Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಟಿ ರವಿ ಕೇಸ್‌ – ಪ್ರತಿಷ್ಠೆಗೆ ಬಿದ್ದು ಏನೋ ಮಾಡಲು ಹೋಗಿ ಯಡವಟ್ಟು ಮಾಡಿತಾ ಸರ್ಕಾರ?

Public TV
Last updated: December 21, 2024 10:57 am
Public TV
Share
3 Min Read
CT Ravi Case Karnataka government mistakes High court bail 1
SHARE

ಬೆಂಗಳೂರು: ಸಿಟಿ ರವಿ ಪ್ರಕರಣದಲ್ಲಿ (CT Ravi) ಪ್ರತಿಷ್ಠೆಗೆ ಬಿದ್ದು ಏನೋ ಮಾಡಲು ಹೋಗಿ ಏನೋ ಮಾಡಿ ರಾಜ್ಯ ಸರ್ಕಾರ (Karnataka Government) ಯಡವಟ್ಟು ಮಾಡಿಕೊಂಡಿತಾ ಎಂಬ ಪ್ರಶ್ನೆ ಈಗ ಎದ್ದಿದೆ.

ಹೌದು. ಸದನದಲ್ಲಿ ಆದ ವಿಚಾರವನ್ನು ಹೊರಗೆ ತಂದು ಸಿಟಿ ರವಿ ಬಂಧನ ಮಾಡಿದ ನಂತರದ ಬೆಳವಣಿಗೆ, ಪೋಲೀಸರ (Police) ವರ್ತನೆಯಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗಿದೆ.

ಏನೇನು ಯಡವಟ್ಟಾಗಿದೆ?
ಅಧಿವೇಶನ ನಡೆಯುತ್ತಿರುವಾವಾಗಲೇ ಜನಪ್ರತಿನಿಧಿ ಬಂಧಿಸಿದ್ದು ಈಗ ಸಾಕಷ್ಟು ಚರ್ಚೆ ಆಗುತ್ತಿದೆ. ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ಮತ್ತು ಕಲಾಪ ನಿಯಮಾವಳಿಯ ಅನ್ವಯ ಸಭಾಧ್ಯಕ್ಷರ ಅನುಮತಿ ಇಲ್ಲದೇ ಬಂಧನ ಮಾಡುವಂತಿಲ್ಲ. ಆದರೆ ಈ ಪ್ರಕರಣದಲ್ಲಿ ಸ್ಪೀಕರ್‌ ಅವರ ಅನುಮತಿ ಪಡೆಯದೇ ಬಂಧಿಸಲಾಗಿದೆ.

 

ಬಿಎನ್‌ಎಸ್‌ ಕಾಯ್ದೆಯ ಸೆಕ್ಷನ್‌ 75 ಕ್ಕೆ 3 ವರ್ಷ ಸಜೆ ಇದೆ. 79 ಕ್ಕೆ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಆದರೆ 7 ವರ್ಷಗಳ ಒಳಗಿನ ಶಿಕ್ಷೆಗೆ ನೋಟಿಸ್ ನೀಡಬೇಕು. ಆದರೆ ನೋಟಿಸ್ ನೀಡದೇ ಅರೆಸ್ಟ್ ಮಾಡಲಾಗಿದೆ. ಸಿಟಿ ರವಿಗೆ ಜಾಮೀನು ನೀಡಿದ ಆದೇಶದಲ್ಲಿ ಹೈಕೋರ್ಟ್‌ ಈ ವಿಚಾರವನ್ನು ಉಲ್ಲೇಖಿಸಿದೆ.

ಸಿಟಿ ರವಿ ಬಂಧನ ಬಳಿಕ ಪೊಲೀಸರ ವರ್ತನೆಯ ಬಗ್ಗೆ ಭಾರೀ ಅನುಮಾನ ವ್ಯಕ್ತವಾಗುತ್ತಿದೆ. ಯಾವ ಠಾಣೆಯ ಪೊಲೀಸರು (Police) ಬಂಧನ ಮಾಡಿದ್ದಾರೋ ಠಾಣೆಯಲ್ಲೇ ಆರೋಪಿಯನ್ನು ಇಟ್ಟುಕೊಳ್ಳಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆಗೆ ಅಡ್ಡಿಯಾದರೆ ಭದ್ರತೆ ಪೊಲೀಸರನ್ನು ಕರೆಸಿಕೊಳ್ಳಬೇಕು ಅಥವಾ ಭದ್ರತೆ ಹೆಚ್ಚು ಇರುವ ಜಾಗದಲ್ಲಿ ಆರೋಪಿಯನ್ನು ಇಟ್ಟುಕೊಳ್ಳೇಬಕು. ಆದರೆ ಪೊಲೀಸರು ಠಾಣೆಯಲ್ಲಿ ಇರಿಸದೇ ರಾತ್ರಿಯಿಡಿ ಬೆಳಗಾವಿಯನ್ನು ಸುತ್ತಿಸಿದ್ದು ಯಾಕೆ ಎನ್ನುವುದೇ ದೊಡ್ಡ ಪ್ರಶ್ನೆ. ಕಾನೂನಿನ ಪ್ರಕಾರ ಏನು ನಿಯಮ ಪಾಲನೆ ಮಾಡಬೇಕೋ ಆ ನಿಯಮವನ್ನು ಪೊಲೀಸರು ಮಾಡಬೇಕಿತ್ತು. ಆದರೆ ಇಲ್ಲಿ ಪೊಲೀಸರು ಯಾರದ್ದೋ ಅದೇಶವನ್ನು ಪಾಲನೆ ಮಾಡಲು ರಾತ್ರಿಯಿಡಿ ಸುತ್ತಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

 

ಸದನದಲ್ಲಿ ಪ್ರಸ್ತಾಪವಾದ ವಿಚಾರಗಳನ್ನ ಹೊರಗೆ ತರಲು ಅವಕಾಶವಿಲ್ಲ. ಒಂದು ವೇಳೆ ಈ ಪ್ರಕರಣಕ್ಕೆ ಅವಕಾಶ ನೀಡಿದರೆ ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲಿ ಜನಪ್ರತಿನಿಧಿಗಳ ಮೇಲೆ ಹಲವು ಕೇಸ್‌ ದಾಖಲಿಸಲು ಅವಕಾಶ ನೀಡಿದಂತಾಗುತ್ತದೆ. ಸಿಟಿ ರವಿ ಪರ ವಕೀಲರು ಈ ವಿಚಾರವನ್ನು ಕೋರ್ಟ್‌ ಗಮನಕ್ಕೆ ತಂದಿದ್ದರು. ಈ ವಿಷಯಗಳು ರಾಜ್ಯ ಸರ್ಕಾರಕ್ಕೆ, ಕಾನೂನು ಪಂಡಿತರಿಗೆ, ಪೊಲೀಸರಿಗೆ ತಿಳಿದಿದ್ದರೂ ಸಿಟಿ ರವಿಯನ್ನು ಬಂಧಿಸಿದ್ದು ಹೇಗೆ ಎನ್ನುವುದೇ ಈಗ ದೊಡ್ಡ ಪ್ರಶ್ನೆ.

ಹೈಕೋರ್ಟ್‌ ಆದೇಶದಲ್ಲಿ ಏನಿದೆ?
ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿ ಉಮಾ ಅವರಿದ್ದ ನ್ಯಾಯಪೀಠ ಮಧ್ಯಂತರ ರಿಲೀಫ್ ನೀಡಿತ್ತು. ಸಿಟಿ ರವಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ. ತಕ್ಷಣ ರಿಲೀಸ್‌ಗೆ ಸೂಚಿಸಿತು. ಹೈಕೋರ್ಟ್ ಆದೇಶ ಬೆನ್ನಲ್ಲೇ, ಸಿಟಿ ರವಿಯನ್ನು ಬೆಂಗಳೂರಿಗೆ ಕರೆತರ್ತಿದ್ದ ಪೊಲೀಸರು, ದಾವಣಗೆರೆ ಬಳಿ ಮಾರ್ಗಮಧ್ಯೆಯೇ ರಿಲೀಸ್ ಮಾಡಿದ್ದರು. ಸಿಟಿ ರವಿ ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ಕಾನೂನು ಪ್ರಕ್ರಿಯೆ ಮಾಡಿಲ್ಲ ಎಂದು ನ್ಯಾಯಾಧೀಶರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

 

ಹೈಕೋರ್ಟ್ ಆದೇಶದಲ್ಲಿ ಏನಿದೆ?
ರಾಜ್ಯದ ಜನತೆಯ ಹಿತದೃಷ್ಟಿಯಿಂದ ಆರೋಪಿತ ಘಟನೆ ಅತ್ಯಂತ ದುರದೃಷ್ಟಕರ. ಸಿಆರ್‌ಪಿಸಿ ಸೆಕ್ಷನ್ 41ಎ ಅನ್ವಯ ಪೊಲೀಸರು ಪ್ರಕ್ರಿಯೆ ಪಾಲನೆ ಮಾಡಬೇಕಿತ್ತು. ಸಿಟಿ ರವಿ ಅವರು ಪರಿಷತ್ ಸದಸ್ಯರಾಗಿದ್ದು, ಎಲ್ಲಿಯೂ ಪರಾರಿಯಾಗುವ ಸಂಭವ ಇಲ್ಲ.

ಸಿಟಿ ರವಿ ತನಿಖೆಗೆ ಲಭ್ಯ ಆಗುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣ ಆಗಲ್ಲ. ಬೆಳಗಾವಿ ಕನ್ನಡಸೌಧದಲ್ಲಿ ನಡೆದ ಘಟನೆಗಳ ಬಗ್ಗೆ ಸಭಾಪತಿ ಏನನ್ನು ಉಲ್ಲೇಖಿಸಿಲ್ಲ. ತಕ್ಷಣ ಬಿಡುಗಡೆ ಸಂಬಂಧಿಸಿದಂತೆ ಮಧ್ಯಂತರ ಕೋರಿಕೆಗೆ ಸಿಟಿ ರವಿ ಅರ್ಹರಾಗಿದ್ದಾರೆ. ಹೀಗಾಗಿ ಸಿಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು.

 

TAGGED:bjpcongressCT RaviLakshmi Hebbalkarಕಾಂಗ್ರೆಸ್ಬಿಜೆಪಿಲಕ್ಷ್ಮಿ ಹೆಬ್ಬಾಳ್ಕರ್ಸಿಟಿ ರವಿ
Share This Article
Facebook Whatsapp Whatsapp Telegram

Cinema Updates

Kamal Haasan Praveen Shetty Thug Life Movie
ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ
3 hours ago
kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
12 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
13 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
17 hours ago

You Might Also Like

Kalladka Prabhakar Bhat
Dakshina Kannada

ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಕೇಸ್‌ ದಾಖಲು

Public TV
By Public TV
12 minutes ago
RCB Fan giving free chats
Bengaluru City

ಈ ಸಲ ಕಪ್ ನಮ್ದು, ಒಂಡೇ ಪಾನಿಪುರಿ ನಿಮ್ದು – RCB ಅಭಿಮಾನಿಯಿಂದ ಫ್ರೀ ಚಾಟ್ಸ್

Public TV
By Public TV
35 minutes ago
Weather 1
Bengaluru City

ಜೂ.8ರವರೆಗೆ ರಾಜ್ಯದಲ್ಲಿ ಸಾಧಾರಣ ಮಳೆ

Public TV
By Public TV
54 minutes ago
One 8 commune bar
Bengaluru City

ಕೊಹ್ಲಿ ಮಾಲೀಕತ್ವದ ಬೆಂಗ್ಳೂರು ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
1 hour ago
Shreyas Iyer
Cricket

ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ಐಪಿಎಲ್‌ನಲ್ಲಿ ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

Public TV
By Public TV
3 hours ago
Mysuru Youth Murder copy
Crime

Mysuru | 60 ಗ್ರಾಂ ಚಿನ್ನ ಕದ್ದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಬರ್ಬರ ಹತ್ಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?