ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ ಎಂಬ ವಿಚಾರ ಪಕ್ಷದ ಒಳಗೆ ಗುಸು ಗುಸು ಚರ್ಚೆ ಶುರುವಾಗಿದೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಮೂರು ಶಕ್ತಿ.. ಸ್ತ್ರೀಶಕ್ತಿ ಅಸ್ತ್ರ್ರ ಪ್ರಯೋಗಿಸುತ್ತಾ ಎಂಬ ಪ್ರಶ್ನೆ ಎದ್ದಿದೆ.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನೂ ಎದುರಿಸಬೇಕು. ಸ್ವಪಕ್ಷೀಯ ಬಣಗಳ ಕಿತ್ತಾಟಕ್ಕೂ ಬ್ರೇಕ್ ಹಾಕಬೇಕು. ಈ ಸಂಬಂಧ ಎಕ್ಸ್ಕ್ಲೂಸಿವ್ ಸುದ್ದಿಯೊಂದು ನಿಮ್ಮ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಡಿಕೆಶಿ ವಾರ್ನಿಂಗ್ಗೂ ಡೋಂಟ್ಕೇರ್- ಸಚಿವ ಆಕಾಂಕ್ಷಿಗಳಿಂದ ಬದಲಾವಣೆ ಚರ್ಚೆ
ಮಂಗಳವಾರ ಅಥವಾ ಬುಧವಾರದ ಒಳಗೆ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಗೆ ಬಂದಿದೆ. ಹಿಂದುತ್ವ ಫೈರ್ ಬ್ರ್ಯಾಂಡ್, ಮಹಿಳಾ ಮತದಾರರ ಚಿತ್ತ, ಒಕ್ಕಲಿಗ ಅಸ್ತ್ರ ಪ್ರಯೋಗವಾಗಲಿದೆ ಎನ್ನಲಾಗಿದ್ದು, ಒಟ್ಟಿನಲ್ಲಿ ಸಿದ್ದರಾಮಯ್ಯ, ಡಿಕೆಶಿಯನ್ನ ಎದುರಿಸಬಲ್ಲ ಸ್ತ್ರೀಶಕ್ತಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಮೆಗಾ ಪ್ಲಾನ್ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
Web Stories