ಮುಂಬೈ: ದಂಪತಿ ಹಾಗೂ ಇಬ್ಬರು ಮಕ್ಕಳು ರಸ್ತೆ ಅಪಘಾತದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಜಲ್ಗಾನ್- ಪರ್ಭಾನಿ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸಕ್ಕರೆ ಸಾಗಿಸುತ್ತಿದ್ದ ಟ್ರಕ್ವೊಂದು ಬೈಕ್ ಮೇಲೆ ಹರಿದಿದೆ. ಪರಿಣಾಮ ದಯಾನಂದ್ ಸೋಲ್ನಾಖೆ(42), ಪತ್ನಿ ಸಂಗೀತಾ(35), ಮಕ್ಕಳಾದ ಪೃಥ್ವಿರಾಜ್ (12) ಮತ್ತು ರಾಜ್ನಂದಿನಿ(10) ಮೃತ ದುರ್ದೈವಿಗಳು.
ಸಕ್ಕರೆ ಸಾಗಿಸುತ್ತಿದ್ದ ಟ್ರಕ್ ಚಾಲಕ ರೂಪೇಶ್ ಯಾದವ್ (30) ತನ್ನ ಮುಂದಿರುವ ಎಲ್ಲ ವಾಹನಗಳನ್ನು ಹಿಂದಿಕ್ಕಲು ವೇಗವಾಗಿ ಚಾಲನೆ ಮಾಡುತ್ತಿದ್ದನು. ಈ ವೇಳೆ ಟ್ರಕ್ ಆತನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಹರಿದು, ನಾಲ್ವರು ಸ್ಥಳದಲ್ಲಿಯೇ ಬಲಿಯಾಗಿದ್ದಾರೆ. ಇದೇ ಅಪಘಾತದಲ್ಲಿ ಮತ್ತೊಂದು ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಗಾಯಗಳಾಗಿದೆ.
ವೇಗವಾಗಿದ್ದ ಟ್ರಕ್ ನಿಯಂತ್ರಣ ತಪ್ಪಿದ ಪರಿಣಾಮ ಎತ್ತರದ ರಸ್ತೆಯಿಂದ ಕೆಳಗೆ ಬಿದ್ದಿದ್ದು, ಅಲ್ಲಿದ್ದ ಕಬ್ಬಿಣದ ಕಂಬಗಳು ಜಖಂಗೊಂಡಿವೆ. ಅದೃಷ್ಟವಶಾತ್ ಚಾಲಕ ಬದುಕುಳಿದಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews