ಬಾಗಲಕೋಟೆ: ಎರಡು ದಿನಗಳ ಹಿಂದೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ನವದಂಪತಿಯ ಶವಗಳು ಎರಡು ದಿನಗಳ ಬಳಿಕ ಪತ್ತೆಯಾಗಿವೆ.
ಅಕ್ಷತಾ(23) ಹಾಗೂ ಮೌನೇಶ್(28) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರು ನವೆಂಬರ್ 10ರಂದು ಜಿಲ್ಲೆಯ ಮುಧೋಳ ತಾಲೂಕಿನ ಚಿಂಚಖಂಡಿ ಕೆಡಿ ಗ್ರಾಮದ ಬಳಿಯಿರುವ ಘಟಪ್ರಭಾ ನದಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಅಕ್ಷತಾ ಮುಧೋಳ ತಾಲೂಕಿನ ನಿಂಗಾಪೂರ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗಷ್ಟೇ ಕಮಕೇರಿ ಗ್ರಾಮದ ಮೌನೇಶ್ ಜೊತೆ ಮದುವೆ ಮಾಡಲಾಗಿತ್ತು. ಆದರೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದಿಟ್ಟು ನವದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಬ್ಬರು ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಅಲ್ಲದೆ ಮುಧೋಳ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮೀನುಗಾರರು ಶವಕ್ಕಾಗಿ ಹುಡುಕಾಟ ನಡೆಸಿದ್ದರು. ಸದ್ಯ ಇಂದು ಘಟಪ್ರಭಾ ನದಿ ದಡದಲ್ಲಿ ದಂಪತಿ ಶವ ಪತ್ತೆಯಾಗುವೆ.
ಈ ಬಗ್ಗೆ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.