest

ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

Public TV
By Public TV
1 hour ago
pune law student
Crime

‘ಆಪರೇಷನ್‌ ಸಿಂಧೂರ’ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ – ಪುಣೆ ಕಾನೂನು ವಿದ್ಯಾರ್ಥಿನಿ ಬಂಧನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?