Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ ನಾಳೆಯಿಂದ ಹೋಟೆಲ್ ಓಪನ್- ವಾಹನ ಸಂಚಾರಕ್ಕೆ ಷರತ್ತುಬದ್ಧ ಅನುಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೇರಳದಲ್ಲಿ ನಾಳೆಯಿಂದ ಹೋಟೆಲ್ ಓಪನ್- ವಾಹನ ಸಂಚಾರಕ್ಕೆ ಷರತ್ತುಬದ್ಧ ಅನುಮತಿ

Corona

ಕೇರಳದಲ್ಲಿ ನಾಳೆಯಿಂದ ಹೋಟೆಲ್ ಓಪನ್- ವಾಹನ ಸಂಚಾರಕ್ಕೆ ಷರತ್ತುಬದ್ಧ ಅನುಮತಿ

Public TV
Last updated: April 19, 2020 12:20 pm
Public TV
Share
3 Min Read
kerala croron case main
SHARE

– ಕೇರಳದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ
– ಷರತ್ತುಗಳೊಂದಿಗೆ ಅನುಮತಿ ನೀಡಿದ ಕೇರಳ
– ಕೆಂಪು ವಲಯದಲ್ಲಿ ಮೇ 3ರವರೆಗೆ ಲಾಕ್‍ಡೌನ್ ಮುಂದುವರಿಕೆ

ತಿರುವನಂತಪುರಂ: ಮಹತ್ವದ ನಿರ್ಧಾರವೊಂದರಲ್ಲಿ ಕೇರಳ ಸರ್ಕಾರ ರಾಜ್ಯದಲ್ಲಿ ಹೋಟೆಲ್, ರೆಸ್ಟೋರೆಂಟ್‍ಗಳ ಓಪನ್‍ಗೆ ಅನುಮತಿ ನೀಡುವುದರ ಜೊತೆಗೆ  ಕೆಲ ಜಿಲ್ಲೆಗಳಲ್ಲಿ  ವಾಹನಗಳ ಓಡಾಟಕ್ಕೆ  ಲಾಕ್ಡೌನ್‍ನಿಂದ ವಿನಾಯಿತಿ ನೀಡಿದೆ.

21 ದಿನಗಳ ಲಾಕ್‍ಡೌನ್ ಬಳಿಕ ವಿನಾಯ್ತಿ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೇರಳ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಆ ಪ್ರಸ್ತಾವನೆಯನ್ನು ಶುಕ್ರವಾರ ಪ್ರಧಾನಿ ಮೋದಿ ಸರ್ಕಾರ ಒಪ್ಪಿಕೊಂಡಿದೆ. ಲಾಕ್‍ಡೌನ್‍ನಿಂದ ವಿನಾಯ್ತಿ ನೀಡುವ ಸಲುವಾಗಿ ಕೇರಳದಲ್ಲಿರುವ ಒಟ್ಟು 14 ಜಿಲ್ಲೆಗಳನ್ನು ಕೆಂಪು ವಲಯ, ಹಳದಿ ವಲಯ(ಎ), ಹಳದಿ ವಲಯ(ಬಿ), ಹಸಿರು ವಲಯವಾಗಿ ವಿಂಗಡಿಸಲಾಗಿತ್ತು. ಶನಿವಾರ ಕೇರಳದಲ್ಲಿ ಕೇವಲ ಮೂರು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿತ್ತು. ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈಗ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

kerala corona case

ಕೆಂಪು ವಲಯ:
ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್, ಮಲ್ಲಪುರಂ ಮೇ3 ರವರೆಗೆ ಸಂಪೂರ್ಣ ಲಾಕ್‍ಡೌನ್ ಆಗಿರಲಿದೆ. ಕೊರೊನಾ ಹಾಟ್ ಸ್ಪಾಟ್ ಜಾಗದಲ್ಲಿ ಅಗತ್ಯ ವಸ್ತು ಸಾಗಾಟಕ್ಕೆ ಎರಡು ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್ ಇರಲಿದೆ. ಇಲ್ಲಿ ಯಾವುದೇ ವಿನಾಯಿತಿ ಇಲ್ಲ. ಇದನ್ನೂ ಓದಿ: ಕೇರಳದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ – ಕೊರೊನಾ ನಿಯಂತ್ರಣವಾಗಿದ್ದು ಹೇಗೆ?

ಕಿತ್ತಳೆ(ಎ) ವಲಯ:
ಪತನಂತಿಟ್ಟ, ಎರ್ನಾಕುಲಂ, ಕೊಲ್ಲಂ ಜಿಲ್ಲೆಗಳಲ್ಲಿ ಏಪ್ರಿಲ್ 24ರ ಬಳಿಕ ಲಾಕ್‍ಡೌನ್ ಸಡಿಲಿಕೆ ಆಗಲಿದೆ.

ಕಿತ್ತಳೆ(ಬಿ) ವಲಯ:
ಅಲಪ್ಪುಜ, ತ್ರಿಶೂರ್, ಪಾಲಕ್ಕಾಡ್, ತಿರುವನಂತಪುರಂ, ವಯನಾಡಿನಲ್ಲಿ ಏಪ್ರಿಲ್ 20ರ ಬಳಿಕ ಕೆಲವೆಡೆ ವಿನಾಯಿತಿ.

ಹಸಿರು ವಲಯ:
ಕೊರೊನಾ ಪ್ರಕರಣಗಳು ಬಾರದೇ ಇರುವ ಕೊಟ್ಟಾಯಂ, ಇಡುಕ್ಕಿಯಲ್ಲಿ ಏಪ್ರಿಲ್ 20ರಿಂದ ವಿನಾಯಿತಿ ಸಿಗಲಿದೆ.

Corona dd

ವಿನಾಯಿತಿ ಹೇಗಿರಲಿದೆ?
ಕೆಂಪು ವಲಯ ಹೊರತುಪಡಿಸಿ ಉಳಿದ ಕಡೆಗಳಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಸೋಮವಾರ, ಬುಧವಾರ, ಶುಕ್ರವಾರ ಬೆಸ ಸಂಖ್ಯೆಯೊಂದಿಗೆ ಕೊನೆ ಆಗುವ ವಾಹನಗಳು ಸಂಚರಿಸಬಹುದು. ಮಂಗಳವಾರ, ಗುರುವಾರ ಶನಿವಾರ – ಸಮ ಸಂಖ್ಯೆಯೊಂದಿಗೆ ಅಂತ್ಯವಾಗುವ ವಾಹನಗಳ ಓಡಾಟಕ್ಕೆ ಅನುಮತಿ ಸಿಕ್ಕಿದೆ.

ಬೈಕ್ ಸವಾರರು ತಮ್ಮ ಸಂಬಂಧಿಕರೊಂದಿಗೆ ಡಬಲ್ ರೈಡಿಂಗ್‍ಗೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಶುಭ ಸುದ್ದಿ, ಕೊರೊನಾ ಗೆದ್ದ ವೃದ್ಧ ದಂಪತಿ ಡಿಸ್ಚಾರ್ಜ್- ಆಹಾರ ಏನಿತ್ತು?

police corona

ಶನಿವಾರ ಮತ್ತು ಭಾನುವಾರ ಸಲೂನ್ ಅಂಗಡಿ ತೆರೆಯಬಹುದು. ಸಂಜೆ 7 ಗಂಟೆವರೆಗೆ ಹೋಟೆಲ್-ರೆಸ್ಟೋರೆಂಟ್ ತೆರೆಯಬಹುದು, 8 ಗಂಟೆವೆರೆಗೆ ಪಾರ್ಸೆಲ್‍ಗೆ ಅವಕಾಶ ಸಿಕ್ಕಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಒಪ್ಪಿಗೆ ಸಿಕ್ಕಿದ್ದು, ಹಸಿರು ವಲಯದಲ್ಲಿ ಬಟ್ಟೆ ಅಂಗಡಿ ತೆರೆಯಬಹುದು. ವಾರದಲ್ಲಿ ಎರಡು ದಿನ ಮೊಬೈಲ್, ಆಟೋ ವರ್ಕ್‍ಶಾಪ್, ಕಂಪ್ಯೂಟರ್ ಸೆಂಟರ್, ಬುಕ್‍ಸ್ಟೋರ್  ಗಳನ್ನು ತೆರೆಯಲು ಅನುಮತಿ ಸಿಕ್ಕಿದೆ.

ಶನಿವಾರ ಮತ್ತು ಭಾನುವಾರ ಹೊರತು ಪಡಿಸಿದ ವಾರದ ಎಲ್ಲ ದಿನ ಸರ್ಕಾರಿ ಕಚೇರಿಗಳು ತೆರೆದಿರುತ್ತದೆ. ಸಹಕಾರ ಸಂಸ್ಥೆಗಳಲ್ಲಿ ಶೇ.33 ರಷ್ಟು ಉದ್ಯೋಗಿಗಳು, ಗ್ರಾಮೀಣ ಪಂಚಾಯತ್ ನಲ್ಲಿ ಶೇ. 35ರಷ್ಟು ಉದ್ಯೋಗಿಗಳು ಕರ್ತವ್ಯ ನಿರ್ವಹಿಸಲು ಅನುಮತಿ. ಇದನ್ನೂ ಓದಿ: ಕೇರಳ ಆಸ್ಪತ್ರೆಯಿಂದ ಓಡಿ ಹೋಗಿದ್ದ ಅಮೆರಿಕ ದಂಪತಿ ಕೊನೆಗೂ ಪತ್ತೆ ಹಚ್ಚಿದ ಪೊಲೀಸರು

coronavirus 1 1000x600 1

ನಿರ್ಬಂಧ ಮುಂದುವರಿಕೆ:
ಹಸಿರು ವಲಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದು, ಶಿಕ್ಷಣ, ಧಾರ್ಮಿಕ ಸ್ಥಳ ತೆರೆಯುವಂತಿಲ್ಲ. ಜಿಲ್ಲೆಯಿಂದ ಯಾರೂ ಹೊರಗಡೆ ತೆರಳುವಂತಿಲ್ಲ. ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಯಂತೆ ಮದುವೆ ಮತ್ತು ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ 20ಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳುವಂತಿಲ್ಲ.

ಎಷ್ಟು ಪ್ರಕರಣವಿದೆ?
ದೇಶದಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾದ ಕೇರಳದಲ್ಲಿ 399 ಮಂದಿಗೆ ಸೋಂಕು ಬಂದಿದ್ದು, 257 ಮಂದಿ ಗುಣಮುಖರಾಗಿದ್ದಾರೆ. ಈಗ 140 ಸಕ್ರೀಯ ಪ್ರಕರಣವಿದ್ದು, ಕೇವಲ 2 ಮಂದಿ ಮಾತ್ರ ಮೃತಪಟ್ಟಿದ್ದಾರೆ.

TAGGED:CoronaCorona VirusCovidkarnatakakeralaಕೇರಳಕೊರೊನಾಕೊರೊನಾ ಪಾಸಿಟಿವ್ಲಾಕ್‍ಡೌನ್ವಿನಾಯಿತಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories

You Might Also Like

Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
5 minutes ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
20 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
37 minutes ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
50 minutes ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
59 minutes ago
LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?