Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ ರಣಹೇಡಿ, ಮಗನನ್ನೇ ಗೆಲ್ಲಿಸೋಕೆ ಆಗಿಲ್ಲ ಅಂದ್ರೆ ಕೇಂದ್ರ ಸಚಿವನಾಗಿ ಏನು ಪ್ರಯೋಜನ?: ಸಿಪಿವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುಮಾರಸ್ವಾಮಿ ರಣಹೇಡಿ, ಮಗನನ್ನೇ ಗೆಲ್ಲಿಸೋಕೆ ಆಗಿಲ್ಲ ಅಂದ್ರೆ ಕೇಂದ್ರ ಸಚಿವನಾಗಿ ಏನು ಪ್ರಯೋಜನ?: ಸಿಪಿವೈ

Districts

ಕುಮಾರಸ್ವಾಮಿ ರಣಹೇಡಿ, ಮಗನನ್ನೇ ಗೆಲ್ಲಿಸೋಕೆ ಆಗಿಲ್ಲ ಅಂದ್ರೆ ಕೇಂದ್ರ ಸಚಿವನಾಗಿ ಏನು ಪ್ರಯೋಜನ?: ಸಿಪಿವೈ

Public TV
Last updated: November 25, 2024 5:59 pm
Public TV
Share
3 Min Read
CP Yogeshwar
SHARE

ರಾಮನಗರ: ಮಗನನ್ನು ಯುದ್ಧ ಭೂಮಿಗೆ ಕಳುಹಿಸಿ ನೀನು ರಣಹೇಡಿ ಆಗಿಬಿಟ್ಟೆ ಎಂದು ಕುರುಕ್ಷೇತ್ರದ ಕಥೆಯಲ್ಲಿ ಬಭ್ರುವಾಹನ ಹೇಳುತ್ತಾನಲ್ಲ. ಇವತ್ತು ಕುಮಾರಸ್ವಾಮಿಯದ್ದು (HD Kumaraswamy) ಕೂಡ ಅದೇ ಪರಿಸ್ಥಿತಿ. ತನ್ನ ಮಗನನ್ನೇ ಗೆಲ್ಲಿಸಿಕೊಂಡು ಬರಲಿಲ್ಲ ಅಂದರೆ ಕೇಂದ್ರ ಸಚಿವ ಆಗಿ ಏನು ಪ್ರಯೋಜನ ಎಂದು ಚನ್ನಪಟ್ಟಣ ನೂತನ ಶಾಸಕ ಸಿಪಿ ಯೋಗೇಶ್ವರ್ (CP Yogeshwar) ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ (JDS) ಅವರು ಸೋತು ಸುಣ್ಣ ಆಗಿದ್ದಾರೆ. ಕುಮಾರಸ್ವಾಮಿ ಬಂಡತನ, ಅವರಿಗೆ ಇದ್ರೆ ಈ ಊರು, ಬಿಟ್ಟರೆ ಇನ್ನೊಂದು ಊರು. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮಾಡಿರುವ ಅದ್ವಾನ ಸರಿಪಡಿಸಬೇಕು. ಕುಮಾರಸ್ವಾಮಿ ಏನು ಆಸಕ್ತಿ, ಕ್ರಮ ಕೈಗೊಂಡಿಲ್ಲ. ಚನ್ನಪಟ್ಟಣ ನಗರ ಸ್ವಚ್ಛ ಮಾಡುವ ಉದ್ದೇಶದಿಂದ ಎಲ್ಲಾ ನಗರಸಭಾ ಸದಸ್ಯರ ಸಭೆ ಕರೆದಿದ್ದೇನೆ. ಚನ್ನಪಟ್ಟಣ ನಗರ ಬಹಳ ದುಸ್ಥಿತಿ ಇದೆ. ಬಸ್‌ಸ್ಟ್ಯಾಂಡ್, ಕಸ, ಯುಜಿಡಿ ಸಮಸ್ಯೆ ಇದೆ. ಇವೆಲ್ಲವನ್ನೂ ಮೊದಲು ಬಗೆಹರಿಸಬೇಕು. ಇಂದು ಸಭೆ ನಡೆಸಿ ನಿರಂತರವಾಗಿ ತಾಲೂಕು ಅಭಿವೃದ್ಧಿಗೆ ಮುಂದಾಗುತ್ತೇನೆ ಎಂದರು. ಇದನ್ನೂ ಓದಿ: ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ: ಅನಿತಾ ಕುಮಾರಸ್ವಾಮಿ

HD Kumaraswamy 1

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರವಾಗಿ ಪ್ರತಿಕ್ರಿಯಿಸಿ, ದೇವೇಗೌಡರ ನಾಯಕತ್ವ, ದೇವೇಗೌಡರು ಹುಟ್ಟುಹಾಕಿದ ಪಕ್ಷ ಅದು. ದೇವೇಗೌಡರಿಗೆ ವಯೋಸಹಜ ಇರುವುದರಿಂದ ಪಕ್ಷ ಮುನ್ನಡೆಸಲು ಸಾಧ್ಯ ಆಗುತ್ತಿಲ್ಲ. ಅದಕ್ಕೆ ಪರ್ಯಾಯವಾದ ನಾಯಕತ್ವ ಇಲ್ಲ. ಅದೊಂದು ಕುಟುಂಬ ಪಕ್ಷ. ಕುಮಾರಸ್ವಾಮಿ ಅವರು ಸೋತಿದ್ದಾರೆ. ಅವರ ನಾಯಕತ್ವದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸೀಟು ಪಡೆದುಕೊಂಡಿತ್ತು. ಅದೇ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 136 ಸೀಟು ಗೆದ್ದಿದ್ದಾರೆ. ಈ ಎರಡು ಹೋಲಿಕೆ ನೋಡಿದರೆ ಕುಮಾರಸ್ವಾಮಿ ನಾಯಕತ್ವ ಕ್ಷೀಣಿಸುತ್ತಿದೆ. ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೇ ಇದಕ್ಕೆ ಸಾಕ್ಷಿ ಎಂದು ಹೇಳಿದರು. ಇದನ್ನೂ ಓದಿ: ನಾವು ಯಾರಿಗೂ ಎಚ್ಚರಿಕೆ ಕೊಡದೇ ಜನಜಾಗೃತಿ ಮಾಡುವ ಕೆಲಸ ಮಾತ್ರ ಮಾಡಲಿದ್ದೇವೆ – ಅರವಿಂದ ಲಿಂಬಾವಳಿ

ಇಡೀ ಕುಟುಂಬವೇ ಹೋರಾಟ ಮಾಡಿದರೂ ಚನ್ನಪಟ್ಟಣ ಗೆಲ್ಲಲು ಸಾಧ್ಯ ಆಗಲಿಲ್ಲ. ಅವರನ್ನು ನಂಬಿರೋ ಕಾರ್ಯಕರ್ತರು, ಬಹಳ ಜನ ಶಾಸಕರು ನೊಂದಿದ್ದಾರೆ. ಏನಾದರೂ ಮನಸು ಮಾಡಿದರೆ ಅವರಿಗೆ ಬೇರೆ ಅವಕಾಶ ತಪ್ಪಿದರೆ ನೋಡಬಹುದು. ಪಕ್ಷವನ್ನೇ ಪಣಕ್ಕಿಟ್ಟು ಹೋರಾಟ ಮಾಡಿದರು. ಒಕ್ಕಲಿಗ ನಾಯಕತ್ವ ಬದಲಾವಣೆ ಆಗಬೇಕು. ಪರ್ಯಾಯವಾಗಿ ನಾಯಕತ್ವ ಹುಡುಕುತ್ತಿದ್ದಾರೆ. ಮುಂದೆ ಯಾರಿಗೆ ಅವಕಾಶ ಸಿಗುತ್ತದೆ ನೋಡೋಣ. ದೇವೆಗೌಡರ ಕುಟುಂಬದಿಂದ ಆಚೆ ಬರಬೇಕು ಅಂತಾ ಸಮುದಾಯ ತೀರ್ಮಾನ ಮಾಡಿದೆ.ಈ ಚುನಾವಣೆ ಫಲಿತಾಂಶದಿಂದಲೇ ಗೊತ್ತಾಗಿದೆ. ಅವರ ಕುಟುಂಬದಲ್ಲಿ ನಡೆದಿರುವ ಹಲವಾರು ಬೆಳವಣಿಗೆಗಳಿಂದ ಸಮುದಾಯ ಬೇಸತ್ತಿದೆ. ಆ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕರಿಗೆ ನೋವಾಗಿದೆ ಎಂಬ ಅರ್ಥದಲ್ಲಿ ಹೇಳಿದ್ದೇನೆ. ಅವಕಾಶ ಸಿಕ್ಕಿದರೆ ನೋಡೊಣ ಎಂದು ನುಡಿದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಈಗ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ, ಮೂವರು ಸಾವು – ಆಸ್ಪತ್ರೆಗೆ 35 ಕೋಟಿ ನಷ್ಟ

ಯೋಗೆಶ್ವರ್ ಕಾಂಗ್ರೆಸ್‌ನಲ್ಲೇ ಉಳಿಯುತ್ತಾರಾ ಎಂಬ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನಾನು ಯಾವಾಗ ಕಾಂಗ್ರೆಸ್ ಬಿಡುತ್ತೇನೆ ಎಂದಿದ್ದೇನೆ? ಬಿಜೆಪಿ ಪಕ್ಷದಿಂದ ಆಚೆ ತಳ್ಳಲ್ಪಟ್ಟವನು ನಾನು. ನಾನೇನು ಬಿಜೆಪಿ ಬಿಟ್ಟು ಬರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಪಿತೂರಿಯಿಂದ ನಾನು ಆಚೆ ಬಂದಿದ್ದೇನೆ. ನಾನು ಏನು ಅಲ್ಲಿಂದ, ಇಲ್ಲಿಂದ ಹಾರೋನು ಅಲ್ಲ. ಅನಿವಾರ್ಯ, ರಾಜಕೀಯ ಸ್ಥಿತಿ ನನ್ನನ್ನು ಆ ರೀತಿ ಮಾಡಿದೆ. ನಾನು ಕೊನೆ ದಿನದವರೆಗೂ ಕಾದು ರಾಜಕೀಯ ನಿರ್ಣಯ ತೆಗೆದುಕೊಂಡಿದ್ದೇನೆ. ನಾವು ಕಟ್ಟಿದ ಮನೆಯಿಂದ ಆಚೆ ಹಾಕಿದ ಮೇಲೆ ಬೇರೆ ಮನೆ ಹುಡುಕಿಕೊಳ್ಳಬೇಕು. ನಾನು ಪಕ್ಕಾ ಕಾಂಗ್ರೆಸ್ಸಿಗ, ಪಕ್ಷ ಬಿಡಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಸಿಎಂ ಬೇರೆ ಸಮುದಾಯಗಳಿಗೆ ಸ್ಪಂದನೆ ನೀಡುತ್ತಿದ್ದಾರೆ, ನಮ್ಮ ಸಮುದಾಯಕ್ಕೆ ಸ್ಪಂದನೆ ಇಲ್ಲ- ಜಯಮೃತ್ಯುಂಜಯ ಸ್ವಾಮೀಜಿ

TAGGED:congressCP Yogeshwarhd kumaraswamyjdsramanagaraಕಾಂಗ್ರೆಸ್ಜೆಡಿಎಸ್ರಾಮನಗರಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
36 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
52 minutes ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
1 hour ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
2 hours ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
2 hours ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?