-ಬರ್ತ್ ಡೇ ದಿನದಂದು ಅಮ್ಮನನ್ನು ಕಳೆದುಕೊಂಡ ಕಂದಮ್ಮ
ಹಾವೇರಿ: ಕಟ್ಟಿಗೆ ತುಂಬಿಕೊಂಡು ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಆರು ಜನರು ಸಾವನ್ನಪ್ಪಿದ್ದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದ ಬಳಿ ನಡೆದಿದೆ.
ಮೃತರಲ್ಲಿ ಓರ್ವ ಪುರುಷ ಮತ್ತು ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನ ಮಾಕನೂರು, ಕೊಡಿಹಾಳ ಹೊಸಪೇಟೆ ಮತ್ತು ಇಟಗಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ನಾಗರಾಜ್ (24), ಪೂರ್ಣೀಮಾ (30), ಗೌರಮ್ಮ (28), ಗಂಗಮ್ಮ (30), ಸರ್ವಮ್ಮ (35) ಮೃತಪಟ್ಟವರು ಎನ್ನಲಾಗಿದೆ. ಮಾಕನೂರು ಗ್ರಾಮದಿಂದ ಮಗನ ಬರ್ತ್ ಡೇ ಮಾಡಲು ಸಿಂಗದೂರು ಚೌಡೇಶ್ವರಿ ದೇವಿ ದರ್ಶನ ಪಡೆದುಕೊಂಡು ಮರಳಿ ಬರುವ ವೇಳೆ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡ ಐವರನ್ನು ಓಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಅದೃಷ್ಟವಶಾತ್ 3 ವರ್ಷದ ಬರ್ತ್ ಡೇ ಬಾಯ್ ವಿಶ್ವನಥ್ ನಿಗೆ ಬದುಕುಳಿದಿದ್ದಾನೆ. ಸ್ಥಳಕ್ಕೆ ಹಲಗೇರಿ ಠಾಣೆ ಪಿಎಸ್ಐ ಶ್ರೀಶೈಲ ಚೌಗಲಾ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕ್ರೂಸರ್ ವಾಹನದಲ್ಲಿ ಸಿಲುಕಿದ್ದ ಗಾಯಾಳುಗಳನ್ನ ಕೂಡಲೇ 108 ವಾಹನದ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ರಾಣೇಬೆನ್ನೂರು ತಾಲೂಕು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಸ್ಥಳದಲ್ಲಿ ಮೃತರ ಆಕ್ರಂದನ ಮುಗಿಲು ಮುಟ್ಟಿದೆ.