ದಾವಣಗೆರೆ: ಬಾಲಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ (Davanagere) ನಗರದ ಮಾರ್ಕೇಟ್ ಸಮೀಪದ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.
ದಾವಣಗೆರೆಯ ಚಿಕ್ಕನಹಳ್ಳಿಯ ತರುಣ್ (16) ಅತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಏನೂ ಕೆಲಸವನ್ನೂ ಮಾಡದೇ ಮನೆಯಲ್ಲೇ ಇರುತ್ತಿದ್ದ ಬಾಲಕನಿಗೆ ಕೆಲಸಕ್ಕೆ ಹೋಗುವಂತೆ ಪೋಷಕರು ಗದರಿದ್ದರು. ಸುಮ್ಮನೆ ಹುಡುಗರ ಜೊತೆ ಸೇರಿ ಕೆಟ್ಟ ದಾರಿ ಹಿಡಿಯುವ ಬದಲು ಕೆಲಸಕ್ಕೆ ಹೋಗು ಎಂದು ತಿಳುವಳಿಕೆ ಹೇಳಿದ್ದರು. ಇದನ್ನೂ ಓದಿ: 10 ಲಕ್ಷ ನಗದು, 200 ಗ್ರಾಂ ಚಿನ್ನ ಕೊಟ್ರು ಕಾರು, ಮನೆಗಾಗಿ ಚಿತ್ರಹಿಂಸೆ – ನದಿಗೆ ಹಾರಿ ನವವಿವಾಹಿತೆ ಆತ್ಮಹತ್ಯೆ
ಇದರಿಂದ ಮನನೊಂದು ತರುಣ್ ಮನೆ ಬಿಟ್ಟು ಹೋಗಿದ್ದ. ಆತನಿಗಾಗಿ ಕುಟುಂಬಸ್ಥರು ರಾತ್ರಿ ಹುಡುಕಾಟ ನಡೆಸಿದ್ದರು. ಬೆಳಗ್ಗೆ ರೈಲುಹಳಿ ಮೇಲೆ ರುಂಡ ಮುಂಡ ಬೇರೆಯಾಗಿ ತರುಣ್ ಮೃತದೇಹ ಪತ್ತೆಯಾಗಿತ್ತು. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Kalaburagi | ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ – ಕಾಲು ಕಟ್

