– ದೇಶಾದ್ಯಂತ 398 ಕೇಸ್, ಕೇರಳವೊಂದರಲ್ಲೇ 273 ಪ್ರಕರಣ ದಾಖಲು
– ಬೆಳಗಾವಿಯಲ್ಲಿ 25 ವರ್ಷದ ಗರ್ಭಿಣಿಗೆ ಸೋಂಕು
ಬೆಂಗಳೂರು/ನವದೆಹಲಿ: 2020-2022ರ ಅವಧಿಯಲ್ಲಿ ಇಡೀ ಮನುಕುಲವನ್ನೇ ಅಲ್ಲೋಲ ಕಲ್ಲೋಲ ಮಾಡಿ ಮರಣ ಮೃದಂಗ ಬಾರಿಸಿದ್ದ ಕೊರೊನಾ ಸೋಂಕು ಮೂರು ವರ್ಷಗಳ ಮತ್ತೆ ದೇಶಕ್ಕೆ ಕಾಲಿಟ್ಟಿದೆ. ಇಡೀ ವಿಶ್ವವನ್ನೇ ತತ್ತರಿಸುವಂತೆ ಮಾಡಿದ್ದ ಕಣ್ಣಿಗೆ ಕಾಣದ ವೈರಸ್ ಮತ್ತೆ ದಾಂಗುಡಿ ಇಡ್ತಿದೆ. 2022ರಲ್ಲಿ ಕೊನೇದಾಗಿ ಕಾಣಿಸಿಕೊಂಡಿದ್ದ ಒಮಿಕ್ರಾನ್ ತಳಿಯ ಜೆಎನ್.1 ಪ್ರಭೇದ ಹೊಸ ಇನ್ನಿಂಗ್ಸ್ ಶುರು ಮಾಡಿದೆ.
ಜೆಎನ್1 ಉಪ ತಳಿಗಳಾದ ಎನ್ಬಿ.1.8.1 ಮತ್ತು ಎಲ್ಎಫ್.7 ತಳಿಗಳ ಕಾಟ ಶುರು ಹಚ್ಚಿಕೊಂಡಿದೆ. ಸಿಂಗಪೂರ್, ಹಾಂಕಾಂಗ್, ಥೈಲ್ಯಾಂಡ್ ಸೇರಿ ದಕ್ಷಿಣ ಏಷ್ಯಾದಲ್ಲಿ ಕಾಣಿಸಿಕೊಂಡಿರುವ ವೈರಾಣು ಭಾರತಕ್ಕೂ ಎಂಟ್ರಿ ಕೊಟ್ಟಿದೆ. ದೇಶದ ಹಲವು ರಾಜ್ಯಗಳಲ್ಲಿ ನಿಧಾನಗತಿಯಲ್ಲಿ ಏರುತ್ತಿದೆ. ಕರ್ನಾಟಕದಲ್ಲಿ ಒಟ್ಟು 35 ಕೋವಿಡ್ ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲೇ 32 ಆ್ಯಕ್ಟಿವ್ ಕೇಸ್ ಇವೆ. 9 ತಿಂಗಳ ಮಗು ಸೇರಿ 3 ಮಕ್ಕಳಿಗೆ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಮತ್ತೆ ಟೆಸ್ಟಿಂಗ್.. ಮಾಸ್ಕ್, ಐಸೋಲೇಷನ್ ಇತರ ಕೋವಿಡ್ ನಿಯಮಗಳು ಶುರುವಾಗಿದೆ.
ದೇಶದಲ್ಲಿ ಕೋವಿಡ್ ಪ್ರಕರಣ ಮತ್ತೆ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ ಕೂಡ ಅಲರ್ಟ್ ಆಗಿದೆ. ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಲು ಸೂಚನೆ ನೀಡಿದೆ. ಸೋಮವಾರದಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಜೊತೆಗೆ ಆತಂಕ ಬೇಡ, ಎಚ್ಚರಿಕೆ ಇರಲಿ ಎಂದು ಸಾರ್ವಜನಿಕರಿಗೆ ಅಭಯ ನೀಡಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾಸ್ಕ್ ಧರಿಸಿಯೇ ಜನತಾ ದರ್ಶನ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದೆಲ್ಲೆಡೆ ಮೇ 24ರಿಂದ 28ರವೆರೆಗೆ ಭಾರೀ ಮಳೆ ಎಚ್ಚರಿಕೆ
ಇದೀಗ ಓಮಿಕ್ರಾನ್ ತಳಿಯ ಜೆಎನ್1 ಪ್ರಭೇಡ ಕಾಣಿಸಿಕೊಂಡಿದ್ದು, ಎನ್ಬಿ.1.8.1 & ಎಲ್ಎಫ್.7 ಇದರ ಉಪತಳಿ ಆಗಿದೆ. ಕಳೆದ ಏಪ್ರಿಲ್ನಲ್ಲಿ ಎನ್ಬಿ.1.8.1 ತಮಿಳುನಾಡಿನಲ್ಲಿ ಪತ್ತೆಯಾಗಿತ್ತು. ಗುಜರಾತ್ನಲ್ಲಿ 4 ಎಲ್ಎಫ್.7 ಇದೇ ಮೇ ತಿಂಗಳಲ್ಲಿ ಪತ್ತೆಯಾಗಿತ್ತು. ಇದನ್ನೂ ಓದಿ: ಸಾವಿರ ಕೋಟಿ ಲಾಭ ಮಾಡೋ ಉದ್ದೇಶವಿದೆ – ತಮನ್ನಾ ಆಯ್ಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ
ಲಕ್ಷಣಗಳೇನು?
ಜ್ವರ, ನೆಗಡಿ, ಕೆಮ್ಮು, ಆಯಾಸ, ತಲೆನೋವು, ಕೆಲವರಿಗೆ ಉಸಿರಾಟದ ತೊಂದರೆ. ಇದನ್ನೂ ಓದಿ: ವಿಧಾನಸೌಧ ಗೈಡೆಡ್ ಟೂರ್ಗೆ ಭಾನುವಾರ ಚಾಲನೆ – ಜೂ.1ರಿಂದ ಸಾರ್ವಜನಿಕರಿಗೆ ಪ್ರವೇಶ, ಶುಲ್ಕ ಪ್ರಕಟ
ಭಾನುವಾರದಿಂದಲೇ ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಶುರು:
ಕೋವಿಡ್ ಕಾಣಿಸಿಕೊಂಡ ಹಿನ್ನೆಲೆ ಅಲರ್ಟ್ ಆಗಿರುವ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜು ಜಿಲ್ಲಾಸ್ಪತ್ರೆಗಳಲ್ಲಿ ಭಾನುವಾರದಿಂದಲೇ ಟೆಸ್ಟಿಂಗ್ ಶುರು ಮಾಡಲು ಮುಂದಾಗಿದೆ. ಜೊತೆಗೆ 8 RTPCR ಟೆಸ್ಟಿಂಗ್ ಲ್ಯಾಬ್ ತೆರೆಯಲು ನಿರ್ಧರಿಸಿದೆ. ಜನದಟ್ಟಣೆ ಪ್ರದೇಶದಲ್ಲಿ ಜನರು, ಗರ್ಭಿಣಿಯರು, ಕಾಯಿಲೆ ಇರೋರು ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ಐಎಲ್ಐ, ಸ್ಯಾರಿ ಲಕ್ಷಣ ಇದ್ದವ್ರು ಸೂಕ್ತ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಿದ್ದು, ಸ್ಯಾನಿಟೈಸರ್ ಬಳಸುವಂತೆ ಎಚ್ಚರಿಕೆ ನೀಢಿದೆ. ಇದನ್ನೂ ಓದಿ: 25,000 ರೂ.ಗೆ ಜೀತಕ್ಕಿರಿಸಿದ್ದ ಮಗ ಸಾವು – ರಹಸ್ಯವಾಗಿ ಸಮಾಧಿಯಲ್ಲಿ ಹೂತಿಟ್ಟಿದ್ದ ಮಾಲೀಕ ಅರೆಸ್ಟ್
ಬೆಳಗಾವಿಯಲ್ಲಿ ಗರ್ಭಿಣಿಗೆ ಕೊರೊನಾ:
ರಾಜ್ಯದ ಬೆಳಗಾವಿ ಜಿಲ್ಲೆಗೂ ಕೊರೊನಾ ಕಾಲಿಟ್ಟಿದ್ದು, 25 ವರ್ಷದ ಗರ್ಭಿಣಿಯಲ್ಲಿ ವೈರಸ್ ಕಾಣಿಸಿಕೊಂಡಿದೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಗರ್ಭಿಣಿಯನ್ನ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ ಅಂತ ಬೆಳಗಾವಿ ಡಿಎಚ್ಒ ಡಾ.ಈಶ್ವರ್ ಗಡಾದಿ ಮಾಹಿತಿ ನೀಡಿದ್ದಾರೆ. ಇನ್ನು ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ಬಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಪ್ರತ್ಯೇಕ 10 ಬೆಡ್ಗಳ ವಾರ್ಡ್ ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಮವಾರದಿಂದ ಕೋವಿಡ್ ಪರೀಕ್ಷೆ ಆರಂಭಿಸಲು ಮುಂದಾಗಿದ್ದಾರೆ.
ಕೇರಳದಲ್ಲಿ ಅತಿಹೆಚ್ಚು 273 ಕೇಸ್ ಪತ್ತೆ:
ದಕ್ಷಿಣ ಏಷ್ಯಾದ ದೇಶಗಳಲ್ಲಿ ಕೊರೊನಾ ವೈರಸ್ನ ಉಪತಳಿ ಪತ್ತೆಯಾಗಿದ್ದು, ವೈರಾಣು ಭಾರತಕ್ಕೂ ಲಗ್ಗೆ ಇಟ್ಟಿದೆ. ದೇಶಾದ್ಯಂತ 398 ಕೇಸ್ ದಾಖಲಾಗಿದೆ. ಕೇರಳ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಹೆಚ್ಚು ಕೇಸ್ ಪತ್ತೆ ಆಗ್ತಿವೆ. ಪಕ್ಕದ ಕೇರಳದಲ್ಲಿ ಅತಿಹೆಚ್ಚು 273 ಪ್ರಕರಣಗಳು ಪತ್ತೆ ಆಗಿವೆ. ರಾಷ್ಟ್ರ ರಾಜಧಾನಿ ದೆಹಲಿ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಅಲರ್ಟ್ ಆಗಿವೆ. ಹೊಸ ವೇರಿಯಂಟ್ ಎದುರಿಸಲು ಮುಂಜಾಗ್ರತಾ ಕ್ರಮ ವಹಿಸಲು ಸಜ್ಜಾಗ್ತಿವೆ. ಕೇಂದ್ರ ಆರೋಗ್ಯ ಸಚಿವಾಲಯ ಪರಿಸ್ಥಿತಿ ಮೇಲೆ ನಿಗಾ ಇಟ್ಟಿದೆ. ಆಂಧ್ರಪ್ರದೇಶ, ದೆಹಲಿ ಸರ್ಕಾರ ಆಸ್ಪತ್ರೆಗಳಲ್ಲಿ ಬೆಡ್ ಸಜ್ಜುಗೊಳಿಸುವಂತೆ ಸೂಚಿಸಿದೆ.