ದುಷ್ಕರ್ಮಿಗಳಿಂದ ಜಮೀನಿನಲ್ಲಿದ್ದ ಹತ್ತಿ ಬೆಳೆ ನಾಶ

Public TV
1 Min Read
COTTON CROP

ಹಾವೇರಿ: ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು ದುಷ್ಕರ್ಮಿಗಳು ನಾಶ ಮಾಡಿದ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಲ್ಲೂರು ಗ್ರಾಮದ ರುದ್ರಪ್ಪ ಹರಿಜನ ಮತ್ತು ಹನುಮಂತಪ್ಪ ಸಂಜೀವಪ್ಪ ಎಂಬವರಿಗೆ ಸೇರಿದ್ದ ಜಮೀನಿನ ಮೇಲೆ ದುಷ್ಕರ್ಮಿಗಳ ದಾಳಿ ಮಾಡಿ ಹೋಗಿದ್ದಾರೆ.

ಇಬ್ಬರು ರೈತರು ತಮ್ಮ 3 ಎಕರೆ ಜಮೀನಿನಲ್ಲಿ ಹತ್ತಿ ಬೆಳೆ ಬೆಳೆಯನ್ನು ಬೆಳೆದಿದ್ದರು. ಆದರೆ ಇಂದು ಹತ್ತಿ ಬೆಳೆಯನ್ನು ದುಷ್ಕರ್ಮಿಗಳು ಯಾರೂ ಇಲ್ಲದ ವೇಳೆ ಜಮೀನಿಗೆ ನುಗ್ಗಿ  ಬೆಳೆಯನ್ನು ನಾಶಮಾಡಿ ಹೋಗಿದ್ದಾರೆ.

ಘಟನೆಯಿಂದ ರೈತರ ಕುಟುಂಬಗಳು ಕಂಗಲಾಗಿದ್ದು, ಕುಟುಂಬದ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಘಟನೆ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *