ಲಕ್ನೋ: ಮಲಗಿದ್ದ ಮಕ್ಕಳ ಕತ್ತು ಹಿಸುಕಿ ಕೊಂದು ದಂಪತಿ ಹಾಗೂ ಮಹಿಳೆ ಅಪಾರ್ಟ್ಮೆಂಟ್ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದಿನ ಇಂದಿರಾಪುರಂನಲ್ಲಿ ನಡೆದಿದೆ.
ಇಂದು ಬೆಳಗ್ಗಿನ ಜಾವ ಸುಮಾರು 5.15ಕ್ಕೆ ಈ ಘಟನೆ ನಡೆದಿದೆ. ಪತಿ-ಪತ್ನಿ ಮೊದಲು ರೂಮಿನಲ್ಲಿ ಮಲಗಿದ್ದ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾರೆ. ಬಳಿಕ ಅಪಾರ್ಟ್ಮೆಂಟ್ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮೃತ ವ್ಯಕ್ತಿಯ ಎರಡನೇ ಪತಿ ಎಂದು ಹೇಳಲಾಗುತ್ತಿದೆ.
ಈ ಘಟನೆಯಲ್ಲಿ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ದಂಪತಿ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕಾಗಿ ದಂಪತಿ ತಮ್ಮ ಮಗ ಹಾಗೂ ಮಗಳು ನಿದ್ದೆ ಮಾಡುವಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.
ತನಿಖೆ ವೇಳೆ ಮೃತ ವ್ಯಕ್ತಿಗೆ ಇಬ್ಬರು ಪತ್ನಿಯರು ಇದ್ದಾರೆ ಎಂಬುದು ತಿಳಿಯಿತು. ನಾವು ಫ್ಯ್ಲಾಟ್ ಬಾಗಿಲು ತೆಗೆದಾಗ ಅಲ್ಲಿ ಇಬ್ಬರು ಮಕ್ಕಳ ಮೃತದೇಹದ ಜೊತೆಗೆ ಡೆತ್ನೋಟ್ ಕೂಡ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆಯಿಂದ ದಂಪತಿ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಗಾಜಿಯಾಬಾದ್ ಎಸ್ಎಸ್ಪಿ ಸುಧೀರ್ ಕುಮಾರ್ ತಿಳಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸೆಕ್ಯೂರಿಟ್ ಗಾರ್ಡ್, ಈ ಘಟನೆ ಇಂದು ಬೆಳಗ್ಗೆ ಸುಮಾರು 5.15ಕ್ಕೆ ನಡೆದಿದೆ. ಮೊದಲು ನಾನು ಶಬ್ದ ಕೇಳಿದೆ. ತಕ್ಷಣ ಸ್ಥಳಕ್ಕೆ ಓಡಿ ಬಂದಾಗ ನೆಲದ ಮೇಲೆ ಮೃತದೇಹ ಬಿದ್ದಿರುವುದನ್ನು ನೋಡಿದೆ. ತಕ್ಷಣ ನಾನು ನನ್ನ ಸೂಪರ್ವೈಸರ್ಗೆ ಕರೆದೆ. ಆಗ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.