ಹೊಸ ವರ್ಷದಂದೇ ನಡುರಸ್ತೆಯಲ್ಲಿ ಹೊತ್ತಿ ಉರಿದ ಹತ್ತಿ ತುಂಬಿದ ಲಾರಿ!

Public TV
0 Min Read
RCR 6

ರಾಯಚೂರು: ಎಲ್ಲೆಡೆ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ರೆ ಕೊಪ್ಪಳದ ಮುನಿರಾಬಾದ್ -ಹೊಸಪೇಟೆ ಮಧ್ಯದ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಭಸ್ಮವಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಯಚೂರಿನಿಂದ ದಾವಣಗೆರೆ ಮಾರ್ಗದಲ್ಲಿ ಹೊರಟಿದ್ದ ಹತ್ತಿ ತುಂಬಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಲಾರಿ ವೇಗವಾಗಿ ಚಲಿಸುತ್ತಿದ್ದರಿಂದ ಬೆಂಕಿ ಎಲ್ಲೆಡೆ ಹಬ್ಬಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

RCR 2

ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಡುರಸ್ತೆಯಲ್ಲೆ ಲಾರಿ ಹೊತ್ತಿ ಉರಿದಿದ್ದರಿಂದ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ಥವಾಗಿತ್ತು.

RCR 1

RCR 3

RCR 4

RCR 5

Share This Article
Leave a Comment

Leave a Reply

Your email address will not be published. Required fields are marked *