ರಾಮನಗರ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-mysuru Expressway) ಬುಧವಾರ ತಡರಾತ್ರಿ ನಡೆದಿದೆ.
ಬಿಡದಿ ಸಮೀಪದ ಕೆಂಪನಹಳ್ಳಿ ಗೇಟ್ ಬಳಿ ಅಪಘಾತ (Accident) ಸಂಭವಿಸಿದೆ, ಮೃತರನ್ನು ಸನಾವುಲ್ಲಾ ಬೇಗ್ (65) ಹಾಗೂ ನೂರ್ಜಹಾನ್ (60) ಎಂದು ಗುರುತಿಸಲಾಗಿದೆ. ಮೃತ ದಂಪತಿ ಬೆಂಗಳೂರಿನ ಬಾಪೂಜಿ ನಗರ ನಿವಾಸಿಗಳು. ಇದನ್ನೂ ಓದಿ: ಕರೆಂಟ್ ಶಾಕ್ – ಬರೋಬ್ಬರಿ 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮೈಶುಗರ್ ಕಾರ್ಖಾನೆ
ಕಾರ್ಯಕ್ರಮವೊಂದರ ನಿಮಿತ್ತ ರಾಮನಗರಕ್ಕೆ ಬಂದಿದ್ದ ಇಬ್ಬರು ರಾತ್ರಿ ವಾಪಸ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಲಾರಿಗೆ ರಿಫ್ಲೆಕ್ಟರ್ ಇಲ್ಲದ ಕಾರಣ ವೇಗವಾಗಿ ಬಂದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಚಾಲಕ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ
Web Stories