ಹಾವೇರಿ: ಜಿಲ್ಲೆಯ ಬ್ಯಾಡಗಿ ನಗರದ ರಸ್ತೆಗಳ ದುಸ್ಥಿತಿ ಬಗ್ಗೆ ತಿಳಿಸಲು ದಂಪತಿ ಹಾಗೂ ಮಗ ವಿಭಿನ್ನ ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಬ್ಯಾಡಗಿ ನಗರದ ರಸ್ತೆಯ ತಗ್ಗುಗುಂಡಿಗಳ ಬಗ್ಗೆ ವಿಭಿನ್ನ ಫೋಟೋಶೂಟ್ ಮಾಡಿಸಿ ಕ್ಷೇತ್ರದ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಗಮನ ಸೆಳೆಯಲು ವಿಭಿನ್ನ ಪ್ರಯತ್ನ ಮಾಡಿದ್ದಾರೆ. ಬ್ಯಾಡಗಿ ನಗರದ ನಿವಾಸಿಗಳಾದ ಕಿರಣ್ ಕುಮಾರ್, ಅವರ ಪತ್ನಿ ಹಾಗೂ ಮಗ ಮೂವರು ಸೇರಿ ಹದಗೆಟ್ಟ ರಸ್ತೆಗಳ ಬಗ್ಗೆ ವಿಡಂಭನಾತ್ಮಕ ಫೋಟೋಶೂಟ್ ಮಾಡಿರುವುದು ಎಲ್ಲರ ಗಮನ ಸೆಳೆಸಿದೆ. ಇದನ್ನು ನೋಡಿ ಇನ್ನಾದರೂ ರಸ್ತೆ ಸರಿಮಾಡ್ರಪ್ಪ ಎಂದು ಜನರು ಜನಪ್ರತಿನಿಧಿಗಳ ಕಾಲೆಳೆಯುತ್ತಿದ್ದಾರೆ. ಇದನ್ನೂ ಓದಿ:ನಿಮ್ಮ ಬೇಜವಾಬ್ದಾರಿಯಿಂದ ಒಂದು ಹೆಣ್ಣುಮಗಳ ಪ್ರಾಣ ಹೋಯ್ತು – ಸಿಟಿ ರವಿಗೆ ಜನಸಾಮಾನ್ಯರ ತರಾಟೆ
ದಂಪತಿ ತಗ್ಗು ಗುಂಡಿಗಳಲ್ಲಿ ಬೈಕ್ ನಿಲ್ಲಿಸಿ, ಬೈಕ್ ಮೇಲೆ ತಗ್ಗುಗುಂಡಿಗಳಲ್ಲಿ ಅಪಾಯಕಾರಿ ಪ್ರಯಾಣ ಬಿಂಬಿಸುವ ಫೋಟೋ, ತಾಯಿ ಮಗನೊಂದಿಗೆ ಬೈಕಿನಲ್ಲಿ ಕಿತ್ತು ಹೋಗಿರುವ ಡಾಂಬರ್ ರಸ್ತೆ ಹೋಗುತ್ತಿರುವ ಫೋಟೋ, ರಸ್ತೆ ತಗ್ಗು ಗುಂಡಿಯ ಅಕ್ಕಪಕ್ಕ ಕೈ ಹಿಡಿದು ನಿಂತ ದಂಪತಿ, ಹದಗೆಟ್ಟ ರಸ್ತೆ ಮೇಲೆ ಕುಳಿತ ಪೋಸ್, ತಗ್ಗು ಗುಂಡಿ ಮುಂದೆ ಮಲಗಿದ ಫೋಟೋ ಹಾಗೂ ತಂದೆ-ಮಗ ಒಳಚರಂಡಿ ಮ್ಯಾನ್ ಹೋಲ್ ಮೇಲೆ ಕೈ ಮುಗಿದು ನಿಂತಿರುವುದು, ಮಕ್ಕಳ ಜೊತೆ ಮಗ ರಸ್ತೆಯಲ್ಲಿ ನಿಂತ ನೀರಲ್ಲಿ ದೋಣಿ ಬಿಡುತ್ತಿರುವ ಹಾಗೆ ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಇದನ್ನೂ ಓದಿ:ಕಿತ್ತುಹೋಗಿರುವ ರಸ್ತೆ, ಪ್ರತಿನಿತ್ಯ ಅಪಘಾತ- ರಾಷ್ಟ್ರೀಯ ಹೆದ್ದಾರಿ ದುಸ್ಥಿತಿಗೆ ಸವಾರರು ಸುಸ್ತು
ಈ ಫೋಟೋಗಳನ್ನು ಕಿರಣ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ದಂಪತಿಯ ವಿಭಿನ್ನ ಫೋಟೋಶೂಟ್ ಎಲ್ಲರ ಗಮನ ಸೆಳೆದಿದೆ.