Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲಗಾರರ ಕಾಟ ತಾಳಲಾರದೆ ಕೊಲೆಯಾಗಿದೆ ಎಂದು ಬಿಂಬಿಸಿ ಗೋವಾಗೆ ಟೂರ್ ಹೋದ ಆಸಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಾಲಗಾರರ ಕಾಟ ತಾಳಲಾರದೆ ಕೊಲೆಯಾಗಿದೆ ಎಂದು ಬಿಂಬಿಸಿ ಗೋವಾಗೆ ಟೂರ್ ಹೋದ ಆಸಾಮಿ

Districts

ಸಾಲಗಾರರ ಕಾಟ ತಾಳಲಾರದೆ ಕೊಲೆಯಾಗಿದೆ ಎಂದು ಬಿಂಬಿಸಿ ಗೋವಾಗೆ ಟೂರ್ ಹೋದ ಆಸಾಮಿ

Public TV
Last updated: September 14, 2022 12:22 pm
Public TV
Share
3 Min Read
MANDYA MURDER CASE copy
SHARE

ಮಂಡ್ಯ: ಮನಶಾಂತಿಗೆ ಅಥವಾ ಏಂಜಾಯ್ ಮಾಡುವ ದೃಷ್ಟಿಯಿಂದ ಜನ ಟೂರ್ (Tour)  ಪ್ಲಾನ್ ಮಾಡಿ ಟೂರ್‌ಗೆ ಹೋಗ್ತಾರೆ. ಆದ್ರೆ ಇಲ್ಲೊಬ್ಬ ಸಾಲಗಾರರ ಕಾಟ ತಾಳಲಾರದೆ ತನ್ನನ್ನು ಯಾರೋ ಕೊಲೆ ಮಾಡಿದ್ದಾರೆಂದು ಊರಲ್ಲಿ ಬಿಂಬಿಸಿ ಗೋವಾ (Goa) ಟೂರ್‌ಗೆ ಹೋಗಿದ್ದಾನೆ.

Goa

ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ ನಿವಾಸಿ ಮನು, ಫೈನಾನ್ಸ್ (Financier) ವ್ಯವಹಾರ ನಡೆಸಿಕೊಂಡು ಚೆನ್ನಾಗಿ ಜೀವನ ಮಾಡ್ತಾ ಇದ್ದ. ಅದ್ಯಾಕೋ ಏನೋ ಕೆಲವರ ಬಳಿ ಒಂದಷ್ಟು ಸಾಲವನ್ನು ಸಹ ಮಾಡಿದ್ದ. ಸಾಲಕೊಟ್ಟವರು ಸಾಲ ಮರುಪಾವತಿ ಮಾಡುವಂತೆ ಪದೇ ಪದೇ ಕೇಳ್ತಾನೆ ಇದ್ರು. ಇತನು ಸಹ ತಾನು ಫೈನಾನ್ಸ್ ನೀಡಿರುವ ಜನರ ಬಳಿ ಹಣ ಕೊಡುವಂತೆಯೂ ಸಹ ಕೇಳ್ತಾ ಇದ್ದ, ಆದ್ರೆ ಅವರು ಹಣವವನ್ನು ಮರುಪಾವತಿ ಮಾಡುತ್ತಿರಲಿಲ್ಲ. ಇತ್ತ ಸಾಲ ಕೊಟ್ಟವರು ಸಾಲ ಕೊಡುವಂತೆ ಕಾಟ ಕೊಡ್ತಾ ಇದ್ರು. ಈ ಎರಡು ಕಾಟದಿಂದ ತಪ್ಪಿಸಿಕೊಳ್ಳಲು ಈ ಮನು ಮಾಡಿದ್ದ ಮಾಸ್ಟರ್ ಪ್ಲಾನ್ ಕೇಳಿದ್ರೆ ಎಂಥವರು ಸಹ ದಿಗಿಲು ಬೀಳುವುದು ಗ್ಯಾರಂಟಿ. ಇದನ್ನೂ ಓದಿ: ಗೋವಾದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್ – ಇಂದು 8 ʼಕೈʼ ಶಾಸಕರು ಬಿಜೆಪಿ ಸೇರ್ಪಡೆ

Goa 3

ಸಾಲಗಾರರಿಂದ ತಪ್ಪಿಸಿಕೊಳ್ಳಲು ಮನು ಕಳೆದ ತಿಂಗಳು ಆಗಸ್ಟ್ 12 ರಂದು ಚೊಟ್ಟನಹಳ್ಳಿ ಗ್ರಾಮದಲ್ಲಿ ನಡೆದ ಗುಡ್ಡಹಬ್ಬದಂದು ಒಂದು ಪ್ಲಾನ್ ಮಾಡ್ತಾನೆ. ಅಂದು ಗುಡ್ಡದ ಪೂಜೆ ಮುಗಿಸಿ ಹಬ್ಬದಲ್ಲಿ ರಾತ್ರಿ 12 ಗಂಟೆಯ ವರೆಗೆ ಇದ್ದು, ನಂತರ ಮನೆಗೆ ಹೋಗಿ ಅಲ್ಲಿ ತನ್ನ ಮೊಬೈಲ್‍ನನ್ನು ಚಚ್ಚಿ ಹಾಕುತ್ತಾನೆ. ನಂತರ ತಾನು ಹಾಕಿದ್ದ ವಿಗ್‍ನ್ನು ಕಿತ್ತು ಹಾಕಿ ಅಲ್ಲಲ್ಲಿ ಕೋಳಿ ರಕ್ತವನ್ನು ಸಿಂಪಡಿಸುತ್ತಾನೆ. ಇದಾದ ನಂತರ ಅದೇ ಊರಲ್ಲಿ ಇರುವ ಕಾಲುವೆಯ ಬಳಿ ತನ್ನ ಚಪ್ಪಲಿಗಳನ್ನು ಅನುಮಾನ ಬರುವ ರೀತಿಯಲ್ಲಿ ಬಿಟ್ಟು ಶಿಫ್ಟ್ ಕಾರನ್ನು ಬಾಡಿಗೆ ಪಡೆದು ಬೆಂಗಳೂರಿಗೆ ಹೋಗಿ ಅಲ್ಲಿಂದ ಗೋವಾಗೆ ತೆರಳುತ್ತಾನೆ. ಇದನ್ನೂ ಓದಿ: ಗಂಡು ಮರಿಗೆ ಜನ್ಮ ನೀಡಿದ ಗಜಪಡೆಯ ಸದಸ್ಯೆ ಲಕ್ಷ್ಮಿ

ಅತ್ತ ಮನು ಸಾಲಗಾರರಿಂದ ತಪ್ಪಿಸಿಕೊಂಡು ಗೋವಾದಲ್ಲಿ ಟೂರ್ ಮಾಡಿಕೊಂಡು ಏಂಜಾಯ್ ಮಾಡ್ತಾ ಇರುತ್ತಾನೆ. ಇತ್ತ ಮನು ಪೋಷಕರು ಊರಿನಲ್ಲಿ ನಡೆದಿದ್ದ ಸೀನ್ ನೋಡಿ ಮನುನನ್ನು ಕೊಲೆ ಮಾಡಿ ಕಾಲುವೆಗೆ ಎಸೆದಿದ್ದಾರೆ ಎಂದು ತಿಳಿದು ಕಣ್ಣೀರು ಹಾಕುತ್ತಾರೆ. ಇದೇ ವೇಳೆ ಒಂದು ಆಡಿಯೋ ಸಹ ವೈರಲ್ ಆಗಿರುತ್ತೆ, ಆ ಆಡಿಯೋದಲ್ಲಿ ಮನು ಸುಪ್ರಿಯಾ ಎಂಬಾಕೆಗೆ 8 ಲಕ್ಷ ಹಣವನ್ನು ಸಾಲವಾಗಿ ನೀಡಿದ್ದು, ಇದಕ್ಕೆ ಪೂರಕವಾದ ಡಾಕ್ಯುಮೆಂಟ್‍ನ್ನು ಸುಪ್ರಿಯಾಳಿಂದ ಮನು ಪಡೆದಿರುತ್ತಾನೆ. ಯಾರೋ ಒಬ್ಬ ಅವಳ ಡಾಕ್ಯುಮೆಂಟ್ ಕೊಡು ದುಡ್ಡು ಆ ಮೇಲೆ ಕೋಡ್ತಾಳೆ. ನೀನು ಕೊಡಲ್ಲ ಅಂದ್ರೆ ಸಲಗ ಸಿನಿಮಾ ಸ್ಟೈಲ್‍ನಲ್ಲಿ ಕೊಲೆ ಆಗ್ತೀಯಾ ಎಂದು ಬೆದರಿಕೆ ಸಹ ಹಾಕಿರುತ್ತಾನೆ. ಈ ಆಡಿಯೋ ಕೇಳಿದ ಮನು ಪೋಷಕರಿಗೆ ತನ್ನ ಮಗನಿಗೆ ಏನೋ ಮಾಡಿದ್ದಾರೆ ಎನ್ನುವುದು ಅನುಮಾನ ಬರುತ್ತೆ. ನಂತರ ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಗೆ ದೂರನ್ನು ಸಹ ನೀಡ್ತಾರೆ.

ಪ್ರಕರಣವನ್ನು ದಾಖಲು ಮಾಡಿಕೊಂಡ ಪೊಲೀಸರಿಗೆ ಆರಂಭದಲ್ಲಿ ಅನೇಕ ಗೊಂದಲಗಳು ಕಾಡುತ್ತವೆ. ಈ ಸಂಬಂದ ಹಲವು ಮಂದಿಯನ್ನು ಕರೆತಂದು ವಿಚಾರಣೆ ಮಾಡಿದ್ರು ಏನು ಆಗಿದೆ ಎಂದು ಪೊಲೀಸರಿಗೆ ತಿಳಿಯುವುದಿಲ್ಲ. ಇದಾದ ಸ್ವಲ್ಪ ದಿನಗಳ ನಂತರ ಮನು ಬೆಂಗಳೂರಿನ ಪಿಜಿ ಒಂದರಲ್ಲಿ ಇದ್ದಾನೆ ಎಂದು ಪೊಲೀಸರಿಗೆ ತಿಳಿಯುತ್ತದೆ. ಬಳಿಕ ಮನುನನ್ನು ಕರೆತಂದು ವಿಚಾರಣೆ ಮಾಡಿದಾಗ ಮಿಸ್ಸಿಂಗ್ ಮಿಸ್ಟರಿ ಜೊತೆ ತಾನು ಮಾಡಿದ್ದ ಡ್ರಾಮಾದ ಕಥೆ ಬೆಳಕಿಗೆ ಬಂದಿದೆ. ಇತ್ತ ಸಾಲಗಾರರ ಕಾಟ ತಾಳಲಾರದೆ ಕಿಡ್ನಾಪ್ ಅಥವಾ ಮರ್ಡರ್‌ನ ಡ್ರಾಮಾ ಮಾಡಿದ ವಿಚಿತ್ರ ಕೇಸ್‍ನ್ನು ಭೇದಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Financiergoamanmandyaಗೋವಾಪ್ರವಾಸಮಂಡ್ಯಸಾಲಗಾರ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
14 minutes ago
IPL 2026
Bengaluru City

ಮೇ 31 ರಂದು ಬೆಂಗಳೂರಲ್ಲೇ ಐಪಿಎಲ್‌ ಫೈನಲ್‌ – 2ನೇ ಹಂತದ ವೇಳಾಪಟ್ಟಿ ರಿಲೀಸ್‌

Public TV
By Public TV
14 minutes ago
ಸಾಂದರ್ಭಿಕ ಚಿತ್ರ
Bagalkot

1,700 ರೂ. ಸಿಲಿಂಡರ್ 3,600ಕ್ಕೆ ಮಾರಾಟ – ವಾಣಿಜ್ಯ ಗ್ಯಾಸ್ ಅಭಾವ; ಹೋಟೆಲ್ ಮಾಲೀಕರು ಹೈರಾಣು

Public TV
By Public TV
33 minutes ago
daily horoscope dina bhavishya
Astrology

ದಿನ ಭವಿಷ್ಯ: 27-03-2026

Public TV
By Public TV
55 minutes ago
KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
9 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?