ಸರ್ಕಾರದ ಆದೇಶಕ್ಕೆ ಡೋಂಟ್ ಕೇರ್ – ಬಿಜೆಪಿ ಶಾಸಕ ಎಮ್ಮೆ ಓಡಿಸುವ ಸ್ಪರ್ಧೆಯಲ್ಲಿ ಬ್ಯುಸಿ

Public TV
1 Min Read
BLG ANIL BENAKE

ಬೆಂಗಳೂರು: ಯಾವುದೇ ಸಭೆ, ಸಮಾರಂಭ, ಪಾದಯಾತ್ರೆ, ಸ್ಪರ್ಧೆ, ಜಾತ್ರೆಗಳಿಗೆ ಅವಕಾಶ ನೀಡ್ಬಾರ್ದು. ಇನ್ನಾದ್ರು ಪಕ್ಷಪಾತದ ಧೋರಣೆ ನಿಲ್ಲಿಸಿ ಎಂದು ಸರ್ಕಾರಕ್ಕೆ ನಿನ್ನೆಯಷ್ಟೇ ಹೈಕೋರ್ಟ್ ಬುದ್ದಿವಾದ ಹೇಳಿತ್ತು. ಆದ್ರೆ, ಇದು ಕೋಣನ ಮುಂದೆ ಕಿನ್ನರಿ ಬಾರಿಸಿದಂತಾಗಿದೆ. ಯಾಕಂದ್ರೆ, ವೀಕೆಂಡ್ ಕರ್ಫ್ಯೂ, ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಬೆಳಗಾವಿಯ ಬಿಜೆಪಿ ಶಾಸಕ ಅನಿಲ್ ಬೆನಕೆ, ಎಮ್ಮೆ ಓಡಿಸುವ ಸ್ಪರ್ಧೆ ನಡೆಸಿದ್ದಾರೆ.

BLG ANIL BENAKE 1

ಈ ಎಮ್ಮೆ ಓಡಿಸುವ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ರು. ಮಕರ ಸಂಕ್ರಮಣ ನಿಮಿತ್ತ ಎಮ್ಮೆ ಓಡಿಸುವ ಸ್ಪರ್ಧೆಗೆ ಶಾಸಕ ಅನಿಲ್ ಬೆನಕೆ ಚಾಲನೆ ನೀಡಿದ್ದರು. ನಿನ್ನೆ ಸಂಜೆ ಚವ್ಹಾಟ್ ಗಲ್ಲಿಯಲ್ಲಿ ಚವಾಟ ಯುವಕ ಸಂಘಟನೆ, ಪಂಚ ಸಮಿತಿ, ಗವಳಿ ಸಮಾಜ ಸಹಯೋಗದಲ್ಲಿ ಎಮ್ಮೆ ಓಡಿಸುವ ಸ್ಪರ್ಧೆ ನಡೆಯಿತು. ಸಾಮಾಜಿಕ ಅಂತರ ಮರೆತು, ಮಾಸ್ಕ್ ಧರಿಸದೇ ನೂರಾರು ಜನರು ಭಾಗಿಯಾಗಿದ್ದರು. ಬೆಳಗಾವಿಯಲ್ಲಿ ಕೋವಿಡ್ ತಾಂಡವವಾಡುತ್ತಿದ್ದರೂ ಅನಿಲ್ ಬೆನಕೆ ಬೇಜವಾಬ್ದಾರಿತನ ತೋರಿದರು. ಜನರನ್ನು ಎಚ್ಚರಿಸಿ ತಿಳುವಳಿಕೆ ನೀಡಬೇಕಿದ್ದ ಆಡಳಿತಾರೂಢ ಶಾಸಕನಿಂದಲೇ ನಿರ್ಲಕ್ಷ್ಯ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಜೊತೆಗೆ ಕ್ರಮ ಜರುಗಿಸಬೇಕಾಗಿದ್ದ ಜಿಲ್ಲಾಡಳಿತ ಸೈಲೆಂಟಾಗಿದೆ. ಇದನ್ನೂ ಓದಿ: ಉಡುಪಿ ಪೇಟೆಯಲ್ಲಿ ಓಮಿಕ್ರಾನ್ ಓಡಾಟ – ಜನಜಾಗೃತಿ ಮೂಡಿಸಿದ ಪಬ್ಲಿಕ್ ಹೀರೋ

BLG ANIL BENAKE 2

ಇನ್ನೂ ರಾಯಭಾಗದ ಮುಗಳ್‍ಖೋಡದಲ್ಲಿ ಯಲ್ಲಮ್ಮನ ಜಾತ್ರೆ ಭರ್ಜರಿಯಾಗಿ ನಡೆದಿದೆ. ಗಂಗಾವತಿಯ ಚನ್ನಬಸವ ತಾತನವರ ಜಾತ್ರೆ ಅದ್ಧೂರಿಯಾಗಿ ನಡೆದಿದೆ. ಬೆಂಗಳೂರಿನ ಬನ್ನಪ್ಪ ಪಾರ್ಕ್ ಬಳಿಯ ಮಹಾಗಣಪತಿ ದೇಗುಲ ತುಂಬಿ ತುಳುಕ್ತಾ ಇತ್ತು. ಬಾಗಲಕೋಟೆ ಇಳಕಲ್‍ನಲ್ಲಿ ಬನಶಂಕರಿ ಭಕ್ತರು ವೀಕೆಂಡ್ ಕರ್ಫ್ಯೂಗೆ ಡೋಂಟ್ ಕೇರ್ ಅಂದ್ರು. ಬದಾಮಿ ಬನಶಂಕರಿ ದೇಗುಲದವರೆಗೆ ಸಾವಿರಾರು ಮಂದಿ ಪಾದಯಾತ್ರೆ ನಡೆಸಿದ್ದಾರೆ. ಎಲ್ಲಾ ಕಡೆ ರೂಲ್ಸ್ ಬ್ರೇಕ್ ಆಗ್ತಿದ್ರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಇದನ್ನೂ ಓದಿ: ತುರ್ತು ಚಿಕಿತ್ಸೆ ಹೊರತುಪಡಿಸಿ ಇತರೆ ರೋಗಿಗಳು ಆಸ್ಪತ್ರೆಗೆ ಬರುವಂತಿಲ್ಲ: ಸರ್ಕಾರ ಸೂಚನೆ

Share This Article
Leave a Comment

Leave a Reply

Your email address will not be published. Required fields are marked *