ಬೆಂಗಳೂರು: ರಾಜ್ಯದಲ್ಲಿ ಅನೇಕ ದಿನದಿಂದ ಆಟೋ ಚಾಲಕರು ವರ್ಸಸ್ ಬೈಕ್ ಟ್ಯಾಕ್ಸಿಯವರ (Bike Taxi) ನಡುವಿನ ಗುದ್ದಾಟ ನಡೆಯುತ್ತಿತ್ತು. ಸದ್ಯ ಈಗ ಇದಕ್ಕೆಲ್ಲಾ ಇಂದಿನಿಂದ ಬ್ರೇಕ್ ಬೀಳಲಿದೆ. ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಸ್ಥಗಿತಗೊಳ್ಳಲಿದೆ.
ಟ್ರಾಫಿಕ್ ಕಡಿಮೆ, ಟ್ರಾವೆಲ್ ದರವೂ ಕಡಿಮೆ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಕ್ವಿಕ್ ಡ್ರಾಪ್ ಪಾಯಿಂಟ್. ಶರವೇಗದಲ್ಲಿ ಜನರಿಗೆ ಬೇಕಾದ ಜಾಗ ತಲುಪಿಸುವ ಕೆಲಸ ಮಾಡುತ್ತಿದ್ದದ್ದು, ಅಂದರೆ ಅದು ಬೈಕ್ ಟ್ಯಾಕ್ಸಿ. ವೈಟ್ ಬೋರ್ಡ್ನಲ್ಲಿ ಬೈಕ್ ಟ್ಯಾಕ್ಸಿ ಓಡಿಸೋದು ಸೇರಿ ಸುರಕ್ಷತೆ ವಿಚಾರದಲ್ಲಿ ಬೈಕ್ ಟ್ಯಾಕ್ಸಿ ಒಂದು ಹೆಜ್ಜೆ ಹಿಂದೆಯೇ ಉಳಿದುಕೊಂಡಿದೆ. ಇದೇ ಕಾರಣಕ್ಕೆ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗೆ ಇಳಿಯುವ ಹಾಗಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ. ಆರ್ಟಿಓ ಕೂಡ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗಿಳಿಸಿದರೆ ಅಂಥವರ ವಿರುದ್ಧ ಕ್ರಮಕ್ಕೆ ಮುಂದಾಗಲಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ದುರಂತ – 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ
ಅನಧಿಕೃತ ಬೈಕ್ ಟ್ಯಾಕ್ಸಿ ಓಡಾಟಕ್ಕೆ ನಿಷೇಧ ಹೇರಬೇಕೆಂದು ಖಾಸಗಿ ಸಾರಿಗೆ ಒಕ್ಕೂಟ ಸೇರಿ ಅನೇಕ ಆಟೋ ಚಾಲಕರ ಹಲವು ವರ್ಷಗಳ ಬೇಡಿಕೆಯಾಗಿತ್ತು. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಕೋರ್ಟ್ ನೀಡಿದ್ದ ಗಡುವು ಇಂದಿಗೆ ಮುಕ್ತಾಯ ಆಗಿದೆ. ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್ 2ರಂದು ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ಕೋರಿ ಓಲಾ, ಊಬರ್ನಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ಗಳು ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್ವೇಸ್ ಡ್ರೀಮ್ಲೈನರ್ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್ನಲ್ಲಿ ಲ್ಯಾಂಡಿಂಗ್!
ಇನ್ನೂ ನ್ಯಾಯಾಲಯದ ಆದೇಶ ಬೆನ್ನಲ್ಲೇ ಅಲರ್ಟ್ ಆದ ಸಾರಿಗೆ ಇಲಾಖೆ ತಂಡ ರೆಡಿ ಮಾಡಿದ್ದು, ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ರಸ್ತೆಗಿಳಿಸಿದರೆ ಸೀಜ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಚರಣೆಗೆ ಸಾರಿಗೆ ಇಲಾಖೆ 10 ರಿಂದ 15 ತಂಡಗಳ ರಚನೆ ಮಾಡಿದ್ದು, ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲು ಸಿದ್ಧತೆ ನಡೆಸಿದೆ. ಇದನ್ನೂ ಓದಿ: ಸ್ಮಾರ್ಟ್ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್!