– ಉಸಿರುಗಟ್ಟಿ ಲಾರಿಯಲ್ಲೇ 5 ಹಸು ಸಾವು
ಕೋಲಾರ: ಕಳೆದ ರಾತ್ರಿ ಅಕ್ರಮವಾಗಿ ಗೋವುಗಳನ್ನ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಲಾರಿಯಲ್ಲಿದ್ದ 20ಕ್ಕೂ ಹೆಚ್ಚು ಹಸುಗಳಲ್ಲಿ 5 ಗೋವುಗಳು ಸಾವನ್ನಪ್ಪಿವೆ.
ಕೋಲಾರ ತಾಲೂಕಿನ ಚಾಕರಸನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳೆದ ರಾತ್ರಿ ಎರಡು ಲಾರಿಗಳಲ್ಲಿ ಇಪ್ಪತ್ತಕ್ಕೂ ಹೆಚ್ಚು ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಚಾಕಾರಸನಹಳ್ಳಿ ಮಾರ್ಗವಾಗಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಕೋಲಾರ ತಾಲೂಕಿನ ವಕ್ಕಲೇರಿ ವೆಂಕಟೇಶ್ ಗೌಡ ಎಂಬುವರ ಫಾರ್ಮ್ ಹೌಸ್ ಗೆ ಕರೆತರಲಾಗಿತ್ತು ಎನ್ನಲಾಗಿದೆ. ಹಸುಗಳಿಗೆ ಮೇವು ನೀಡದೆ ಕೊಲೆ ಮಾಡಿದ ಹಿನ್ನೆಲೆ ಮಾಲೀಕ ವೆಂಕಟೇಶ ಗೌಡ ಹಾಗೂ ಲಾರಿ ಚಾಲಕರಾದ ಇದಾಯಿತ್, ಕಂಸ ಪ್ರಸಾದ್ ವಿರುದ್ಧ ಪ್ರಕರಣ ದಾಖಲಾಗಿದೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ತಂದೆ ತಾಲಿಬಾನ್ ವಿರೋಧಿಯಾಗಿದ್ದಕ್ಕೆ ಮಗುವನ್ನು ಗಲ್ಲಿಗೇರಿಸಿದ್ರು
ಈ ವೇಳೆ ಅನುಮಾನಗೊಂಡ ಗ್ರಾಮಸ್ಥರು ಲಾರಿಗಳನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಲಾರಿಗಳಲ್ಲಿ ಹಸುಗಳು ಇರುವುದು ಕಂಡುಬಂದಿದೆ. ಲಾರಿಗಳಲ್ಲಿದ್ದ 20ಕ್ಕೂ ಹೆಚ್ಚು ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ, ಚಾಕಾರಸನಹಳ್ಳಿ ಮಾರ್ಗವಾಗಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಈ ಕುರಿತು ತಿಳಿಯುತ್ತಿದ್ದಂದೆ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಕೋವಿಡ್ 19 ಬೂಸ್ಟರ್ ಡೋಸ್ ಪಡೆದ ಜೋ ಬೈಡನ್
ಲಾರಿಗಳಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಗೋವುಗಳಿದ್ದ ಹಿನ್ನೆಲೆ ಉಸಿರಾಡಲಾಗದೆ, ಕಳೆದೆರಡು ದಿನಗಳಿಂದ ಸರಿಯಾದ ಮೇವು ಇಲ್ಲದೆ ಸುಮಾರು ಐದು ಹಸುಗಳು ಲಾರಿಯಲ್ಲೇ ಸಾವನ್ನಪ್ಪಿವೆ. ಇದರಿಂದ ಲಾರಿಗಳಿಂದ ದುರ್ವಾಸನೆ ಬರುತ್ತಿದ್ದು, ಗೋವುಗಳ ಆಕ್ರಂದನ ಮುಗಿಲುಮುಟ್ಟಿದೆ. ಸದ್ಯ ಗ್ರಾಮಸ್ಥರ ಸಹಾಯದಿಂದ ವೇಮಗಲ್ ಪೊಲೀಸರು ಎರಡು ಲಾರಿಗಳನ್ನ ವಶಕ್ಕೆ ಪಡೆದು ಹಸುಗಳನ್ನು ರಕ್ಷಣೆ ಮಾಡಿದ್ದಾರೆ.