ಆರ್‌ಸಿಬಿ ಮ್ಯಾಚ್ ವೇಳೆ ನಲಪಾಡ್ ಅಬ್ಬರ

Public TV
1 Min Read
NALAPAD copy

ಬೆಂಗಳೂರು: ಕಳೆದ ದಿನ ನಡೆದ ಆರ್‌ಸಿಬಿ ಮ್ಯಾಚ್ ವೇಳೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಚೌಕಿದಾರ್ ಚೋರ್ ಎಂದು ಘೋಷಣೆ ಕೂಗಿದ್ದಾರೆ.

ಭಾನುವಾರ ರಾತ್ರಿ 2019ರ 12ನೇ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿಯ ಆರನೇ ಮ್ಯಾಚ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಐಪಿಎಲ್ ಮ್ಯಾಚ್ ನೋಡಲು ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಸ್ಟೇಡಿಯಂಗೆ ಹೋಗಿದ್ದಾರೆ. ಆದರೆ ನಲಪಾಡ್ ಸ್ಟೇಡಿಯಂನ ಗ್ಯಾಲರಿಯಲ್ಲಿ ನಿಂತು ಪದೇ ಪದೇ ಚೌಕಿದಾರ್ ಚೋರ್ ಹೇ…ಚೌಕಿದಾರ್ ಚೋರ್ ಹೇ… ಎಂದು ಘೋಷಣೆ ಕೂಗಿದ್ದಾರೆ.

NALPAD

ಅಷ್ಟೇ ಅಲ್ಲದೇ 2019ರ 12ನೇ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ 6ನೇ ಪಂದ್ಯದಲ್ಲೂ ಸೋತಿದ್ದಕ್ಕೆ ಅಭಿಮಾನಿಯೊಬ್ಬ ಕೋಪಗೊಂಡ ಕೈಯಲ್ಲಿದ್ದ ಬ್ಯಾಟ್‍ನಿಂದ ಟಿವಿಯನ್ನು ಪುಡಿ ಪುಡಿ ಮಾಡಿದ್ದಾನೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ವಿಕೆಟ್ ಗಳೊಂದಿಗೆ ಗೆಲುವು ಸಾಧಿಸಿದೆ.

ಈ ಹಿಂದೆ ನಡೆದ ಮ್ಯಾಚ್‍ನಲ್ಲೂ ಕ್ರೀಡಾಂಗಣದಲ್ಲಿ ‘ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಬೋರ್ಡ್ ಹಿಡಿದು ಘೋಷಣೆ ಕೂಗಿದ್ದರು. ಜಾಗ್ವಾರ್ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಉಲ್ಲೇಖಿಸಿ `ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಹೇಳಿದ್ದರು. ಆ ಬಳಿಕ ಈ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೂಪಗಳಲ್ಲಿ ಹರಿದಾಡುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *