ರಾಮನಗರ: ಲಂಚ ಪ್ರಕರಣದ (Corruption Case) ಆರೋಪ ಹೊತ್ತಿರುವ ಮಾಗಡಿ (Magadi) ತಹಶೀಲ್ದಾರ್ (Tahsildar) ಶ್ರೀನಿವಾಸ್ ಪ್ರಸಾದ್ (Srinivasa Prasad) ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ.
ಮೊಬೈಲ್ ಸ್ವಿಚ್ ಆಫ್ ಆಗಿದ್ದು, ವಾಟ್ಸಪ್ನಿಂದಲೂ ಕಣ್ಮರೆಯಾಗಿದ್ದಾರೆ. ಜನವರಿ 3 ರಂದು ಮಾಗಡಿಯ ತಾಲೂಕು ಕಚೇರಿಯಲ್ಲಿ ಮಧ್ಯವರ್ತಿಯಾಗಿದ್ದ ಮಂಜುನಾಥ್ ಎಂಬಾತ ಸಾರ್ವಜನಿಕರೊಬ್ಬರಿಂದ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 20 ಸಾವಿರ ಹಣವನ್ನು ಪಡೆದುಕೊಂಡಿದ್ದ. ಉಳಿದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನೂ ಓದಿ: ಕೆಳ ಮನೆಯಲ್ಲಿದ್ದ ವಿವಾಹಿತೆ, ಮೇಲಿನ ಮನೆಯಲ್ಲಿದ್ದ ವಿವಾಹಿತನ ಜೊತೆಗೆ ಎಸ್ಕೇಪ್!
ತಾಲೂಕು ಕಚೇರಿ ಆವರಣದಲ್ಲಿಯೇ ಈ ಘಟನೆ ನಡೆದಿತ್ತು. ಹೀಗಾಗಿ ಅಂದೇ ತಹಶೀಲ್ದಾರ್ ಹೇಳಿಕೆಯನ್ನು ಪಡೆದು, ದೂರವಾಣಿ ಮೂಲಕ ಮಾತನಾಡಿದ್ದರು. ಅಂದಿನಿಂದ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿರುವ ತಹಶೀಲ್ದಾರ್ ಈವರೆಗೂ ಪತ್ತೆಯಾಗಿಲ್ಲ. ತಹಸೀಲ್ದಾರ್ರನ್ನು ಎ2 ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿದೆ.
ಜ.3ರ ಸಂಜೆ ವಾಟ್ಸಪ್ ಮೂಲಕ ರಾಮನಗರ ಜಿಲ್ಲಾಕಾರಿಗಳಿಗೆ ರಜೆ ಬೇಕು ಎಂದು ಮೆಸೇಜ್ ಮಾಡಿದ್ದಾರೆ. ಆದರೆ ತಹಶೀಲ್ದಾರ್ಗೆ ರಜೆ ಮಂಜೂರಾಗಿಲ್ಲ. ಅನೇಕ ಬಾರಿ ಅಧಿಕಾರಿಗಳು ಕರೆಗೆ ಪ್ರಯತ್ನಿಸಿದರೂ ತಹಶೀಲ್ದಾರ್ ಸಂಪರ್ಕಕ್ಕೆ ಸಿಕ್ಕಿಲ್ಲ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k