Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ದೇಶದ ಮೊದಲ ಖಾಸಗಿ ಉಪಗ್ರಹ ಉಡಾವಣೆಗೆ ಕಾಫಿನಾಡ ಯುವಕನೇ ಸಾರಥಿ

Public TV
Last updated: October 20, 2021 5:04 pm
Public TV
Share
3 Min Read
satellite Chikkamagaluru
SHARE

– ಬೇರೆಲ್ಲಾ ಉಪಗ್ರಹಗಳಿಗಿಂತ 50ರಷ್ಟು ವೇಗವಾಗಿ ಡೇಟಾ ರವಾನೆ

ಚಿಕ್ಕಮಗಳೂರು: ಡಿಸೆಂಬರ್ ಒಳಗೆ ದೇಶದ ಮೊದಲ ಖಾಸಗಿ ಉಪಗ್ರಹ ಉಡಾವಣೆಗೊಳ್ಳಲಿದ್ದು, ಅದರ ಸಾರಥಿ ತಾಲೂಕಿನ ಆಲ್ದೂರಿನ ಯುವಕ ಅವೇಜ್ ಅಹಮದ್ ಆಗಲಿದ್ದಾರೆ.

23ರ ಹರೆಯದ ಅವೇಜ್ ಅಹಮದ್ ಖಾಸಗಿ ಉಪಗ್ರಹ ಉಡಾವಣೆ ಸಂಬಂಧ ಈಗಾಗಲೇ ಪ್ರಧಾನಿ ಮೋದಿ ಜೊತೆ ಎರಡು ಬಾರಿ ಮಾತನಾಡಿದ್ದಾರೆ. ಕಳೆದ ಡಿಸೆಂಬರ್‍ನಲ್ಲಿ ಉಡಾವಣೆಯಾಗಬೇಕಿದ್ದ ಉಪಗ್ರಹ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಇದೀಗ ಮುಂಬರೋ ಡಿಸೆಂಬರ್ ಒಳಗೆ ಉಪಗ್ರಹ ಉಡಾವಣೆಗೊಳ್ಳಲಿದ್ದು, ಇಸ್ರೋ ದಿನಾಂಕ ನಿಗದಿ ಮಾಡಬೇಕಿದೆ. ಆರಂಭದಲ್ಲಿ ಈ ಉಪಗ್ರಹ ರಷ್ಯಾದಿಂದ ಉಡಾವಣೆಗೊಳ್ಳಬೇಕಿತ್ತು. ವಿಷಯ ತಿಳಿದ ಕೇಂದ್ರ ಸರ್ಕಾರ ವಿಜ್ಞಾನಿಗಳ ಜೊತೆ ಮಾತನಾಡಿ ನಿಮಗೆ ಬೇಕಾದ ಎಲ್ಲಾ ಸಪೋರ್ಟ್ ಮಾಡಲಿದ್ದೇವೆ ಎಂದು ಹೇಳಿದ್ದರಿಂದ ಇಂದು ಈ ಉಪಗ್ರಹ ಭಾರತದ ಮಣ್ಣಲ್ಲೇ ಉಡಾವಣೆಗೊಳ್ಳಲಿದೆ.

satellite Chikkamagaluru 5

ಭಾರತದಲ್ಲಿ ಹುಟ್ಟಿದ್ದೇವೆ. ಏನೇ ಮಾಡಿದರೂ ಭಾರತಕ್ಕೆ ಮಾಡಬೇಕು ಎಂದು ಅವೇಜ್ ಅಹಮದ್ ನಾಸದಲ್ಲಿ ಸಿಕ್ಕ ಕೆಲಸವನ್ನೂ ಬಿಟ್ಟು ಬಂದಿದ್ದರು. ಬೆಂಗಳೂರಿನಲ್ಲಿ ಪಿಕ್ಸೆಲ್ ಕಂಪನಿ ತೆರೆದು ಓದುವಾಗಲೇ ಏರ್ ಸ್ಪೇಸ್‍ನತ್ತ ಆಸಕ್ತಿ ಬೆಳೆಸಿಕೊಂಡಿದ್ದರು. ಅದರ ಪರಿಣಾಮ ಇಂದು ದೇಶದ ಮೊದಲ ಖಾಸಗಿ ಉಪಗ್ರಹಕ್ಕೆ ಕಾಫಿನಾಡ ಹುಡುಗ ಸಾರಥಿಯಾಗಲಿದ್ದಾರೆ. ಮುಂದಿನ 2-3 ವರ್ಷದಲ್ಲಿ ಸುಮಾರು 36 ಖಾಸಗಿ ಉಪಗ್ರಹಗಳು ಉಡಾವಣೆಗೊಳ್ಳಲಿವೆ.

satellite Chikkamagaluru 3

ಯಾರು ಅವೇಜ್ ಅಹಮದ್: 23 ವರ್ಷದ ಅವೇಜ್ ಅಹಮದ್ ಚಿಕ್ಕಮಗಳೂರು ತಾಲೂಕಿನ ಆಲ್ದೂರು ನಿವಾಸಿ. ಮದ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಇವರ ತಂದೆ ನದೀಮ್ ಅಹಮದ್. ಮೆಡಿಕಲ್ ಸ್ಟೋರ್ ಇಟ್ಟುಕೊಂಡಿದ್ದಾರೆ. ಮಗ ಏನು ಓದುತ್ತಾನೆ, ಅವನಿಗೆ ಯಾವುದರಲ್ಲಿ ಆಸಕ್ತಿ ಇತ್ತೋ ಅದರಲ್ಲೇ ಓದಿಸಿದ್ದಾರೆ. ಇಡೀ ಜೀವನವನ್ನೇ ಮಗನಿಗಾಗಿ ಮುಡಿಪಾಗಿಟ್ಟು ಒಂದು ಸ್ವಂತ ಮನೆಯನ್ನೂ ನಿರ್ಮಿಸಿಕೊಳ್ಳದೆ ಮಗನಿಗೆ ಜೀವನ ಸೆವೆಸಿದ್ದರಿಂದ ಇಂದು 23 ವರ್ಷದ ಅವೇಜ್ ಅಹಮದ್ ದೇಶವೇ ಮೆಚ್ಚುವ ಸಾಧನೆಗೈದಿದ್ದಾರೆ.

satellite Chikkamagaluru 1

ಆಲ್ದೂರು ಹಾಗೂ ಸಂಗಮೇಶ್ವರಪೇಟೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿದ ಅವೇಜ್ ಅಹಮದ್ ದೇಶದ ಬಿಡ್ಸ್ ಪಿಲಾನಿ ಯುನಿವರ್ಸಿಟಿಯಲ್ಲಿ ಓದಿ ಇಂದು ಈ ಮಟ್ಟಕ್ಕೆ ಬೆಳೆದಿದ್ದಾರೆ. ಸ್ವತಃ ಇಂದಿರಾ ಗಾಂಧಿಯೇ ಇನ್ಫ್ಲುಯೆನ್ಸ್ ಮಾಡಿದ್ರು ಸೀಟು ಸಿಗದ ಬಿಡ್ಸ್ ಪಿಲಾನಿ ಯುನಿವರ್ಸಿಟಿಯಲ್ಲಿ ಮೆರಿಟ್ ಸೀಟ್ ಪಡೆದು 477 ರ‍್ಯಾಂಕ್ಗಳಿಸಿದ್ದರು. ಮೊದಲ ವರ್ಷದ ಓದಿನಲ್ಲೇ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದರು.

ಪಿಕ್ಸೆಲ್ ಕಂಪನಿ ಆರಂಭ : ಮೂರನೇ ವರ್ಷದಲ್ಲಿ ಓದುವಾಗಲೇ ಬೆಂಗಳೂರಿನಲ್ಲಿ ಏರೋಸ್ಪೇಸ್ ಎಂಬ ಪಿಕ್ಸೆಲ್ ಕಂಪನಿ ಆರಂಭಿಸಿದ್ದರು. ಅದು ಉಪಗ್ರಹ ತಯಾರಿಕಾ ಕಂಪನಿ. ಅವೇಜ್ ಅಹಮದ್ ತಯಾರಿಸಿದ ಆ ಉಪಗ್ರಹಗಳನ್ನ ಇಸ್ರೋದಿಂದಲೇ ಉಡಾವಣೆ ಮಾಡಬೇಕೆಂಬ ಹಠ, ಆಸೆ ಅವರದ್ದಾಗಿತ್ತು. ರಷ್ಯಾದಿಂದ ಉಡಾವಣೆಗೆ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ ಅದು ಕೇಂದ್ರ ಸರ್ಕಾರಕ್ಕೆ ಗೊತ್ತಾಗಿ ಕೇಂದ್ರ ಸರ್ಕಾವೇ ಮುಂದೆ ನಿಂತು ಇಂದು ಉಪಗ್ರಹ ಉಡಾವಣೆಗೆ ಸಾಥ್ ನೀಡಿದೆ. ಈ ಖಾಸಗಿ ಉಪಗ್ರಹ ಕಳೆದ ವರ್ಷವೇ ಉಡಾವಣೆ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ಉಪಗ್ರಹ ಡಿಸೆಂಬರ್ ಒಳಗೆ ಮುಗಿಲಿನತ್ತ ಮುಖ ಮಾಡಲಿದೆ.

satellite Chikkamagaluru 4

ಉಪಗ್ರಹದ ಸಾಮರ್ಥ್ಯ: ಈ ಉಪಗ್ರಹದ ಕುರಿತು 2020ರ ಡಿಸೆಂಬರ್ 14 ರಂದೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ಹಾಗೂ ಖಾಸಗಿ ಕಂಪೆನಿಗಳ ಸಿಇಓಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಆಗ ಅವೇಜ್ ಅಹಮದ್ ಕೂಡ ಮೋದಿ ಜೊತೆ ಮಾತನಾಡಿದ್ದರು. ಆಗ ಮೋದಿ ಕೇಂದ್ರ ಸರ್ಕಾರದಿಂದ ಎಲ್ಲಾ ಬೆಂಬಲ ನೀಡುವ ಭರವಸೆ ನೀಡಿದ್ದರು. ಬೇರೆ ಎಲ್ಲಾ ಉಪಗ್ರಹಗಳು ಯಾವ ರೀತಿ ಡೇಟಾವನ್ನ ಬಿಡುಗಡೆ ಮಾಡುತ್ತವೆಯೋ ಅವೇಜ್ ಅಹಮದ್ ರವರ ಸಂಶೋಧನೆಯ ಉಪಗ್ರಹ ಬೇರೆಲ್ಲಕ್ಕಿಂತ ಶೇಕಡ 50ಕ್ಕಿಂತ ಹೆಚ್ಚು ಡೇಟಾವನ್ನ ಬಿಡುಗಡೆಗೊಳಿಸುತ್ತೆ. ಅವೇಜ್ ತಯಾರಿಸಿರೋ ಉಪಗ್ರಹ ಭೂಮಿಯ ಚಲನವಲನದ ಫೋಟೋ, ಕೃಷಿ ಪ್ರಗತಿ, ಹವಾಮಾನದ ಮಾಹಿತಿ ಸೇರಿದಂತೆ ವಿವಿಧ ರೀತಿಯ ಮಾಹಿತಿ ರವಾನಿಸುತ್ತೆ. ಇದನ್ನೂ ಓದಿ: ದೇಶದ ಎಲ್ಲಾ ಯೂನಿವರ್ಸಿಟಿಯಲ್ಲಿ RSS ಕಾರ್ಯಕರ್ತರನ್ನ ಸಿಂಡಿಕೇಟ್ ಮಾಡ್ಕೊಂಡಿದ್ದಾರೆ: ಹೆಚ್‍ಡಿಕೆ

ಆಲ್ದೂರಿನ ಜನರಲ್ಲಿ ಹರ್ಷ : ಕಣ್ಣ ಮುಂದೆ ಆಡಿ ಬೆಳೆದವ ಇಂದು ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಾಡಿರೋದು ಊರಿನ ಜನರಿಗೆ ಖುಷಿ ತಂದಿದೆ. ವಿಷಯ ಕೇಳಿದಾಗ ನಾವು ತುಂಬಾ ಸಂತೋಷಪಟ್ಟೇವು. ನಮ್ಮ ಮಕ್ಕಳ ಇಂತಹಾ ಸಾಧನೆ ಮಾಡಿದ ಎಂದು ಖುಷಿಯಿಂದ ಸಿಹಿ ಹಂಚಿ ಸಂಭ್ರಮಿಸಿದ್ದೇವು ಎಂದಿದ್ದಾರೆ ಅವೇಜ್ ತಂದೆ ನದೀಮ್ ಅಹಮದ್ ಸ್ನೇಹಿತ ರವಿ. ಇದನ್ನೂ ಓದಿ: ಬ್ಲೂ ಫಿಲಂಗಳ ಬಗ್ಗೆ ಹೆಚ್‍ಡಿಕೆಗೆ ಚೆನ್ನಾಗಿಯೇ ಗೊತ್ತಿರುತ್ತೆ: ಅಶ್ವಥ್ ನಾರಾಯಣ

ಅವೇಜ್ ತಂದೆ ನದೀಮ್ ಕೂಡ ಅದು ನಮ್ಮ ಜೀವಮಾನದ ಸಂತಸದ ಕ್ಷಣ ಎಂದು ಸಂತೋಷವಾಗಿದ್ದಾರೆ. ಎಲ್ಲಾ ಮಕ್ಕಳು ಇದೇ ರೀತಿ ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಪ್ರತಿ ಮಗುವಿನಲ್ಲೂ ಒಂದೊಂದು ಕಲೆ ಇರುತ್ತೆ. ಎಲ್ಲಾ ಮಕ್ಕಳು ದೇಶದ ಪ್ರಗತಿ ಸಾಧನೆ ಮಾಡಬೇಕು ಎಂದು ಬಯಸಿದ್ದಾರೆ. ಅವೇಜ್ ಅವರ ಉಪಗ್ರಹಗಳು ಯಶಸ್ವಿಯಾಗಿ ಭಾರತದ ಕೀರ್ತಿ ಪತಾಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲಿ ಅನ್ನೋದು ಪ್ರತಿಯೊಬ್ಬ ಕನ್ನಡಿಗನ ಬಯಕೆ.

TAGGED:bengaluruChikkamagalurupixxelprivate satellitepublictvsatelliteಅವೇಜ್ ಅಹಮದ್ಖಾಸಗಿ ಉಪಗ್ರಹಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
29 minutes ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
1 day ago

You Might Also Like

d.k.shivakumar KPCC
Bengaluru City

ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

Public TV
By Public TV
33 minutes ago
Vidhasoudha RCB Honour
Bengaluru City

ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ

Public TV
By Public TV
1 hour ago
BY Vijayendra
Bengaluru City

ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ: ವಿಜಯೇಂದ್ರ ಆಕ್ರೋಶ

Public TV
By Public TV
1 hour ago
Namma Metro Purple Line
Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಸ್ಥಗಿತ

Public TV
By Public TV
2 hours ago
bengaluru stambede rcb
Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಯಡವಟ್ಟು – ಕಾಲ್ತುಳಿತಕ್ಕೆ 10 ಆರ್‌ಸಿಬಿ ಫ್ಯಾನ್ಸ್‌ ದುರ್ಮರಣ

Public TV
By Public TV
2 hours ago
stampede in bengaluru rcb fans
Bengaluru City

ಆರ್‌ಸಿಬಿ ಗೆಲುವು ಸಂಭ್ರಮದ ವೇಳೆ ಕಾಲ್ತುಳಿತ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?