– ಹಳೇ ವೈಷಮ್ಯಕ್ಕೆ ಕೃತ್ಯ ಎಸಗಿರೋ ಶಂಕೆ
ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ (Chamarajpet) ಹಸುವಿನ (Cow) ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಾಯಕನಹಳ್ಳಿ ಗ್ರಾಮ ಪಂಚಾಯ್ತಿಯ ಸೂಲಿವಾರ ಗ್ರಾಮದಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.
ತನ್ನ ಜಮೀನಿನಲ್ಲಿ ಹಸು ಮೇಯಲು ಬಂದಿದೆ ಅನ್ನೋ ಕಾರಣಕ್ಕೆ ಹಳೆಯ ದ್ವೇಷದಿಂದ ಗುರುಸಿದ್ದಪ್ಪ ಅನ್ನೋರು ಸುವಿನ ಕೆಚ್ಚಲು ಕತ್ತರಿಸಿದ್ದಾರೆ ಅನ್ನೋ ಅನುಮಾನವಿದೆ. ಅವ್ರೇ ಈ ಕೃತ್ಯವನ್ನ ಮಾಡಿರಬಹುದು ಅಂತ ಹಸುವಿನ ಮಾಲೀಕ ಮರಿ ಬಸವಯ್ಯ ಆರೋಪಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೇ ಹಸು ನಿನ್ನೆ ಜಮೀನಿನಲ್ಲೇ ಮೃತಪಟ್ಟಿದೆ. ಇದನ್ನೂ ಓದಿ: ಹೆಣ್ಣು ಹೂವಿನಂತೆ – ಇರಾನ್ ಸುಪ್ರೀಂ ನಾಯಕನ ಹಳೆಯ ಪೋಸ್ಟ್ ವೈರಲ್
ಮರಿ ಬಸವಯ್ಯ ಹಾಗೂ ಗುರು ಸಿದ್ದಪ್ಪ ಅವ್ರ ಜಮೀನುಗಳು ಅಕ್ಕಪಕ್ಕದಲ್ಲೇ ಇವೆ. ಹಲವು ವರ್ಷಗಳಿಂದ ಇವರಿಬ್ಬರ ನಡ್ವೆ ಹಳೆಯ ದ್ವೇಷ ಇತ್ತಂತೆ. ಮರಿ ಬಸವಯ್ಯ, ಸೂಲಿವಾರ ಗ್ರಾಮದ ಹಾಲು ಉತ್ಪಾದಕ ಸಂಘದ ಅಧ್ಯಕ್ಷನಾಗಿದ್ದನಂತೆ. ಒಂದು ತಿಂಗಳ ಹಿಂದೆ ನಡೆದ KMF ಚುನಾವಣೆಗೆ ಹನುಮಂತಯ್ಯ ಅನ್ನೋ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದ್ರು. ಅವ್ರ ಆಪ್ತನೇ ಈ ಗುರುಸಿದ್ದಪ್ಪ. ಹನುಮಂತಯ್ಯನವ್ರಿಗೆ ಮತ ಹಾಕಿಲ್ಲ ಅನ್ನೋ ದ್ವೇಷದಿಂದಲೂ ಈ ಕೃತ್ಯ ನಡೆದಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಏನೇ ಸಿಟ್ಟು, ಕೋಪ ಇದ್ರೂ ನಮ್ಮ ಜೊತೆ ಮಾತನಾಡಬೇಕು ಹೊರತು, ಹಸುವನ್ನ ಸಾಯಿಸೋದಲ್ಲ ಅಂತ ಮರಿ ಬಸವಯ್ಯ ಅವ್ರ ಪತ್ನಿ ಭಾಗ್ಯಮ್ಮ ಕಣ್ಣೀರು ಹಾಕಿದ್ರು. ಇದನ್ನೂ ಓದಿ: ಗುದ್ದಿದ ರಭಸಕ್ಕೆ ತುಂಡಾಗಿ ವಿದ್ಯುತ್ ಕಂಬವನ್ನೇ 50 ಅಡಿ ದೂರಕ್ಕೆ ದೂಡಿದ ಕಾರು!
ಘಟನಾ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯವನ್ನ ಯಾರು ನಡೆಸಿದ್ರೂ, ಯಾರ ಮೇಲೆ ಅನುಮಾನವಿದೆ ಅಂತ ಮರಿ ಬಸವಯ್ಯನವ್ರಿಂದ ಮಾಹಿತಿಯನ್ನ ಪಡೆದಿದ್ದಾರೆ. ಮರಿ ಬಸವಯ್ಯನವ್ರ ಜಮೀನಿನಲ್ಲಿಯೇ ಹಸುವಿನ ಅಂತ್ಯ ಸಂಸ್ಕಾರ ಮಾಡಲಾಗಿದೆ. ದೂರು ದಾಖಲಿಸಿಕೊಂಡಿರೋ ಪೊಲೀಸರು, ಈ ಕೃತ್ಯವೆಸಗಿದವ್ರ ವಿರುದ್ಧ ಏನ್ ಕ್ರಮ ಕೈಗೊಳ್ತಾರೆ ಕಾದು ನೋಡಬೇಕಿದೆ. ಇದನ್ನೂ ಓದಿ: `ಮನಿ’ ಕೊಟ್ಟರಷ್ಟೇ ಸರ್ಕಾರಿ `ಮನೆ’ – ಜಮೀರ್ಗೆ ಗೊತ್ತಿಲ್ಲ ಅಂದ್ರೆ ತನಿಖೆ ಮಾಡಿಸಲಿ: ಬಿ.ಆರ್ ಪಾಟೀಲ್ ಬಾಂಬ್