ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ವಾಡಿಕೆಗೂ ಮೊದಲೇ ಭಾರೀ ಒಳ ಹರಿವು ಹೆಚ್ಚಾಳವಾಗಿದ್ದು, ಡ್ಯಾಂ ಹಿನ್ನೀರಿನ ಬೆಳೆ ಜಲಾವೃತವಾಗಿವೆ.
ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿನ ಹಿನ್ನೀರಿನಲ್ಲಿ ಮೆಕ್ಕೆಜೋಳ ಬೆಳೆ ನೀರು ಪಾಲಾಗಿದೆ. ಇದರಿಂದ ರೈತ ಮಂಜುನಾಥ್ ಕಂಗಲಾಗಿದ್ದಾರೆ. ಸಾಮಾನ್ಯವಾಗಿ ಜುಲೈ ಕೊನೆಯ ವಾರ ಟಿಬಿ ಡ್ಯಾಂನಲ್ಲಿ ಹೆಚ್ಚಿನ ಒಳ ಹರಿವು ಹೆಚ್ಚಾಗುತ್ತದೆ. ಆದರೆ ಈ ಬಾರಿ ತುಂಗಭದ್ರಾ ಜಲಾಶಯಕ್ಕೆ ನಿರೀಕ್ಷೆಗೂ ಮೊದಲೇ 85 ಸಾವಿರ ಕ್ಯೂಸೆಕ್ ಒಳ ಹರಿವು ಹೆಚ್ಚಾಗಿದ್ದು, ಸದ್ಯ ಜಲಾಶಯದಲ್ಲಿ 27 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಕಾರೊಳಗೆ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ!
ಈ ಹಿನ್ನೆಲೆಯಲ್ಲಿ ಜಲಾಶಯಕ್ಕಾಗಿ ಭೂ ಸ್ವಾಧೀನ ಮಾಡಿಕೊಂಡ ಭೂಮಿಯಲ್ಲಿ ಬೆಳೆದ ಬೆಳೆ ನೀರಿನಲ್ಲಿ ನಿಂತಿದೆ. ಈ ಕಾರಣದಿಂದಾಗಿ ರೈತ ಮಂಜುನಾಥ ಗಂಗಮ್ಮ ಗೋಳಾಡುತ್ತಾ ಕಣ್ಣಿರು ಹಾಕಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಹಿಮಾಚಲ ಉಪಸಭಾಧ್ಯಕ್ಷರಿಂದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಆರೋಪ