ದಾವಣಗೆರೆ: ಅಡುಗೆ ಸಿಲಿಂಡರ್ ಸ್ಫೋಟಗೊಂಡು ಚಿಕ್ಕ ಮಗು ಸೇರಿದಂತೆ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆ ನಗರದ ಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಘಟನೆಯಲ್ಲಿ ವೀರೇಶ್, ಶಾರದಾ ಹಾಗೂ ಐದು ತಿಂಗಳ ಸಿದ್ದೇಶ್ ಗಾಯಗೊಂಡಿದ್ದಾರೆ. ಬಾಲಕ ಸಿದ್ದೇಶ್ ನ ಸ್ಥಿತಿ ಗಂಭೀರವಾಗಿದೆ. ಅವರನ್ನ ಖಾಸಗಿ ಅಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಗ್ಗೆ ಸಿಲಿಂಡರ್ ಲೀಕ್ ಅಗಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಹಂಚುಗಳೆಲ್ಲಾ ಕೆಳಕ್ಕೆ ಬಿದ್ದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.