Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿರಿಯಾನಿ ಕಥೆ ಹೇಳಿದ ಸಿಟಿ ರವಿ- ಖಡಕ್ ಉತ್ತರ ಕೊಟ್ಟ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿರಿಯಾನಿ ಕಥೆ ಹೇಳಿದ ಸಿಟಿ ರವಿ- ಖಡಕ್ ಉತ್ತರ ಕೊಟ್ಟ ಸಿಎಂ

Bengaluru City

ಬಿರಿಯಾನಿ ಕಥೆ ಹೇಳಿದ ಸಿಟಿ ರವಿ- ಖಡಕ್ ಉತ್ತರ ಕೊಟ್ಟ ಸಿಎಂ

Public TV
Last updated: July 22, 2019 4:19 pm
Public TV
Share
3 Min Read
CM CT RAVI
SHARE

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಚರ್ಚೆಯ ವೇಳೆ ಬಿಜೆಪಿ ಶಾಸಕ ಸಿಟಿರವಿ ಅವರು ಬಿರಿಯಾನಿ ಕಥೆಯನ್ನು ಪ್ರಸ್ತಾಪ ಮಾಡಿದರು. ಈ ವೇಳೆ ಶಾಸಕರ ಕಥೆಗೆ ಸಿಎಂ ಅವರು ಖಡಕ್ ಉತ್ತರ ನೀಡಿದ ಪ್ರಸಂಗ ನಡೆಯಿತು.

ಐಎಂಎ ಕಂಪನಿ ಬಗ್ಗೆ ಈ ಹಿಂದೆಯೇ ಕಂಪ್ಲೆಂಟ್ ಬಂದಿರುತ್ತದೆ. ಆಗ ತನಿಖೆಯೂ ನಡೆಯುತ್ತದೆ. ಆ ತನಿಖೆಗೆ ಕ್ಲೀನ್ ಚಿಟ್ ಕಳುಹಿಸಿದ್ದಾರೆ. ಆ ಕ್ಲೀನ್ ಚಿಟ್ ಕೊಟ್ಟವನು ಇಂದು ಜೈಲಿನಲ್ಲಿದ್ದಾರೆ. ಆದರೆ ಯಾರ ಬಳಿ ಆಡಳಿತ ಇತ್ತೋ, ಇಂಟಲಿಜೆನ್ಸ್ ಇತ್ತೋ ಅವರೇ ಅವರನ್ನು ಯಾರು ರಕ್ಷಣೆ ಮಾಡಿದ್ದಾರೆ ಎಂದು ಸಿಟಿ ರವಿ ಪ್ರಸ್ತಾಪ ಮಾಡಿದರು.

Rameshkumar

46 ಸಾವಿರ ಬಡ ಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸಿದ ಪಾಪದ ಹೊಣೆ ಅವರ ಜೊತೆ ಕೂತು ಬಿರಿಯಾನಿ ತಿಂದವರ ಮೇಲಿದೆ. ಆ ಬಿರಿಯಾನಿ ತಿಂದಿದ್ದು ಯಾರು ಅನ್ನೋದನ್ನು ಅವರು ಬಾಯಿ ಬಿಟ್ಟು ಹೇಳಿದರೆ ರಾಜ್ಯ ಹಾಗೂ ದೇಶಕ್ಕೆ ಗೊತ್ತಾಗುತ್ತದೆ. ಅಂಥವರನ್ನು ತೆಗೆದುಕೊಂಡು ಹೋಗಿ ನೇಣು ಹಾಕಬೇಕು ಎಂದು ಶಾಸಕರು ಕಿಡಿಕಾರಿದರು.

ರಕ್ಷಣೆ ಮಾಡುತ್ತೇವೆ ಎಂದು ಹೇಳಬೇಕಾಗಿದ್ದು, ಆ 46 ಸಾವಿರ ಬಡ ಕುಟುಂಬವನ್ನೇ ಹೊರತು ಒಬ್ಬ ಕಳ್ಳನನ್ನು ಅಲ್ಲ. ಸರ್ಕಾರ ನಿಮ್ಮ ಜೊತೆಗಿದೆ ಎಂದು ಹೇಳಿದವರು ಯಾರು? ಅವರು ಯಾವ ಧೈರ್ಯದ ಮೇಲೆ ಹೇಳಿದ್ರು? ಸತ್ಯ ಗೊತ್ತಾಗಬೇಕಿದೆ ಎಂದು ಇದೇ ವೇಳೆ ಸಿಟಿ ರವಿ ಒತ್ತಾಯಿಸಿದರು.

trust vote session 2

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸಿಟಿ ರವಿ ಅವರು ಬಿರಿಯಾನಿ ಕಥೆಯನ್ನು ನನಗೆ ಹೇಳಿದ್ದು ಅನ್ನೋದು ಗೊತ್ತು. ಹೊರಗಡೆ ಮಾಧ್ಯಮಗಳಲ್ಲಿ ನನ್ನ ಬಗ್ಗೆ ಹಾಗೂ ಆ ಬಿರಿಯಾನಿ ಬಗ್ಗೆ ಚರ್ಚೆ ನಡೆದಿರುವ ಬಗ್ಗೆ ಓದಿದ್ದೇನೆ. ಐಎಂಎ ಪ್ರಕರಣದ ಇಂದಿನ ಈ ತನಿಖೆಯಲ್ಲಿ ಎಸ್‍ಐಟಿಯನ್ನು ನಾವೇ ರಚನೆ ಮಾಡಿದ್ದೇವೆ. ನಮ್ಮ ಅಧಿಕಾರಿಗಳು ಅತ್ಯಂತ ಉತ್ತಮವಾದ ಕೆಲಸ ಮಾಡಿದ್ದಾರೆ ಎಂಬುದನ್ನು ತಾವು ಅರ್ಥ ಮಾಡಿಕೊಳ್ಳಬೇಕು. ಪ್ರಕರಣದ ಬಗ್ಗೆ ತನಿಖೆ ನಡೆಸಲು ಮುಕ್ತ ಅವಕಾಶ ನೀಡಿದ್ದೇವೆ ಎಂದರು.

vlcsnap 2019 02 07 14h00m02s181 e1549528403956

ಬಿರಿಯಾನಿ ಕಥೆಗೆ ವಿವರಣೆ ನೀಡಿದ ಸಿಎಂ, ನನಗೆ ಐಎಂಎ ವ್ಯವಸ್ಥಾಕರ ಪರಿಚಯವಿಲ್ಲ. ರಂಜಾನ್ ಹಬ್ಬದ ಸಂದರ್ಭದಲ್ಲಿ ಕೃಷ್ಣಾ ಕಚೇರಿಯಲ್ಲಿ ನಾನು ಕರ್ತವ್ಯ ನಿರ್ವಹಿಸುತ್ತಿದ್ದೆ. ಈ ವೇಳೆ ಸಿಟಿ ರವಿ ಪ್ರಸ್ತಾಪ ಮಾಡಿದ ಶಾಸಕರು ಬಂದು ಇಫ್ತಿಯಾರ್ ಗೆ ದಯವಿಟ್ಟು ಬರಬೇಕು ಎಂದು ಒತ್ತಾಯ ಮಾಡಿ ಕರೆದುಕೊಂಡು ಹೋಗಿದ್ದರು. ನಾನು ಮೊದಲನೇ ಬಾರಿಗೆ ಆ ಕಚೇರಿಗೆ ಹೋಗಿದ್ದು, ಹಾಗೆಯೇ ವ್ಯವಸ್ಥಾಪಕರನ್ನು ಭೇಟಿ ಮಾಡಿದ್ದೇನೆ. ಅಲ್ಲಿ ನಾನೇನು ಬಿರಿಯಾನಿ ತಿಂದಿಲ್ಲ. ಯಾಕೆಂದರೆ ನನಗೆ ಎರಡನೇ ಬಾರಿಗೆ ಹೃದಯದ ಚಿಕಿತ್ಸೆ ಆದ ಬಳಿಕ ನಾನು ನಾನ್ ವೆಜ್ ತಿನ್ನೋದನ್ನು ಬಿಟ್ಟಿದ್ದೇನೆ. ಹೀಗಾಗಿ ನಾನು ಅಲ್ಲಿಗೆ ಬಿರಿಯಾನಿ ತಿನ್ನಲು ಹೋಗಿಲ್ಲ. ಅವರು ರಂಜಾನ್ ಹಬ್ಬಕ್ಕೆ ಕರೆದ್ರಲ್ವಾ ಎಂದು ಹೋಗಿ ಖರ್ಜೂರ ಬಾಯಿಗೆ ಹಾಕಿದಾಗ ಅದರ ಫೋಟೋ ತೆಗೆದಿದ್ದು, ಆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಎಂದು ವಿವರಣೆ ನೀಡಿದರು.

HDK 3

ನನಗೆ ಕೇಂದ್ರ ಸರ್ಕಾರದ ಐಟಿ ಇಲಾಖೆಯಿಂದ ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಇಲ್ಲಿ ಸರಿಯಾದ ರೀತಿಯ ತನಿಖೆಗಳು ಆಗುತ್ತಿಲ್ಲ ಎಂಬ ವರದಿ ಬಂದ ಬಳಿಕ ನಾನೇ ನಮ್ಮ ಡಿಜಿಯವರನ್ನು ಕರೆದು ಅದರ ಬಗ್ಗೆ ತನಿಖೆ ಆಗಬೇಕು ಎಂದು ನಿರ್ದೇಶನ ಕೊಟ್ಟೆ. ನಾನು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಈ ಕಂಪನಿ ಬಂದಿದ್ದಲ್ಲ, ಅದಕ್ಕಿಂತಲೂ ಮೊದಲೇ ಈ ಕಂಪನಿ ಇತ್ತು ಎಂದರು.

ವ್ಯವಸ್ಥಾಪಕ ಕಚೇರಿಯಲ್ಲಿ ದೇಶದ ಗೌರವಾನ್ವಿತ ಪ್ರಧಾನಿಗಳ ಫೋಟೋವನ್ನು ಕೂಡ ಹಾಕಿಕೊಂಡಿದ್ದರು. ಆದಾಯ ತೆರಿಗೆ ಇಲಾಖೆಯವರು ನೀಡಿದ್ದ ಫೋಟೋವನ್ನೂ ಹಾಕಿಕೊಂಡಿದ್ದರು. ಇಂದು ನಮ್ಮ ಅಧಿಕಾರಿಗಳೇ ಆ ವ್ಯಕ್ತಿಯನ್ನು ಅರೆಸ್ಟ್ ಮಾಡಿ ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅರೆಸ್ಟ್ ಮಾಡಿದ ವ್ಯಕ್ತಿಯನ್ನು ಕರೆದುಕೊಂಡು ಹೋಗಿ ಕೂರಿಸುವ ಬದಲು ಇಡಿಯವರು ತನಿಖೆ ನಡೆಸಲಿ ಎಂದು ಒತ್ತಾಯಿಸಿದರು.

ಇಲ್ಲಿ ಬಿರಿಯಾನಿ ಕಥೆ ಯಾವುದು ನಡೆದಿಲ್ಲ. ಬಡವರ ದುಡ್ಡನ್ನು ನುಂಗಿ ಹಾಕಿದವರಿಗೆ ರಕ್ಷಣೆ ಕೊಡಲು ಈ ಸರ್ಕಾರದಲ್ಲಿ ಸಾಧ್ಯವಿಲ್ಲ. ಈ ಸಂಬಂಧ ಯಾವ ರಾಜಿನೂ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಇದೇ ವೇಳೆ ಸಿಎಂ ಮಾತಿಗೆ ದನಿಗೂಡಿಸಿ ಸ್ಪೀಕರ್ ನಾನು ವೆಜ್ ತಿನ್ನೋದನ್ನು ಬಿಡಬೇಡಿ. ನಮ್ಮ ರಕ್ಷಣೆಗೆ ಬನ್ನಿ ನೀವು ಎಂದು ಹೇಳುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ರು.

TAGGED:bengalurucmCT RaviPublic TVVidhanasoudhaಪಬ್ಲಿಕ್ ಟಿವಿಬೆಂಗಳೂರುವಿಧಾನ ಸೌಧಸಿಎಂಸಿಟಿ ರವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
3 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
49 minutes ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
50 minutes ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
56 minutes ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?