Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾಗೆ ತಿಥಿ ಮಾಡಿ, ನೀವು ಅತಿಥಿ ಆಗ್ಬೇಡಿ – ಕ್ರೇಜಿ ಸ್ಟಾರ್ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾಗೆ ತಿಥಿ ಮಾಡಿ, ನೀವು ಅತಿಥಿ ಆಗ್ಬೇಡಿ – ಕ್ರೇಜಿ ಸ್ಟಾರ್ ಎಚ್ಚರಿಕೆ

Bengaluru City

ಕೊರೊನಾಗೆ ತಿಥಿ ಮಾಡಿ, ನೀವು ಅತಿಥಿ ಆಗ್ಬೇಡಿ – ಕ್ರೇಜಿ ಸ್ಟಾರ್ ಎಚ್ಚರಿಕೆ

Public TV
Last updated: April 8, 2020 7:24 pm
Public TV
Share
2 Min Read
ravichandran
SHARE

ಬೆಂಗಳೂರು: ಕೊರೊನಾ ವಿರುದ್ಧ ದೇಶದ ಹೋರಾಟಕ್ಕೆ ಎಲ್ಲರೂ ಸಾಥ್ ನೀಡಿ, ಸರ್ಕಾರದ ಆದೇಶಕ್ಕೆ ಸಹಕರಿಸಿ, ಮನೆಯಲ್ಲಿಯೇ ಇದ್ದು ಸೋಂಕು ಹರಡುವಿಕೆಗೆ ಕಡಿವಾಣ ಹಾಕಿ ಎಂದು ಸ್ಯಾಂಡಲ್‍ವುಡ್, ಟಾಲಿವುಡ್, ಬಾಲಿವುಡ್ ಸೇರಿದಂತೆ ಅನೇಕ ಸಿನಿಮಾ ಕಲಾವಿದರು, ನಟ, ನಟಿಯರು ಜನರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಕೆಲ ಜನರು ಮಾತ್ರ ಯಾರ ಮಾತನ್ನು ಕಿವಿಗೆ ಹಾಕಿಕೊಳ್ಳದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೊನಾ ಭೀಕರತೆ ಅರಿಯದೆ ಮುರ್ಖತನ ಪ್ರದರ್ಶಿಸುತ್ತಿದ್ದಾರೆ. ಇದನ್ನು ಕಂಡು ಕ್ರೇಜಿ ಸ್ಟಾರ್ ರವಿಚಂದ್ರನ್ ತಮ್ಮದೇ ಶೈಲಿಯಲ್ಲಿ ಜನರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

coronavirus 1 1000x600 1

ಕೊರೊನಾ ವೈರಸ್ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ನಾವು ಏನು ಮಾಡಬೇಕು? ನಮ್ಮ ಜವಾಬ್ದಾರಿಗಳೇನು ಎಂದು ಬೆಂಗಳೂರು ಸಿಟಿ ಪೊಲೀಸರ ಸಹಯೋಗದಲ್ಲಿ ಸಿದ್ಧಪಡಿಸಿರುವ ವಿಡಿಯೋದಲ್ಲಿ ರವಿಚಂದ್ರನ್ ತಿಳಿಸಿದ್ದಾರೆ. ಈ ಕೊರೊನಾಗೆ ತಿಥಿ ಮಾಡ್ಬೇಕು ಅಂದ್ರೆ ನೀವು ಮನೆಯಲ್ಲೇ ಇದ್ದು ಸುರಕ್ಷಿತರಾಗಿರಿ. ಸುಮ್ಮನೆ ಹೊರಬಂದು ಸೋಂಕಿಗೆ ಅತಿಥಿ ಆಗಬೇಡಿ ಎಂದು ಮಲ್ಲ ಕಿವಿ ಮಾತು ಹೇಳಿದ್ದಾರೆ.

ravichandran 2

ವಿಡಿಯೋದಲ್ಲಿ ಕ್ರೇಜಿ ಸ್ಟಾರ್ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಅಲ್ಲದೇ ವಿಡಿಯೋದಲ್ಲಿ ಮನೋರಂಜನ್ ಮತ್ತು ವಿಕ್ರಂ ಕೂಡ ತಂದೆಗೆ ಸಾಥ್ ಕೊಟ್ಟಿದ್ದಾರೆ. ಕೊರೊನಾಗೆ ಬೆಂಕಿ ಹಚ್ಚಬೇಕು ಅಂದರೆ ನಿಮ್ಮನೆ ದೀಪ ಆರಬಾರದು. ಹೀಗಾಗಿ ನೀವಷ್ಟೂ ಜನ ಮನೆಯಲ್ಲಿರಬೇಕು. ದೇವಸ್ಥಾನಗಳೆಲ್ಲವೂ ಮುಚ್ಚಿದೆ ಅಂದರೆ ದೇವರು ಇಲ್ಲ ಅಂತಾನಾ? ಡಾಕ್ಟರ್ಸ್‍ಗಳಲ್ಲಿ, ನರ್ಸ್‍ಗಳಲ್ಲಿ, ಪೊಲೀಸರಲ್ಲಿ ಹಾಗೂ ಈ ಸಂದರ್ಭದಲ್ಲಿ ಸೇವೆ ಮಾಡುತ್ತಿರುವ ಪ್ರತಿಯೊಬ್ಬರಲ್ಲಿಯೂ ಆ ದೇವರು ಇದ್ದಾನೆ. ಆ ದೇವರ ಮೇಲೆ ನಿಮಗೆ ನಂಬಿಕೆ ಇದ್ದರೆ ನೀವು ಮಾಡಬೇಕಿರುವುದು ಇಷ್ಟೇ. ಅವರಷ್ಟೂ ಜನರಕ್ಕೆ ಒಂದು ಸಲ್ಯೂಟ್, ನಮಸ್ಕಾರ, ಒಂದು ಫ್ಲೈಯಿಂಗ್ ಕಿಸ್ ಕೊಟ್ಟು ಧ್ಯನವಾದ ಹೇಳಿ ಎಂದಿದ್ದಾರೆ.

https://twitter.com/ActorManoranjan/status/1247523467550838786

ಎಷ್ಟು ಜನ್ಮವೆತ್ತಿದರೂ ನಮಗಾಗಿ ಈ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವವರ ಋಣ ತೀರಿಸಲು ಆಗೊಲ್ಲ. ಅದನ್ನು ತೀರಿಸಬೇಕು ಅಂತ ನಿಮಗೆ ಅನಿಸಿದರೆ ನೀವು ಮನೆಯಲ್ಲಿಯೇ ಇರಿ. ವೈದ್ಯರು, ಪೊಲೀಸರಿಗೆ ಕೊರೊನಾ ವಿರುದ್ಧ ಹೋರಾಡಲು ಬಿಡಿ. ನಿಮ್ಮ ಜೊತೆ ಹೋರಾಡುವುದಲ್ಲ ಪೊಲೀಸರ ಕೆಲಸವಲ್ಲ ಎಂದು ತಿಳಿ ಹೇಳಿದ್ದಾರೆ.

ravichandran 1

ಕೊರೊನಾಗೆ ತಿಥಿ ಮಾಡಬೇಕು ಅಂದರೆ ನೀವು ಅದಕ್ಕೆ ಅತಿಥಿಯಾಗಬಾರದು. ಮನುಷ್ಯನಿಗೆ ಕಷ್ಟ ಬಂದಾಗಲೇ ಆ ಪರಿಸ್ಥಿತಿಯನ್ನು ಆತ ಹೇಗೆ ನಿಭಾಯಿಸುತ್ತಾನೆ ಎನ್ನೋದರ ಮೇಲೆ ಆತನ ವ್ಯಕ್ತಿತ್ವ ಗೊತ್ತಾಗುತ್ತೆ. ಅಂತಹದೊಂದು ಪರೀಕ್ಷೆ ನಮ್ಮೆಲ್ಲರಿಗೂ ಬಂದಿದೆ. ಈ ಪರೀಕ್ಷೆಯನ್ನು ನಾವು ಪಾಸು ಮಾಡಬೇಕು ಎಂದರೆ ನೀವೆಲ್ಲರೂ ಮನೆಯಲ್ಲಿ ಇರಬೇಕು. ಸಾಮಾಜಿಕ ಅಂತರವನ್ನು ಪಾಲಿಸಬೇಕು. ಆದರೆ ಫೇಲ್ ಆಗಬೇಕು ಎಂದರೆ ನಿಮ್ಮಿ ಇಷ್ಟ. ನೀವು ಮನೆಯಿಂದ ಹೊರಗೆ ಬನ್ನಿ. ಆಗ ನಿಮಗೆ ನಿಮ್ಮ ಹೆಸರು ಕೂಡ ನೆನಪಿರೊಲ್ಲ. ಏಕೆಂದರೆ ಅದೊಂದು ಪೇಷೆಂಟ್ ನಂಬರ್ ಆಗಿಬಿಡುತ್ತದೆ. ನೀವು ಪೇಷೆಂಟ್ ಆಗಲು ಬಯಸಿದ್ದೀರಾ ಅಥವಾ ಮನೆಯಲ್ಲಿ ಪೇಷೆನ್ಸ್ ನಿಂದ ಇರಲು ಬಯಸಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ravichandran 3

ವಿಡಿಯೋ ಕೊನೆಯಲ್ಲಿ ಕ್ರೇಜಿ ಸ್ಟಾರ್ ಮತ್ತೊಮ್ಮೆ ಡಾಕ್ಟರ್‍ಗಳಿಗೆ, ನರ್ಸ್‍ಗಳಿಗೆ, ಪೊಲೀಸರಿಗೆ, ಅವರ ಕುಟುಂಬದವರಿಗೆ, ಸರ್ಕಾರದವರಿಗೆ ಹಾಘೂ ನಮಗಾಗಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬರಿಗೂ ನಮ್ಮ ಕಡೆಯಿಂದೊಂದು ಸಲ್ಯೂಟ್ ಎಂದು ಧನ್ಯವಾದ ತಿಳಿಸಿದ್ದಾರೆ.

ಈ ವಿಡಿಯೋವನ್ನು ರವಿಚಂದ್ರನ್ ಪುತ್ರ ನಟ ಮನೋರಂಜನ್ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಾವು ಮನೆಯಲ್ಲೇ ಉಳಿದರೆ ಮಾತ್ರ ಕೋವಿಡ್-19 ಅರೆಸ್ಟ್ ಆಗಲು ಸಾಧ್ಯ, ನಮ್ಮ ಸುರಕ್ಷತೆ ನಮ್ಮ ಕೈಯಲ್ಲಿದೆ ಎಂದು ಕ್ಯಾಪ್ಷನ್ ಹಾಕಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

TAGGED:AwarenessbengaluruCoronavirusdoctorsFanspeoplepolicePublic TVravichandranvideoಅಭಿಮಾನಿಗಳುಕೊರೊನಾ ವೈರಸ್ಜನರುಜಾಗೃತಿಪಬ್ಲಿಕ್ ಟಿವಿಪೊಲೀಸರುಬೆಂಗಳೂರುರವಿಚಂದ್ರನ್ವಿಡಿಯೋವೈದ್ಯರು
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

B.Y Vijayendra
Bengaluru City

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು

Public TV
By Public TV
18 minutes ago
Kerala bus on Hampi tour overturns three students one teacher injured 2
Bellary

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ

Public TV
By Public TV
18 minutes ago
2 British Tourists Get Leave India Notice Over Free Palestine Stickers
Latest

ಭಾರತ ಬಿಟ್ಟು ತೊಲಗಿ – ಫ್ರೀ ಪ್ಯಾಲೆಸ್ಟೈನ್ ಸ್ಟಿಕ್ಕರ್‌ ಅಂಟಿಸಿದ ಬ್ರಿಟಿಷ್ ದಂಪತಿಗೆ ನೋಟಿಸ್‌

Public TV
By Public TV
49 minutes ago
priest
Chikkamagaluru

ಮದುವೆಗಾಗಿ ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನಿಂದ ಅತ್ಯಾಚಾರ?

Public TV
By Public TV
1 hour ago
Ghaziabad
Crime

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Public TV
By Public TV
2 hours ago
Ration Card
Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?