Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್ ಓಪನ್ – ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್ ಓಪನ್ – ವಿಜಯೇಂದ್ರ

Bengaluru City

ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್ ಓಪನ್ – ವಿಜಯೇಂದ್ರ

Public TV
Last updated: June 24, 2025 4:14 pm
Public TV
Share
4 Min Read
BY Vijayendra 1
SHARE

-ಏಜೆಂಟರ ಮೂಲಕ ಸರ್ಕಾರ ಕಮಿಷನ್ ಮಾಫಿಯಾ ನಡೆಸುತ್ತಿದೆ ಎಂದು ಆರೋಪ

ಬೆಂಗಳೂರು: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್‌ಗಳನ್ನು ತೆರೆಯಲಾಗಿದೆ. ಸಚಿವಾಲಯದಿಂದ ಗ್ರಾಮ ಪಂಚಾಯಿತಿ ಕಚೇರಿವರೆಗೂ ಲಂಚ ಇಲ್ಲದೆ ಕೆಲಸ, ಕಾರ್ಯಗಳು ನಡೆಯುವುದಕ್ಕೆ ಸಾಧ್ಯವಿಲ್ಲ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದರು.

ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರ ಕಮಿಷನ್ ಮಾಫಿಯಾಗೆ ಬೆಂಬಲ ಕೊಡುತ್ತಿದೆ. ಸರ್ಕಾರ ಏಜೆಂಟರ ಮೂಲಕ ಕಮಿಷನ್ ಮಾಫಿಯಾ ನಡೆಸುತ್ತಿದೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಏಕೈಕ ಕಾರಣಕ್ಕೆ ಸಿದ್ದರಾಮಯ್ಯನವರು ಇದೆಲ್ಲವನ್ನೂ ನೋಡಿ, ಕಣ್ಮುಚ್ಚಿ ಕುಳಿತಿದ್ದಾರೆ ಎಂದರು.ಇದನ್ನೂ ಓದಿ: ಫಸ್ಟ್ ಲವ್ ಬಿಚ್ಚಿಟ್ಟ ನಟಿ ರಶ್ಮಿಕಾ ಮಂದಣ್ಣ

ಸಚಿವ ಕೃಷ್ಣಬೈರೇಗೌಡರು ಅಧಿಕಾರಿಗಳ ಸಭೆ ಮುಗಿಸಿ, ಯಾಕೆ ಹೊಟ್ಟೆ ಉರಿಸ್ತೀರಿ. ನಿಮ್ಮ ರೇಟ್ ಲಿಸ್ಟನ್ನೇ ಹಾಕಿ ಎಂದು ಹೇಳಿಕೆ ಕೊಟ್ಟಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರು ಬಾದಾಮಿಯಲ್ಲಿ ಈಗಷ್ಟೇ ಹೇಳಿಕೆ ನೀಡಿ, ಸಿದ್ದರಾಮಯ್ಯ ಅವರ ಹತ್ರ ಕಾಸಿಲ್ಲ, ದಯವಿಟ್ಟು ಹಣ ಕೇಳಲು ಬರಬೇಡಿ ಎಂದು ತಿಳಿಸಿದರು. ಬೊಕ್ಕಸದಲ್ಲಿ ಹಣ ಇಲ್ಲ ಎಂಬ ಸಂದೇಶವನ್ನು ರಾಜ್ಯದ ಮುಖ್ಯಮಂತ್ರಿಗಳು ಗೃಹ ಸಚಿವರ ಮೂಲಕ ಕಾಂಗ್ರೆಸ್ ಶಾಸಕರಿಗೆ ತಿಳಿಸಿದಂತಿದೆ. ಶಾಸಕರು ಅನುದಾನ ಕೇಳಬೇಡಿ ಎಂದಿರುವಂತಿದೆ ಎಂದು ಹೇಳಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಕಮಿಷನ್ ಮಾಫಿಯಾಗಳ ಮೂಲಕ ಆಡಳಿತ ನಡೆಸುತ್ತಿದೆ, ಮುಖ್ಯಮಂತ್ರಿ @siddaramaiah ನವರು ತಮ್ಮ ಕುರ್ಚಿ ಉಳಿಸಿಕೊಳ್ಳುವುದನ್ನೇ ಗುರಿಯಾಗಿಸಿಕೊಂಡು ಎಲ್ಲವನ್ನೂ ನೋಡಿಕೊಂಡು ಕಣ್ಣು ಮುಚ್ಚಿ ಕುಳಿತಿದ್ದಾರೆ. ರಾಜ್ಯವನ್ನು ಲೂಟಿ ಮಾಡುತ್ತಿರುವ ಕಾರಣ ಲಂಚವಿಲ್ಲದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಮುಖ್ಯಮಂತ್ರಿಗಳು… pic.twitter.com/AJUtABB9wO

— Vijayendra Yediyurappa (@BYVijayendra) June 24, 2025

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ದಾಖಲೆ ಮುರಿಯಬೇಕು. ಇವರು ದೇವರಾಜ ಅರಸು ಅವರ ದಾಖಲೆ ಮುರಿಯುವುದಕ್ಕೋಸ್ಕರ ರಾಜ್ಯವನ್ನು ಲೂಟಿ ಮಾಡಿ, ಯಾವುದೇ ಅಭಿವೃದ್ಧಿ ಕಾರ್ಯಗಳು ಇಲ್ಲದೇ, ಲಂಚ ಇಲ್ಲದೇ ಯಾವುದೇ ಕೆಲಸ ಕಾರ್ಯ ಆಗುತ್ತಿಲ್ಲ. ಅಂದರೆ ಈ ರಾಜ್ಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಸಂಪೂರ್ಣ ಹಿಡಿತವನ್ನು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.ಇದನ್ನೂ ಓದಿ: PublicTV Explainer: ಫಾಸ್ಟ್ಯಾಗ್ 3,000 ರೂ. ವಾರ್ಷಿಕ ಪಾಸ್‌ – ನಿಮಗೆ ಲಾಭನಾ, ನಷ್ಟನಾ?

ಲಂಚ ಸಂಗ್ರಹಕ್ಕೆ ಮುಖ್ಯಮಂತ್ರಿಗಳೇ ಔಟ್‌ಸೋರ್ಸ್ ನೀಡಿದ್ದಾರೆ. ಬಿ.ಆರ್.ಪಾಟೀಲ್‌ರ ಆರೋಪದ ಬಳಿಕವೂ ಮುಖ್ಯಮಂತ್ರಿಗಳು ಜಮೀರ್ ಅಹ್ಮದ್ ಅವರ ರಾಜೀನಾಮೆ ಪಡೆದಿಲ್ಲ. ಆದರೆ, ಅದೇನೂ ದೊಡ್ಡ ವಿಚಾರವಲ್ಲ. ಭ್ರಷ್ಟಾಚಾರದ ಬಗ್ಗೆ ಸರ್ಕಾರವನ್ನು ದೂಷಿಸುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇದು ಜವಾಬ್ದಾರಿಯುತ ಗೃಹ ಸಚಿವರ ಹೇಳಿಕೆಯೇ ಎಂದು ಕೇಳಿದರು. ಎಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬೆಂಗಳೂರಿನಲ್ಲಿ ಹೊಸ ಮನೆ ನಿರ್ಮಾಣ ಮುಗಿದರೂ ಎನ್‌ಒಸಿ ಸಿಗುತ್ತಿಲ್ಲ. ಜನರೇಟರ್ ಇಟ್ಟುಕೊಂಡು ಗೃಹಪ್ರವೇಶ ಮಾಡುತ್ತಿದ್ದಾರೆ. ಇದು ರಾಜ್ಯದ ಪರಿಸ್ಥಿತಿ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ಆಡಳಿತ ಪಕ್ಷದ ಶಾಸಕರಲ್ಲೇ ಬಹುದೊಡ್ಡ ಹತಾಶೆ ಕಾಣುತ್ತಿದೆ. ಮುಖ್ಯಮಂತ್ರಿಗಳ ಆತ್ಮೀಯರಾದ ಹಿರಿಯ ಶಾಸಕ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯ ಹಗರಣ, ಬಡವರಿಗೆ ಮನೆ ಕೊಡಲು ಲಂಚ ಇಲ್ಲದೇ ಮನೆ ಮಂಜೂರಾಗದ ಕುರಿತು ತಿಳಿಸಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಮನೆ ಹಂಚಿಕೆಯಲ್ಲಿ ಆಗಿರುವ ಅಕ್ರಮದ ಆರೋಪದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಗೋಲ್ಮಾಲ್‌ಗಳ ಕುರಿತು ಸದ್ಯವೇ ಇನ್ನಷ್ಟು ಶಾಸಕರು ಮಾತನಾಡಲಿದ್ದಾರೆ ಎಂದು ಬಿ.ಆರ್.ಪಾಟೀಲ್ ಹೇಳಿದ್ದಾರೆ. ಸ್ವತಃ ನಾಗೇಂದ್ರ ಅವರ ರಾಜೀನಾಮೆಗೆ ಕಾರಣವಾದ 150-160 ಕೋಟಿ ರೂ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮಾಡಿತ್ತು. ತೆಲಂಗಾಣಕ್ಕೆ ಹಣ ಕಳಿಸಲಾಗಿತ್ತು. ಇವರು ಲೂಟಿ ಮಾಡಿದ್ದಕ್ಕೆ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬಲಿಪಶು ಆಗಿದ್ದರು ಎಂದು ವಿವರಿಸಿದರು.

ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳೇ ಆರೋಪಿ ಸ್ಥಾನದಲ್ಲಿದ್ದರು. ಹಗರಣ ಆಗಿಲ್ಲವೆಂದು ಹೇಳಿದ್ದ ಸಿದ್ದರಾಮಯ್ಯನವರು 14 ನಿವೇಶನ ಹಿಂದಿರುಗಿಸಿದ್ದರು. ಬಿಜೆಪಿ ಹೋರಾಟ, ಜನಾಕ್ರೋಶ ಯಾತ್ರೆ ಮಾಡಿದಾಗ ಸಿದ್ದರಾಮಯ್ಯ ಮತ್ತು ಅವರ ಮಂತ್ರಿಮಂಡಲದ ಸದಸ್ಯರು ಬಹಳ ಹಗುರವಾಗಿ ಮಾತನಾಡಿದ್ದರು. ಬಿಜೆಪಿಯವರಿಗೆ ಕೆಲಸ ಇಲ್ಲ. ಗ್ಯಾರಂಟಿಗಳ ಜನಪ್ರಿಯತೆ ಸಹಿಸಲಾಗದೆ ಬೀದಿಗಿಳಿದು ಹೋರಾಟ ಮಾಡಿದ್ದಾರೆ ಎಂದಿದ್ದರು ಎಂದು ಟೀಕಿಸಿದರು.

ಸಿದ್ದರಾಮಯ್ಯನವರೇ ಬಿ.ಆರ್.ಪಾಟೀಲ್, ರಾಜು ಕಾಗೆ, ಗೋಪಾಲಕೃಷ್ಣ ಅವರ ಹೇಳಿಕೆಗೆ ನಿಮ್ಮ ಉತ್ತರ ಏನು? ರಾಜ್ಯದ ಜನರಿಗೆ ಸಿದ್ದರಾಮಯ್ಯನವರು ಉತ್ತರಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: `ಕೈ’ ಕಂಪನ ಸಂಕಟ: 2 ವರ್ಷ ಗ್ಯಾರಂಟಿ ಪಿರಿಯೆಡ್, ವೇಯ್ಟಿಂಗ್ ಪಿರಿಯೆಡ್ ಮುಗಿತು, ಇನ್ನೇನಿದ್ರೂ ಫೈಟಿಂಗ್ ಪಿರಿಯೆಡ್!

ಮತ್ತೊಬ್ಬ ಹಿರಿಯ ಶಾಸಕ ರಾಜು ಕಾಗೆ ಅವರು ಕಾಮಗಾರಿಗೆ ಕಾಸು ಕೊಟ್ಟು ವರ್ಕ್ ಆರ್ಡರ್ ಪಡೆಯಬೇಕಿದೆ. ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಅವರಿಗೆ ಆದ ಸ್ಥಿತಿ ನನಗೂ ಆಗಿದೆ. ಎರಡು ವರ್ಷಗಳ ಹಿಂದೆ ಶಂಕುಸ್ಥಾಪನೆ ಮಾಡಿದ ಕಾಮಗಾರಿಗೆ ಕೂಡ ಕಮಿಷನ್, ಲಂಚ ಕೊಡದೆ ವರ್ಕ್ ಆರ್ಡರ್ ಸಿಗುತ್ತಿಲ್ಲ ಎಂದಿರುವುದಾಗಿ ಗಮನಕ್ಕೆ ತಂದರು. ಇದು ಮೊದಲ ಬಾರಿ ಅಲ್ಲ, ಹಿಂದೆಯೂ ಮುಖ್ಯಮಂತ್ರಿಗಳ ವಿರುದ್ಧ ತಮ್ಮ ಅಸಂತೋಷ ತೋಡಿಕೊಂಡಿದ್ದರು ಎಂದು ತಿಳಿಸಿದರು.

ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು, ನಾನು ಶಾಸಕನಾಗಿದ್ದುಕೊಂಡು ಒಂದು ಚರಂಡಿ, ಒಂದು ಶಾಲೆ ಕೆಲಸ ಆಗುತ್ತಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿಗಳ ಆತ್ಮೀಯರಾದ ಆಡಳಿತ ಪಕ್ಷದ ಶಾಸಕರೇ ಈ ಹೇಳಿಕೆ ನೀಡುತ್ತಿದ್ದಾರೆ. ಈ ರಾಜ್ಯದಲ್ಲಿ ಆಡಳಿತ ನಡೆಯುತ್ತಿದೆಯೇ? ಸರ್ಕಾರ ಬದುಕಿದೆಯೇ? ಎಂದು ಜನರು ಪ್ರಶ್ನಿಸುತ್ತಿದ್ದಾರೆ. ರಾಜ್ಯವನ್ನು ಲೂಟಿ ಮಾಡಲು ಸರ್ಕಾರಿ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಆಪ್ತ ಸಚಿವರಿಗೆ ಟಾರ್ಗೆಟ್-ನಾಗೇಂದ್ರ ಹಳ್ಳಕ್ಕೆ:
ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ತಮ್ಮ ಆಪ್ತ ಸಚಿವರಿಗೆ ಟಾರ್ಗೆಟ್ ನೀಡಿದ್ದಾರೆ. ಹಾಗಾಗಿಯೇ ನಾಗೇಂದ್ರ ಅವರು ಹಳ್ಳಕ್ಕೆ ಬಿದ್ದಿದ್ದರು. ಪೀಣ್ಯ ಕೈಗಾರಿಕಾ ಬಡಾವಣೆಯಲ್ಲಿ ಅಭಿವೃದ್ಧಿ ಕೆಲಸ ಆಗದೇ, ಪಕ್ಕದ ತಮಿಳುನಾಡಿಗೆ ಹೋಗುವುದಾಗಿ ಅಲ್ಲಿನ ಕೈಗಾರಿಕೆದಾರರ ಸಂಘದ ಅಧ್ಯಕ್ಷರು ಹೇಳಿಕೆ ಕೊಟ್ಟಿದ್ದಾರೆ. ಇದು ರಾಜ್ಯ ಸರ್ಕಾರ ರಾಜ್ಯವನ್ನು ನಡೆಸುವ ರೀತಿ ಎಂದು ಆಕ್ಷೇಪಿಸಿದರು.ಇದನ್ನೂ ಓದಿ: ಥಗ್ ಲೈಫ್ ಸೋಲು – ಕ್ಷಮೆ ಕೇಳಿದ ನಿರ್ದೇಶಕ ಮಣಿರತ್ನಂ

 

TAGGED:bengalurubjpBY VijayendracongresskarnatakaState Governmentಕಾಂಗ್ರೆಸ್ಬಿ.ವೈ.ವಿಜಯೇಂದ್ರಬಿಜೆಪಿರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
3 minutes ago
TUMBAIL 00000 00000
Latest

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ – ಏನಿದು ಹೊಸ ರೂಲ್ಸ್‌?

Public TV
By Public TV
11 minutes ago
RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
8 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
8 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
9 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?