ಹೂತಿಟ್ಟ ಶವದ ತಲೆಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು

Public TV
1 Min Read
NML CORPS

ಬೆಂಗಳೂರು: ಒಂದು ತಿಂಗಳ ಹಿಂದೆ ಸಾವನ್ನಪ್ಪಿದ್ದ ವ್ಯಕ್ತಿಯ ಹೂತಿಟ್ಟ ಶವದ ತಲೆಯನ್ನ ಮಾಟ ಮಂತ್ರ ಮಾಡುವ ಮಾಂತ್ರಿಕರು ಹೊರತೆಗೆದಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಕೆರೆಯ ಸ್ಮಶಾನದಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಅರಸಯ್ಯ ಎಂಬವರ ದೇಹದ ತಲೆ ಭಾಗವನ್ನು ದುಷ್ಕರ್ಮಿಗಳು ಮಂಗಳವಾರ ರಾತ್ರಿ ವೇಳೆ ಪೂಜೆಯ ನೆಪದಲ್ಲಿ ಮಾಟಮಂತ್ರವನ್ನ ಮಾಡಿ ಹೊರ ತೆಗೆದಿದ್ದಾರೆ.

vlcsnap 2019 03 06 11h29m38s85

ಕೆಲ ದಿನಗಳ ಹಿಂದೆ ಒಂದು ತಿಂಗಳ ತಿಥಿ ಕಾರ್ಯವನ್ನು ಕುಟುಂಬದವರು ಕೈಗೊಂಡ, ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ ಎಂದು ಅರಸಯ್ಯನವರ ಕುಟುಂಬದವರು ಹೇಳುತ್ತಿದ್ದಾರೆ. ಶತಮಾನದ ಹಳೆಯದಾದ ಸ್ಮಶಾನದಲ್ಲಿ ಈ ರೀತಿಯ ಘಟನೆ ಈ ಹಿಂದೆ ಎಂದೂ ಕೂಡ ನಡೆದಿರಲಿಲ್ಲ, ಇದೀಗ ಈ ಘಟನೆ ನಡೆದಿರುವುದು ಗ್ರಾಮಸ್ಥರಲ್ಲೂ ಭಯದ ಜೊತೆಗೆ ಆತಂಕವನ್ನು ಸೃಷ್ಟಿಸಿದೆ ಎಂದು ಇಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ.

ಈ ಘಟನೆ ನೆಲಮಂಗಲ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *