Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಭಯೋತ್ಪಾದನಾ ಕೇಂದ್ರಗಳಿಗೆ ನೀರು ಗೊಬ್ಬರ ಹಾಕಿ ಪೋಷಿಸ್ತಿದೆ: ಸಿಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಭಯೋತ್ಪಾದನಾ ಕೇಂದ್ರಗಳಿಗೆ ನೀರು ಗೊಬ್ಬರ ಹಾಕಿ ಪೋಷಿಸ್ತಿದೆ: ಸಿಟಿ ರವಿ

Bengaluru City

ಕಾಂಗ್ರೆಸ್ ಭಯೋತ್ಪಾದನಾ ಕೇಂದ್ರಗಳಿಗೆ ನೀರು ಗೊಬ್ಬರ ಹಾಕಿ ಪೋಷಿಸ್ತಿದೆ: ಸಿಟಿ ರವಿ

Public TV
Last updated: May 16, 2025 5:16 pm
Public TV
Share
3 Min Read
C T Ravi
SHARE

– ಕಾಂಗ್ರೆಸ್‌ನವರಿಗೆ ಆಪರೇಷನ್ ಸಿಂಧೂರದ ಅಪಪ್ರಚಾರ ಟಾಸ್ಕ್ ಕೊಟ್ಟಂಗೆ ಕಾಣ್ತಿದೆ

ಬೆಂಗಳೂರು: ಕಾಂಗ್ರೆಸ್‌ನವರು ಭಯೋತ್ಪಾದನೆ ಬೆಳೆಸುವ ಕೇಂದ್ರಗಳಿಗೆ ನೀರು ಗೊಬ್ಬರ ಹಾಕಿ ಪೋಷಿಸುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಸಿ.ಟಿ ರವಿ(C T Ravi) ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ(Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವ್ರು ಆಪರೇಷನ್ ಸಿಂಧೂರದ(Operation Sindoor) ಬಗ್ಗೆ ಅಪಸ್ವರದ ಮಾತಾಡ್ತಿದ್ದಾರೆ. ಯಾಕೆ ಕದನ ನಿಲ್ಲಿಸಿದ್ರಿ ಅಂತಿದ್ದಾರೆ. ಇನ್ನು ಕೆಲವರು ಕೇವಲ ನಾಲ್ಕು ವಿಮಾನ ಹಾರಿಸಿದ್ರು ಅಂದಿದ್ದಾರೆ. ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ದಿನೇಶ್, ಕೊತ್ತೂರು ಮಂಜುನಾಥ್ ಇವರಿಗೆಲ್ಲ ಆಪರೇಷನ್ ಸಿಂಧೂರದ ಬಗ್ಗೆ ಅಪಪ್ರಚಾರ ಮಾಡುವ ಟಾಸ್ಕ್ ಕೊಟ್ಟಂಗೆ ಕಾಣ್ತಿದೆ ಎಂದರು. ಇದನ್ನೂ ಓದಿ: ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್

ಜೊತೆಗೆ ಕಾಂಗ್ರೆಸ್‌ನವ್ರಲ್ಲೇ ದ್ವಂದ್ವ ಕಾಣ್ತಿದೆ. ಇಡೀ ದೇಶ ಯುದ್ಧ ಬೇಕು ಅನ್ನುವಾಗ ಸಿದ್ದರಾಮಯ್ಯ(Siddaramaiah) ಯುದ್ಧ ಬೇಡ ಅಂದ್ರು. ನಂತರ ಸಿದ್ದರಾಮಯ್ಯ ಹಣೆ ಮೇಲೆ ದೊಡ್ಡ ಕುಂಕುಮ ಹಾಕಿಕೊಂಡು ಸುದ್ದಿಗೋಷ್ಠಿ ಮಾಡಿ ಸೈನಿಕರನ್ನು ಶ್ಲಾಘಿಸಿದರು. ಇಡೀ ಕ್ರೆಡಿಟ್ ಸೈನ್ಯಕ್ಕೆ ಅಂದ ಸಿದ್ದರಾಮಯ್ಯ ಈಗ ಅಪಪ್ರಚಾರ ಯಾಕೆ ಮಾಡ್ತಿದ್ದಾರೆ. ನಿಮ್ಮ ಅಪಪ್ರಚಾರ ಸೈನ್ಯದ ಬಗ್ಗೆನೋ ಅಥವಾ ರಾಜಕೀಯ ನಾಯಕತ್ವಕ್ಕೋ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿ ಮೈದಾನದಲ್ಲಿ ಮಕ್ಕಳಂತೆ ಈಜಾಡಿದ ಡೇವಿಡ್‌!

ಪ್ರಧಾನಿ ಮೋದಿಯವರು ಸೇನೆಗೆ ಎಲ್ಲಾ ಸ್ವಾತಂತ್ರ‍್ಯ ಕೊಟ್ಟಿದ್ರು. ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಂದ್ ಮಾಡಿದ್ರು, ಪಾಕ್ ಉಗ್ರ ಪೋಷಕ ರಾಷ್ಟ್ರ ಅಂತ ಇಡೀ ಜಗತ್ತಿಗೆ ಹೇಳಿದ್ದಾರೆ. 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ, ನೂರಾರು ಉಗ್ರರನ್ನ ನರಕಕ್ಕೆ ಕಳಿಸಿದ್ದಾರೆ. ಆ ಉಗ್ರರಿಗೆ ಜನ್ನತ್ ಸಿಗಲ್ಲ ಅಂದ್ರು. ಯುದ್ಧ ನಿಲ್ಲಿಸಿಲ್ಲ. ಇದು ತಾತ್ಕಾಲಿಕ ಅಷ್ಟೇ, ಮತ್ತೆ ಯುದ್ಧ ಶುರುವಾದ್ರೆ ಅವರ ತಲೆ, ಬಾಲ ಎರಡೂ ಕಟ್ ಆಗುತ್ತದೆ. ಭಯೋತ್ಪಾದನೆಯ ಮೂಲ ಕಿತ್ತು ಹಾಕಲು ಕಾಂಗ್ರೆಸ್(Congress) ಕೂಡಾ ನಮ್ಮ ಜೊತೆ ಕೈ ಜೋಡಿಸಲಿ ಎಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳ ಅರೆಸ್ಟ್ – ಚಿನ್ನಾಭರಣ ಸೇರಿ 7.89 ಲಕ್ಷ ಮೌಲ್ಯದ ವಸ್ತು ಜಪ್ತಿ

ಭಯೋತ್ಪಾದನೆ(Terrorism) ಬೆಳೆಸುವ ಕೇಂದ್ರಗಳಿಗೆ ನೀರು ಗೊಬ್ಬರ ಹಾಕಿ ಕಾಂಗ್ರೆಸ್‌ನವರು ಪೋಷಿಸುತ್ತಿದ್ದಾರೆ. ಕಾಂಗ್ರೆಸ್‌ನವರ ಮನಸ್ಥಿತಿ ಬದಲಾಗಬೇಕು. ಭಯೋತ್ಪಾದನೆಯೆ ಡಿಎನ್‌ಎ ಕಿತ್ತು ಹಾಕಿ ಮೊದಲು. ಆ ಡಿಎನ್‌ಎ ಕರ್ನಾಟಕದಲ್ಲೂ ಇದೆ, ಜಗತ್ತಲ್ಲೂ ಇದೆ. ಮೊದಲು ಇದನ್ನ ಮಟ್ಟ ಹಾಕಬೇಕು ಎಂದು ಗುಡುಗಿದರು.

ಭಯೋತ್ಪಾದನೆ ಮೂಲಕ್ಕೆ 1400 ವರ್ಷಗಳ ಇತಿಹಾಸ ಇದೆ. ಬದಲಾದ ಸಂದರ್ಭ, ಬದಲಾದ ರೀತಿಯಲ್ಲಿ ಅದು ನಡೀತಿದೆ. ಕರ್ನಾಟಕದಲ್ಲೂ ಭಯೋತ್ಪಾದಕರ ಕೇಂದ್ರಗಳಿವೆ. ಮತದ ಹೆಸರಲ್ಲಿ ಅಲ್ಲಿ ಏನು ಕಲಿಸ್ತಿದ್ದಾರೆ? ಅದಕ್ಕೆ ಯಾರ ಪೋಷಣೆ ಇದೆ? ನಮ್ಮ ಪೋಷಣೆ ಪ್ರಶಂಸೆ ಸೇನೆಗೆ ಅಂತಾ ಕಾಂಗ್ರೆಸ್‌ನವರು ಹೇಳಿದ್ರು. ಹಾಗಾದ್ರೆ ಟೀಕೆ ಯಾರಿಗೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ಸಮಾಧಾನ ತಂದಿಲ್ಲ ಅಂದಿದ್ದು, ಸೇನೆ ಬಗ್ಗೆ ಹಗುರವಾಗಿ ಮಾತಾಡಿಲ್ಲ: ಮಂಜುನಾಥ್ ಸ್ಪಷ್ಟನೆ

ತಾಜ್ ಹೊಟೇಲ್ ಮೇಲೆ ದಾಳಿ ಆದಾಗ, ವಾರಣಾಸಿ ಸ್ಫೋಟ, ರೈಲು ಸ್ಫೋಟ, ಮಾಲೇಗಾಂವ್ ಸ್ಫೋಟ, ಅಹಮದಾಬಾದ್ ಬಾಂಬ್ ಸ್ಫೋಟ, ದೆಹಲಿ ಬಾಂಬ್ ಸ್ಫೋಟ, ಪುಣೆ ಬಾಂಬ್ ಸ್ಫೋಟ ಇದೆಲ್ಲ ಆದಾಗ ಕಾಂಗ್ರೆಸ್‌ನವರು ಯಾವ ಕ್ರಮ ಕೈಗೊಂಡರು. ಯಾವ ಸರ್ಜಿಕಲ್ ಸ್ಟ್ರೈಕ್‌ ಮಾಡಿದ್ರು? ಕಾಂಗ್ರೆಸ್‌ನವ್ರು ಸೇನೆಗೆ ಸ್ವಾತಂತ್ರ‍್ಯ ಕೊಟ್ಟಿದ್ರಾ? ಆಗೆಲ್ಲ ಭಯೋತ್ಪಾದನೆ ಬೇರು ಸಮೇತ ಕಿತ್ತು ಹಾಕಬೇಕು ಅಂತ ಅನಿಸಿಲಿಲ್ಲ. ಈಗ ಅನಿಸ್ತಿರೋದ್ರ ಹಿಂದೆ ಕಾರಣ ಏನಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇಡೀ ದೇಶ, ಸೇನೆ, ಸೈನಿಕರು ಮೋದಿ ಪಾದಗಳಿಗೆ ನಮಸ್ಕರಿಸುತ್ತಾರೆ: ಡಿಸಿಎಂ ವಿವಾದಾತ್ಮಕ ಹೇಳಿಕೆ

ಭಯೋತ್ಪಾದನೆಯ ಮೂಲ ಡಿಎನ್‌ಎನಲ್ಲೇ ಇದೆ. ಆ ಡಿಎನ್‌ಎ ಕಿತ್ತು ಹಾಕಬೇಕು. ಇಥಿಯೋಪಿಯಾ, ಸೂಡಾನ್, ಹಮಾಸ್ ಭಯೋತ್ಪಾದನೆ, ಆಫ್ಘಾನಿಸ್ತಾನ, ಇರಾಕ್, ಇರಾನ್, ಟ್ವಿನ್ ಟವರ್ ಸ್ಫೋಟ ಇದಕ್ಕೆಲ್ಲಾ ಯಾವ ಭಯೋತ್ಪಾದನೆಯ ಡಿಎನ್‌ಎ ಕಾರಣ? ಈ ಡಿಎನ್‌ಎ ಅನ್ನು ಮತಬ್ಯಾಂಕ್‌ಗಾಗಿ ಪೋಷಿಸ್ತಿರೋರು ಯಾರು? ದೆ ಆರ್ ಮೈ ಬ್ರದರ್ಸ್ ಅಂದವರು ಯಾರು? ಬಿಜೆಪಿ ಸರ್ಜಿಕಲ್ ಸ್ಟ್ರೈಕ್‌ ಮಾಡಿದಾಗ ಸಾಕ್ಷಿ ಕೇಳಿದವ್ರು ಇದೇ ಕಾಂಗ್ರೆಸ್‌ನವರು. ಈಗ ಪಾಕ್ ಉಗ್ರರ ಮೇಲಿನ ದಾಳಿಗೆ ಭಾರತ ಜಾಗತಿಕ ಸಾಕ್ಷ್ಯ ಕೊಟ್ಟಿದೆ ಎಂದರು.

TAGGED:bengaluruc t ravicongressOperation Sindoorಆಪರೇಷನ್‌ ಸಿಂಧೂರಕಾಂಗ್ರೆಸ್ಬೆಂಗಳೂರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Bus Accident
Districts

ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ; ಕೇಸ್‌ ದಾಖಲು

Public TV
By Public TV
44 seconds ago
Nashik Accident 2
Crime

ನಾಸಿಕ್‌ನಲ್ಲಿ ಘೋರ ದುರಂತ – ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು

Public TV
By Public TV
9 minutes ago
Marriage
Chikkamagaluru

ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

Public TV
By Public TV
29 minutes ago
CRIME
Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
By Public TV
37 minutes ago
ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
1 hour ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?