ರಾಯಚೂರು: ಎತ್ತುಗಳಿಗೆ ಸ್ನಾನ ಮಾಡಿಸಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ರಾಯಚೂರಿನ (Raichuru) ಸರ್ಜಾಪುರದಲ್ಲಿ (Sarjapura) ನಡೆದಿದೆ.
ಗಾಯಗೊಂಡ ರೈತನನ್ನು ಸರ್ಜಾಪುರ ಗ್ರಾಮದ ಮಹಾನಂದ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: Kolar | ಮೊಬೈಲ್ನಲ್ಲಿ ರೀಲ್ಸ್ ನೋಡ್ತಾ ಬಸ್ ಚಾಲನೆ – ಚಾಲಕ ಅಮಾನತು
Advertisement
Advertisement
ಕೆರೆಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವಾಗ ಮೊಸಳೆ ದಾಳಿ ಮಾಡಿದೆ. ಇದರಿಂದ ರೈತನಿಗೆ ಬಲಗಾಲಿಗೆ ಗಂಭೀರ ಗಾಯವಾಗಿದ್ದು, ರೈತನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಹಿಡಿಯಲು ಕಾರ್ಯಾಚರಣೆ ನಡೆಸಿ, ಗ್ರಾಮಸ್ಥರ ಸಹಾಯದೊಂದಿಗೆ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.
Advertisement
ಇನ್ನೂ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆಯನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಮೊಸಳೆ ಸೆರೆ ಸಿಕ್ಕ ಹಿನ್ನೆಲೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕೆರೆಯಲ್ಲಿ ಇನ್ನೂ ಎರಡು ಮೊಸಳೆಗಳು ಇರುವ ಬಗ್ಗೆ ಶಂಕೆಯಿದ್ದು, ಆ ಎರಡು ಮೊಸಳೆಗಳನ್ನು ಹಿಡಿಯುವಂತೆ ಒತ್ತಾಯಿಸಿದ್ದಾರೆ.ಇದನ್ನೂ ಓದಿ: Union Budget 2025: 77 ನಿಮಿಷಗಳ ಕಾಲ 8ನೇ ಬಜೆಟ್ ಮಂಡಿಸಿದ ಸೀತಾರಾಮನ್
Advertisement