ಹೋಮ್ ಕ್ವಾರೆಂಟೈನ್‍ನಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

Public TV
1 Min Read
HSN SUICIDE

ಹಾಸನ: ಮುನ್ನೆಚ್ಚರಿಕಾ ಕ್ರಮವಾಗಿ 14 ದಿನ ಮನೆಯಲ್ಲೇ ಇರಲು ತಿಳಿಸಿದ್ದ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ.

ಯುಗಾದಿ ಹಬ್ಬಕ್ಕೆ ಮುಂಬೈನಿಂದ ಹುಟ್ಟೂರಿಗೆ ಬಂದಿದ್ದ 35 ವರ್ಷದ ವ್ಯಕ್ತಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೊರರಾಜ್ಯದಿಂದ ಬಂದಿದ್ದರಿಂದ ಆತನಿಗೆ 14 ದಿನ ಮನೆಯಲ್ಲೇ ಇರಲು ಆರೋಗ್ಯ ಇಲಾಖೆ ಅಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದರು. ಆತ ಅಸ್ತಮಾ ಮತ್ತು ಕಿಡ್ನಿ ಸಮಸ್ಯೆಯಿಂದಲೂ ಬಳಲುತ್ತಿದ್ದ ಎಂದು ಹೇಳಲಾಗುತ್ತಿದೆ.

vlcsnap 2020 03 29 12h46m12s614

ಇಂದು ವ್ಯಕ್ತಿ ಮನನೊಂದು ನೇಣಿಗೆ ಶರಣಾಗಿದ್ದಾನೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದ್ದಾರೆ. ಅಲ್ಲದೇ ವೈದ್ಯರು ಬರುವವರೆಗೂ ಮೃತದೇಹದ ಬಳಿ ಹೋಗದಂತೆ ಸಂಬಂಧಿಕರಿಗೆ ಪೊಲೀಸರ ಸೂಚನೆ ನೀಡಿದ್ದಾರೆ.

ಶ್ರವಣಬೆಳಗೊಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *