ಬಾಲಿವುಡ್ ಬೆಡಗಿ, ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ರಾ ರಾ ರಕ್ಕಮ್ಮ ಹಾಡಿಗೆ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಫರ್ನಾಂಡಿಸ್ ಗೆ ದೆಹಲಿ ಪಟಿಯಾಲ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಜಾಕ್ವೆಲಿನ್ ಸ್ನೇಹಿತ ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೇಳಿ ಬಂದಿದೆ. ವಂಚನೆ ಹಣದಲ್ಲಿ ಜಾಕ್ವೆಲಿನ್ ಗೆ ಸುಕೇಶ್ ಭಾರೀ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ ಎನ್ನುವ ಕಾರಣಕ್ಕಾ ಇಡಿ ನಟಿಯ ಮೇಲೂ ಚಾರ್ಜ್ ಶೀಟ್ ಸಲ್ಲಿಸಿತ್ತು.
ತನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಈಗಾಗಲೇ ಹಲವಾರಿ ಬಾರಿ ಜಾಕ್ವೆಲಿನ್ ಹೇಳಿಕೊಂಡಿದ್ದಾರೆ. ಆದರೂ, ಜಾರಿ ನಿರ್ದೇಶನಾಲಯ ಜಾಕ್ವೆಲಿನ್ ಹೆಸರು ಸೇರಿಸಿಯೇ ಚಾರ್ಜ್ ಶೀಟ್ ಸಲ್ಲಿಸಿತ್ತು. ಹಾಗಾಗಿ ಸೆಪ್ಟಂಬರ್ 26ರಂದು ಕೋರ್ಟಿಗೆ ಹಾಜರಾಗುವಂತೆ ದೆಹಲಿಯ ಪಟಿಯಾಲ ಕೋರ್ಟ್ ಜಾಕ್ವೆಲಿನ್ ಗೆ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ:ದುಬಾರಿ ಸಂಭಾವನೆ ಕೇಳಿ, ಅವಕಾಶ ಕಳೆದುಕೊಂಡ `ವಜ್ರಕಾಯ’ ನಟಿ ನಭಾ ನಟೇಶ್
ವ್ಯಕ್ತಿಯೊಬ್ಬರಿಗೆ ಸುಕೇಶ್ 200 ಕೋಟಿ ವಂಚಿಸಿದ್ದರು. ಈ ಹಣದಲ್ಲಿ ಜಾಕ್ವೆಲಿನ್ ಗೆ ದುಬಾರಿ ಕಾರು, ಕುದುರೆ, ಡೈಮೆಂಡ್ ನಕ್ಲೆಸ್ ಮತ್ತು ದುಬಾರಿ ಬ್ಯಾಗ್ ಗಳನ್ನು ಸುಕೇಶ್ ಉಡುಗೊರೆಯಾಗಿ ನೀಡಿದ್ದರು. ಅದು ವಂಚನೆ ಹಣದಿಂದ ಕೊಟ್ಟಿರುವ ಉಡುಗೊರೆಯಾಗಿದೆ ಎಂದು ಇಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಹಾಗಾಗಿ ಜಾಕ್ವೆಲಿನ್ ಗೆ ಸಂಕಷ್ಟ ಎದುರಾಗಿದೆ.