Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ್ರೋಹಿಗಳಿಗೂ, ಕೈ ನಾಯಕರಿಗೂ ಅಪ್ಪುಗೆಯ ನಂಟಿನ ಕಾರಣ FSL ವರದಿ ವಿಳಂಬ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದೇಶದ್ರೋಹಿಗಳಿಗೂ, ಕೈ ನಾಯಕರಿಗೂ ಅಪ್ಪುಗೆಯ ನಂಟಿನ ಕಾರಣ FSL ವರದಿ ವಿಳಂಬ: ಸಿ.ಟಿ.ರವಿ

Districts

ದೇಶದ್ರೋಹಿಗಳಿಗೂ, ಕೈ ನಾಯಕರಿಗೂ ಅಪ್ಪುಗೆಯ ನಂಟಿನ ಕಾರಣ FSL ವರದಿ ವಿಳಂಬ: ಸಿ.ಟಿ.ರವಿ

Public TV
Last updated: March 6, 2024 6:00 pm
Public TV
Share
3 Min Read
CONGRESS CT RAVI
SHARE

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ (Pro Pakistan Slogan) ಕೂಗಿದ ಮೂವರನ್ನು ಬಂಧಿಸಿರುವುದು ಸರಿ. ಆದರೆ ಎಫ್‍ಎಸ್‍ಎಲ್ ವರದಿಯನ್ನು ಯಾಕಿನ್ನೂ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಬೆಂಗಳೂರು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಂಧಿತರು ಯಾರೋ ಚೇಲಾಗಳಿರಬೇಕು ಅಂದುಕೊಂಡಿದ್ದೆವು. ಅವರಿಗೆ ರಾಹುಲ್ ಗಾಂಧಿಯವರ ಸಂಪರ್ಕ ಇರುವುದು ನಮಗೆ ಗೊತ್ತಿರಲಿಲ್ಲ ಎಂದು ತಿಳಿಸಿದರು. ಈಗ ರಾಹುಲ್ ಗಾಂಧಿಯವರ ಜೊತೆಗಿರುವ, ತಬ್ಬಿಕೊಂಡಿರುವ ಫೋಟೋ ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ಜಿಂದಾಬಾದ್ ನಂಟು ನಾವು ಅಂದುಕೊಂಡಿದ್ದ ರೀತಿಯನ್ನೂ ಮೀರಿದೆ. ಪಾಕಿಸ್ತಾನದ ಅಪ್ಪ, ಅಮ್ಮನಿಗೆ ಹುಟ್ಟಿದ ದೇಶದ್ರೋಹಿಗಳು ಕೂಗಿದ್ದಾರೆ ಎಂದುಕೊಂಡಿದ್ದೆವು. ದೇಶದ್ರೋಹಿಗಳಿಗೂ, ಕಾಂಗ್ರೆಸ್ ನಾಯಕರಿಗೂ ಅಪ್ಪುಗೆಯ ನಂಟಿದೆ ಎಂದು ನಮಗೆ ತಿಳಿದಿರಲಿಲ್ಲ ಎಂದು ವಿಶ್ಲೇಷಿಸಿದರು.

ಪಾ”ಕೈ”ಸ್ತಾನಿಗಳ ಜೊತೆ ಬಿಡಿಸಲಾಗದ ನಂಟು.

ಭವ್ಯ ಭಾರತಕ್ಕೆ ಇವರಿಂದ ಸದಾ ಕಳಂಕವುಂಟು.#AntiIndiaCongress pic.twitter.com/4o15QNymme

— BJP Karnataka (@BJP4Karnataka) March 6, 2024

ಅಪ್ಪುಗೆಯ ನಂಟು ಇರುವ ಕಾರಣ ಎಫ್‍ಎಸ್‍ಎಲ್ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿಲ್ಲವೇನೋ ಎಂದು ಅವರು ಸಂಶಯ ವ್ಯಕ್ತಪಡಿಸಿದರು. ಎಫ್‍ಎಸ್‍ಎಲ್ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲು ಅವರು ಆಗ್ರಹಿಸಿದರು. ಅಧಿಕೃತವಾಗಿ ಎಫ್‍ಎಸ್‍ಎಲ್ ವರದಿಯನ್ನು ಬಿಡುಗಡೆ ಮಾಡಬೇಕಿತ್ತಲ್ಲವೇ? ಸಚಿವ ಪ್ರಿಯಾಂಕ್ ಖರ್ಗೆಯವರು ಘಟನೆ ನಡೆದ ಮರುದಿನವೇ ‘ಅವರು ಹಾಗೆ ಕೂಗಿಲ್ಲ; ಪಾಕಿಸ್ತಾನ ಜಿಂದಾಬಾದ್ ಎಂದು ಇಲ್ಲವೇ ಇಲ್ಲ’ ಎಂದಿದ್ದರು. ವರದಿ ಸಿಕ್ಕಿದ್ದರೂ ಸರ್ಕಾರ ಅಧಿಕೃತವಾಗಿ ಅದನ್ನು ಬಿಡುಗಡೆ ಮಾಡಿಲ್ಲವೇಕೆ? ಎಂದು ಕೇಳಿದರು. ಇದನ್ನೂ ಓದಿ: ಅಮ್ಮನ ಜೊತೆ ನಾನು ಹೋಗಲ್ಲ- ಹಲ್ಲೆಗೊಳಗಾದ ಮಗುವಿನ ಮುಗ್ಧ ಮಾತು

ಅಂದು – ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿಯೇ ಇಲ್ಲ.

ಇಂದು – ಪಾಕಿಸ್ತಾನ್‌ ಜಿಂದಾಬಾದ್‌ ಎಂದವರು ನಮಗೆ ಪರಿಚಯವೇ ಇಲ್ಲ.

ಸಿಎಂ @siddaramaiah ಅವರೇ, ಡಿಸಿಎಂ @DKShivakumar ಅವರೇ ಇಲ್ಲಿ ನೋಡಿ ಚಿತ್ರಗಳೇ ಮಾತನಾಡುತ್ತಿವೆ.#AntiIndiaCongress #AntiNationalCongress pic.twitter.com/tdh37PhuT2

— BJP Karnataka (@BJP4Karnataka) March 6, 2024

ಬಿಜೆಪಿ ವಿರುದ್ಧ ಟೀಕೆಯ ಹಳೆಯ ಕಾಯಿಲೆ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಒಬ್ಬೊಬ್ಬ ಸಚಿವರು ಒಂದೊಂದು ರೀತಿ ಹೇಳಿಕೆ ಕೊಡುತ್ತಿದ್ದಾರೆ. ಕೆಲವರು ಬಾಂಬ್ ಇಟ್ಟವರು ಬಿಜೆಪಿಯವರೇ ಇರಬಹುದು ಎಂದು ಹೇಳಿಕೆ ಕೊಟ್ಟಿದ್ದಾರೆ. ಇದೊಂದು ಹಳೆಯ ಕಾಯಿಲೆ. ಇವತ್ತು ನಿನ್ನೆಯ ಕಾಯಿಲೆಯಲ್ಲ. 2000ನೇ ಇಸವಿಯಲ್ಲಿ ಚರ್ಚ್‍ಗಳ ಮೇಲೆ ಬಾಂಬ್ ಸ್ಫೋಟಿಸಿದ್ದರು. ಆಗ ಇವತ್ತಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗೃಹ ಸಚಿವರಾಗಿದ್ದರು. ತನಿಖೆಗೆ ಮುಂಚೆಯೇ ಅವರು ‘ಇದರ ಹಿಂದೆ ಆರ್‌ಎಸ್‌ಎಸ್‌ ಪಿತೂರಿ ಇದೆ’ ಎಂದು ಫರ್ಮಾನು ಹೊರಡಿಸಿದ್ದರು. ಸಾರ್ವಜನಿಕ ಹೇಳಿಕೆಯನ್ನೂ ಕೊಟ್ಟಿದ್ದರು. ಆಮೇಲೆ ಬಂಧನ ಆದಾಗ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ಸಂಘಟನೆಯವರು ಚರ್ಚ್‍ಗಳಿಗೆ ಬಾಂಬ್ ಇಟ್ಟಿದ್ದರು ಎಂಬುದು ತನಿಖೆ ನಂತರ ಬೆಳಕಿಗೆ ಬಂತು ಎಂದು ವಿವರಿಸಿದರು. ಆಗ ಫ್ಲೈಓವರ್‌ನಲ್ಲಿ ಬಾಂಬ್ ಒಯ್ಯುವಾಗ ಸ್ಫೋಟ ಸಂಭವಿಸಿ ಭಯೋತ್ಪಾದಕನೂ ಸತ್ತಿದ್ದ, ಭಯೋತ್ಪಾದನಾ ಜಾಲವೂ ಹೊರಗಡೆ ಬಂದಿತ್ತು ಎಂದು ತಿಳಿಸಿದರು.

ಈಗ ಕಾಂಗ್ರೆಸ್ ಸಚಿವರು ಭಯೋತ್ಪಾದಕರನ್ನು ರಕ್ಷಿಸುವ ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಇಂತಹ ವಿಷಯದಲ್ಲಿ ರಾಜಕಾರಣ ಮಾಡುವುದು ಬೇಡ ಎನ್ನುತ್ತಾರೆ. ಇನ್ನೊಬ್ಬ ಸಚಿವರು ಭೀತರಾಗದಿರಿ; ಇದೊಂದು ಲಘು ಸ್ಫೋಟ ಎಂದಿದ್ದಾರೆ. ಈಗ ತನಿಖೆಗೆ ಮೊದಲೇ ವಿಷಯಾಂತರ ಮಾಡುವ, ದಿಕ್ಕು ತಪ್ಪಿಸುವ ಹೀನ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸಚಿವರು ಮಾಡುತ್ತಿರುವುದು ಅವರು ಯಾರನ್ನೋ ರಕ್ಷಿಸುವ ಉದ್ದೇಶ ಹೊಂದಿದ್ದಾರೆ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ವಿಷಯವನ್ನು ರಾಜಕೀಯಗೊಳಿಸಬೇಡಿ ಎನ್ನುತ್ತಾರೆ. ಹಾಗಿದ್ದರೆ ನಿಮ್ಮ ಸಚಿವರು ಮಾಡುತ್ತಿರುವುದು ಏನು? ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅವರು ರಾಜಕೀಯಕರಣದ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಸರ್ಕಾರವೇ 222ಕ್ಕೂ ಹೆಚ್ಚು ತಾಲ್ಲೂಕುಗಳು ಬರಗಾಲಪೀಡಿತ ಎಂದು ಪ್ರಕಟಿಸಿದೆ. ಎಷ್ಟು ಜನ ಸಚಿವರು ಜಿಲ್ಲೆಗೆ ಹೋಗಿ ಬರಗಾಲ ಎದುರಿಸಲು, ಬರದ ಬವಣೆ ನೀಗಿಸಲು ಯೋಜನೆ ರೂಪಿಸಲು ಮುಂದಾಗಿದ್ದಾರೆ ಎಂದು ಕೇಳಿದರು. ಎಷ್ಟು ಜನ ಸಚಿವರು ಬರಗಾಲಪೀಡಿತ ತಾಲ್ಲೂಕುಗಳಿಗೆ ಪ್ರವಾಸ ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಕುಡಿಯುವ ನೀರಿಗೆ ಹಾಹಾಕಾರ ಇದೆ. ಜನಸಾಮಾನ್ಯರ ಹಾಹಾಕಾರ ನೀಗಿಸುವ ಅಧಿಕಾರ ಇರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಅವರ ಅಸಮರ್ಥತೆ, ಅಸಹಾಯಕತೆಯನ್ನು ತೋರಿಸುತ್ತಿದ್ದಾರೆ ಎಂದು ಟೀಕಿಸಿದರು.

TAGGED:bengalurubjpcongressCT Raviಕಾಂಗ್ರೆಸ್ಬಿಜೆಪಿಬೆಂಗಳೂರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
3 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
7 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
35 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?