Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ರಾಜ್ಯದಲ್ಲಿ ಭಾರೀ ಮಳೆ – ಹಾರಿತು ಶೀಟ್, ನೆಲಕ್ಕೆ ಉರುಳಿತು ವಿದ್ಯುತ್ ಕಂಬಗಳು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಭಾರೀ ಮಳೆ – ಹಾರಿತು ಶೀಟ್, ನೆಲಕ್ಕೆ ಉರುಳಿತು ವಿದ್ಯುತ್ ಕಂಬಗಳು

Bengaluru City

ರಾಜ್ಯದಲ್ಲಿ ಭಾರೀ ಮಳೆ – ಹಾರಿತು ಶೀಟ್, ನೆಲಕ್ಕೆ ಉರುಳಿತು ವಿದ್ಯುತ್ ಕಂಬಗಳು

Public TV
Last updated: April 30, 2019 10:31 pm
Public TV
Share
2 Min Read
Rain D
SHARE

– ಇನ್ನೂ ಎರಡು ದಿನ ಮಳೆ ಸಾಧ್ಯತೆ
– ಕೋಟ್ಯಂತರ ಮೌಲ್ಯದ ಬೆಳೆ ನಾಶ

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಬೆಂಗಳೂರು, ಮೈಸೂರು, ಚಿತ್ರದುರ್ಗ, ರಾಮನಗರ ಸೇರಿದಂತೆ ಇಂದು ಕೂಡ ಮಳೆಯಾಗಿದೆ. ಯಾದಗಿರಿಯಲ್ಲಿ ಕೇವಲ ಬಿರುಗಾಳಿಗೆ ಮನೆಯ ಶೀಟ್‍ಗಳು ಹಾರಿ ಹೋಗಿದ್ದು, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹುಟ್ಟಿಕೊಂಡಿರುವ ಫನಿ ಚಂಡಮಾರುತ ಒಡಿಶಾ ಸಮುದ್ರತೀರವನ್ನು ಪ್ರವೇಶಿಸಿದೆ. ಬಂಗಾಳಕೊಲ್ಲಿಯ ಈಶಾನ್ಯದಿಂದ 950 ಕಿಲೋಮೀಟರ್ ದೂರದಿಂದ ಚಂಡಮಾರುತ ಸಾಗಿ ಬರಲಿದೆ. ಹೀಗಾಗಿ ಆಂಧ್ರಪ್ರದೇಶ, ತಮಿಳುನಾಡು, ಒಡಿಶಾ, ಕೇರಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದರ ಎಫೆಕ್ಟ್‍ಗೆ ರಾಜ್ಯದಲ್ಲೂ ಹಲವೆಡೆ ಭಾರೀ ಮಳೆಯಾಗುತ್ತಿದೆ.

YGR RAIN EFFECT AVB 3

ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆಗೆ ಬಾಳೆ, ಕಬ್ಬು, ತೆಂಗು, ಅರಿಶಿಣ ಮತ್ತಿತ್ತರ ಬೆಳೆಗಳು ನಾಶಗೊಂಡು ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದ ಗುಳ್ಳದಪುರ ಗ್ರಾಮದಲ್ಲಿ ಗಾಳಿಗೆ ಕೋಳಿ ಫಾರಂ ಹಾಗೂ ಕುರಿ ಫಾರಂ ಧ್ವಂಸವಾಗಿದೆ. ದಾವಣಗೆರೆ ಜಿಲ್ಲೆಯ ಎಲೆ ಬೇತೂರು, ಪುಟುಗ್ನಾಳ್ ಗ್ರಾಮದಲ್ಲಿ ತೆಂಗು, ಅಡಕೆ ಮರಗಳು ನೆಲಸಮವಾಗಿದ್ದು, ಹತ್ತಾರು ಮನೆಗಳ ಮೇಲ್ಫಾವಣಿಗಳು ಹಾರಿಹೋಗಿವೆ. ಕೊಡಗಿನ ಕುಶಾಲನಗರದ ಕೆಇಬಿ ಮಂಟಿಯ ಮನೆಯೊಂದರ 30 ಶೀಟುಗಳು ಗಾಳಿಗೆ ಹಾರಿ ಪುಡಿಪುಡಿಯಾಗಿವೆ. ಕೊಪ್ಪಳ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಮೂವರು ಗಾಯಗೊಂಡಿದ್ದಾರೆ.

Rain C

ಮೈಸೂರಿನಲ್ಲಿ ಸಂಜೆ ಅರ್ಧ ಗಂಟೆಗೂ ಹೆಚ್ಚು ಸಮಯ ಎಡಬಿಡದೆ ಮಳೆ ಸುರಿದಿದೆ. ದಿಢೀರ್ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡು, ವಾಹನ ಸವಾರರು ಪರದಾಡುವಂತಾಯಿತು. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕಾಟನಾಯಕನಹಳ್ಳಿ ಗ್ರಾಮದ ಶ್ರೀಪಾರ್ಥಲಿಗೇಶ್ವರ ದೇವಸ್ಥಾನದ ಬಳಿಯ ತೆಂಗಿಮರಕ್ಕೆ ಬೆಂಕಿ ಸಿಡಿಲು ಬಡಿದಿದೆ. ಪರಿಣಾಮ ತೆಂಗಿನ ಮರ ಹೊತ್ತಿ ಉರಿದಿದೆ. ಅಷ್ಟೇ ಅಲ್ಲದೆ ದೇವಸ್ಥಾನದ ಗೋಪುರದಲ್ಲಿರುವ ಬಸವಣ್ಣನ ಮೂರ್ತಿಯ ತಲೆ ಭಾಗ ಪುಡಿ ಪುಡಿಯಾಗಿದೆ.

Rain A

ರೇಷ್ಮೆನಗರಿ ರಾಮನಗರ ಜಿಲ್ಲೆಯಾದ್ಯಂತ ಮಳೆರಾಯ ಇಂದು ತಂಪನ್ನೆರೆದಿದ್ದಾನೆ. ರಾಮನಗರ, ಮಾಗಡಿ, ಚನ್ನಪಟ್ಟಣ ಸೇರಿದಂತೆ ವಿವಿಧೆಡೆ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಗುಡುಗು, ಸಿಡಿಲು, ಗಾಳಿ ಸಹಿತ ಜೋರು ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜಿಲ್ಲೆಯ ಜನರು ಇಂದು ಸುರಿದ ಮಳೆಯಿಂದ ಖುಷಿಯಾಗಿದ್ದಾರೆ. ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಅಷ್ಟೇ ಅಲ್ಲದೇ ವಾಹನ ಸವಾರರು ರಸ್ತೆಯಲ್ಲಿ ನಿಂತ ಮಳೆ ನೀರಿನಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

Rain E

ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಟೌನ್ ಹಾಲ್, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಎರಡು ದಿನಗಳ ಕಾಲ ಬೆಂಬಿಡದೇ ವರುಣ ಕಾಡಲಿದ್ದಾನೆ ಎಂದು ಪಬ್ಲಿಕ್ ಟಿವಿಗೆ ರಾಜ್ಯ ನೈಸರ್ಗಿಕ ಮತ್ತು ಪ್ರಾಕೃತಿ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

TAGGED:bengaluruchamarajanagarCrop lossheavy rainPublic TVyadgirಕರ್ನಾಟಕಪಬ್ಲಿಕ್ ಟಿವಿಫಣಿಬೆಂಗಳೂರುಮಳೆಮೈಸೂರು
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

big bulletin 05 may 2026 part 3
Big Bulletin

ಬಿಗ್‌ ಬುಲೆಟಿನ್‌ 05 May 2026 ಭಾಗ-3

Public TV
ByPublic TV
26 minutes ago
Brazil Small Plane Crash
Latest

Brazil | ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ಪೈಲಟ್ ಸೇರಿ ಮೂವರು ಸಾವು

Public TV
ByPublic TV
1 hour ago
HD Kumaraswamy
Districts

ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್‌ಡಿಕೆ

Public TV
ByPublic TV
1 hour ago
Zameer Ahmed Home Theft
Bengaluru City

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ – ಇಬ್ಬರು ಅರೆಸ್ಟ್

Public TV
ByPublic TV
2 hours ago
chamarajanagara accident
Chamarajanagar

ಸೈಕಲ್‌ಗೆ ಟೆಂಪೋ ಡಿಕ್ಕಿ- 11 ವರ್ಷದ ಬಾಲಕ ಸ್ಥಳದಲ್ಲೇ ಸಾವು

Public TV
ByPublic TV
3 hours ago
Mamata Banerjee Himanta Sarma
Latest

ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ರೆ ವಜಾಗೊಳಿಸಿ: ಹಿಮಂತ ಶರ್ಮಾ ಕಿಡಿ

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?