Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಣದ ಹರಿವು ಹೆಚ್ಚಳ, 2021-22ರಲ್ಲಿ ಶೇ.7.4 ಜಿಡಿಪಿ ಗುರಿ – ಆರ್ಥಿಕ ಚೇತರಿಕೆಗೆ ಆರ್‌ಬಿಐ ಮದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಹಣದ ಹರಿವು ಹೆಚ್ಚಳ, 2021-22ರಲ್ಲಿ ಶೇ.7.4 ಜಿಡಿಪಿ ಗುರಿ – ಆರ್ಥಿಕ ಚೇತರಿಕೆಗೆ ಆರ್‌ಬಿಐ ಮದ್ದು

Corona

ಹಣದ ಹರಿವು ಹೆಚ್ಚಳ, 2021-22ರಲ್ಲಿ ಶೇ.7.4 ಜಿಡಿಪಿ ಗುರಿ – ಆರ್ಥಿಕ ಚೇತರಿಕೆಗೆ ಆರ್‌ಬಿಐ ಮದ್ದು

Public TV
Last updated: April 17, 2020 3:27 pm
Public TV
Share
3 Min Read
Shaktikanta Das
SHARE

– ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿಕೆ
– ಜಿ20 ರಾಷ್ಟ್ರಗಳ ಪೈಕಿ ಭಾರತದ ಬೆಳವಣಿಗೆ ದರ ಹೆಚ್ಚು

ನವದೆಹಲಿ : ಕೊರೊನಾ ವೈರಸ್ ಸಂಕಷ್ಟ ಹಿನ್ನಲೆಯಲ್ಲಿ ದೇಶದ ಆರ್ಥಿಕ ಪ್ರಗತಿ ಕುಸಿದಿದ್ದು, ಈ ಹಣಕಾಸು ವರ್ಷದಲ್ಲಿ ಶೇ.1.9 ಆರ್ಥಿಕ ಬೆಳವಣಿಗೆ ದರ(ಜಿಡಿಪಿ) ದಾಖಲಿಸುವ ವಿಶ್ವಾಸವಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ಕೊರೊನಾ ವೈರಸ್ ನಿಂದಾಗಿ ದೇಶದ ಆರ್ಥಿಕತೆ ಕಷ್ಟ ಎದುರಾಗಿದೆ. ಹಾಗಿದ್ದರೂ ಜಿ-20 ರಾಷ್ಟ್ರಗಳ ಪೈಕಿ ಭಾರತ ಅತಿ ಹೆಚ್ಚು ಶೇ.1.9 ರಷ್ಟು ಬೆಳವಣಿಗೆ ಸಾಧಿಸಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿದೆ. ಆದರೆ 2021-22ರ ಅವಧಿಯಲ್ಲಿ ಶೇ.7.4 ಜಿಡಿಪಿ ದಾಖಲಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

IMF GDP

ಮುಖ್ಯಾಂಶಗಳು
– ಭಾರತದ ಆರ್ಥಿಕತೆಯನ್ನು ಆರ್‌ಬಿಐ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಕೊರೊನಾ ವೈರಸ್ ನಿಂದ ಹೊಡ್ಡ ಆರ್ಥಿಕ ಹಿನ್ನಡೆಯಾಗಿದೆ. 2020ರಲ್ಲಿ ಅತ್ಯಂತ ಕೆಟ್ಟ ಹಿಂಜರಿತವಾಗಲಿದೆ ಎಂದು ಐಎಂಎಫ್ ಹೇಳಿದೆ. ಮಾರ್ಚ್ 27ರ ನಂತರ ವಿಶ್ವದ ಆರ್ಥಿಕತೆ ಕುಸಿದಿದ್ದು ಈ ವೇಳೆ ಕೆಲವೇ ಕೆಲವು ದೇಶಗಳು ಉತ್ತಮ ಪ್ರಗತಿ ದರವನ್ನು ಕಾಯ್ದುಕೊಂಡಿದ್ದು, ಅದರಲ್ಲಿ ಭಾರತವೂ ಒಂದಾಗಿದೆ.

– ಚೆಸ್ಟ್ ಮೂಲಕ ಮಾರ್ಚ್ ಒಂದರಿಂದ 1.20 ಲಕ್ಷ ಕೋಟಿ ರೂ. ಹೊಸ ಕರೆನ್ಸಿ ಕರೆನ್ಸಿ ಚಲಾವಣೆಗೆ ಬಂದಿದೆ. ಕೋವಿಡ್-19 ನಿಂದ ಸಣ್ಣ ಮತ್ತು ಮಧ್ಯಮ ಗಾತ್ರದ ಕಾರ್ಪೊರೇಟ್ ಕಂಪನಿಗಳ ವ್ಯವಹಾರಕ್ಕೆ ಸಮಸ್ಯೆಯಾಗಿದೆ. ಈ ಕಂಪನಿಗಳಿಗೆ ದೀರ್ಘಾವಧಿ ಸಾಲ ಒದಗಿಸುವ ಬಗ್ಗೆ ಆರ್‌ಬಿಐ ಗಮನ ವಹಿಸಲಿದೆ.

RBI

– ಉತ್ಪಾದನಾ ವಲಯಗಳಲ್ಲಿ ಹೆಚ್ಚು ನಷ್ಟವಾಗಿದ್ದು ಶೇ.25-30 ಬೇಡಿಕೆ ಕುಸಿದಿದೆ ರಫ್ತು ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ಕೇವಲ ಭಾರತ ಮಾತ್ರವಲ್ಲದೇ ಜಾಗತಿಕ ಆರ್ಥಿಕತೆ 9 ಟ್ರಿಲಿಯನ್ ಡಾಲರ್ ಕುಸಿತ ಕಂಡಿದ್ದು ಉದ್ಯೋಗ ವಲಯಕ್ಕೆ ಭಾರೀ ಪೆಟ್ಟು ಬಿದ್ದಿದೆ.

– ರೆಪೋ ದರಲ್ಲಿ 25 ಬೇಸಿಸ್ ಅಂಕ ಇಳಿಸಿದೆ. ಈ ಮೂಲಕ ಶೇ.4. ಇದ್ದ ರೆಪೋ ದರ ಶೇ.3.75ಕ್ಕೆ ಇಳಿಕೆಯಾಗಿದೆ. (ವಾಣಿಜ್ಯ ಬ್ಯಾಂಕುಗಳು ಆರ್‍ಬಿಐನಿಂದ ಪಡೆಯುವ ಅಲ್ಪಾವಧಿ ಸಾಲನ ಮೇಲಿನ ಬಡ್ಡಿದರಕ್ಕೆ ರೆಪೋ ದರ ಎಂದು ಕರೆಯಲಾಗುತ್ತದೆ. ರೆಪೋ ದರ ಕಡೆಮೆಯಾದರೆ ಬ್ಯಾಂಕ್ ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಹಣವನ್ನು ಪಡೆಯಬಹುದು)

RBI reuters

– 90 ದಿನಗಳಲ್ಲಿ ಸಾಲ ಮರುಪಾವತಿ ಮಾಡದವರಿಗೆ ಆರ್‌ಬಿಐ ವಿನಾಯ್ತಿಯಡಿ ರಿಯಾಯಿತಿ. ಈ ಸಾಲವನ್ನು ಎನ್‍ಪಿಎ(ವಸೂಲಾಗದ ಸಾಲ) ಎಂದು ಪರಿಗಣಿಸುವುದಿಲ್ಲ ಮತ್ತು ಕ್ರೆಡಿಟ್ ಸ್ಕೋರ್ ಇಳಿಕೆಯಾಗುವುದಿಲ್ಲ.

– ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‍ಗೆ (ನಬಾರ್ಡ್) 25 ಸಾವಿರ ಕೋಟಿ ರೂ., ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್‍ಗೆ (ಎಸ್‍ಐಡಿಬಿ) 15 ಸಾವಿರ ಕೋಟಿ ರೂ., ರಾಷ್ಟ್ರೀಯ ಗೃಹ ನಿರ್ಮಾಣ ಬ್ಯಾಂಕ್‍ಗೆ (ಎನ್‍ಎಚ್‍ಬಿ) 10 ಸಾವಿರ ಕೋಟಿ ರೂ. ನೀಡಲು ಒಪ್ಪಿಗೆ. ವಿಶೇಷ ಮರು ಬಂಡವಾಳ ಪೂರೈಕೆಗಾಗಿ ಒಟ್ಟು 50 ಸಾವಿರ ಕೋಟಿ ರೂಪಾಯಿ ಅನುದಾನ.

RBI

– ವಿದೇಶಿ ವ್ಯಾಪಾರದ ಅಲ್ಪಾವಧಿಯ ಕೊರತೆಯನ್ನು ನೀಗಿಸಲು ಸಂಗ್ರಹಿಸುವ ವಿದೇಶಿ ವಿನಿಮಯ ನಮ್ಮಲ್ಲಿ 476.5 ಶತಕೋಟಿ ಡಾಲರ್ ನಷ್ಟಿದೆ. ಇದು 11.8 ತಿಂಗಳ ಆಮದು ನಿರ್ವಹಣೆಗೆ ಸಾಕಾಗುತ್ತದೆ.

– ದೇಶದಲ್ಲಿ ಮೊಬೈಲ್ ಬ್ಯಾಂಕಿಂಗ್ ಬಳಕೆ ಹೆಚ್ಚಾಗಿದ್ದು, ಶೇ. 91ರಷ್ಟು ಎಟಿಎಂಗಳು ಕಾರ್ಯ ನಿರ್ವಹಿಸುತ್ತಿದೆ. ಬ್ಯಾಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಹಣದ ಹರಿವು ಕಾಪಾಡಿಕೊಂಡಿದ್ದು ಬ್ಯಾಂಕುಗಳಿಗೆ ಹಣ ಕೊರತೆ ಉಂಟಾಗಿಲ್ಲ. ಈ ಸಂಬಂಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಇತರೆ ದೇಶಗಳಿಗೆ ಹೋಲಿಸಿಕೊಂಡರೆ ಭಾರತ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ.

coronavirus 1 1000x600 1

– ಭಾರತದಲ್ಲಿ ಅಗತ್ಯ ಪ್ರಮಾಣ ದಿನಸಿ ದಾಸ್ತಾನು ಹೊಂದಿದ್ದು, ಈ ಬಾರಿ ಉತ್ತಮ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದ್ದು, ಕೃಷಿ ವಲಯ ಚೇತರಿಕೆ ಕಾಣಲಿದೆ.

TAGGED:CoronacurrencyKovid-19Mobile Backingmoneyrbiಆರ್‍ಬಿಐಕರೆನ್ಸಿಕೊರೊನಾಕೋವಿಡ್ 19ಮೊಬೈಲ್ ಬ್ಯಾಂಕಿಂಗ್ಹಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
17 minutes ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
18 minutes ago
CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
28 minutes ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
45 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
1 hour ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?