Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮುಸ್ಲಿಂ ರಾಜರ ಆಳ್ವಿಕೆಯಲ್ಲಿ ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಿದ್ದಾರೆ: ಸಿ.ಟಿ.ರವಿ

Public TV
Last updated: May 16, 2022 4:10 pm
Public TV
Share
3 Min Read
ct ravi 1
SHARE

-ಕಾಂಗ್ರೆಸ್‍ನಿಂದ ಪ್ರಾಮಾಣಿಕತೆ ನಿರೀಕ್ಷಿಸಬೇಡಿ
-ಖರ್ಗೆ ಸಂವಿಧಾನ ನನಗೆ ಗೊತ್ತಿಲ್ಲ

ಕಲಬುರಗಿ: ಅಂಗೈ ಹುಣ್ಣಿಗೆ ಸಾಕ್ಷಿ ನೋಡಬೇಕಾದ ಅವಶ್ಯಕತೆ ಇಲ್ಲ. ಮುಸ್ಲಿಂ ರಾಜರ ಆಳ್ವಿಕೆಯಲ್ಲಿ ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

jamia masjid mandya

ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ್ಞಾನವ್ಯಾಪಿ ಮಸೀದಿ ಬಗ್ಗೆ ಸರ್ವೇಕ್ಷಣಾ ನಡೆಯುತ್ತಿದೆ. ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಮೇಲೆ ಸತ್ಯ ಗೊತ್ತಾಗಲಿದೆ. ಅಂಗೈ ಹುಣ್ಣಿಗೆ ಸಾಕ್ಷಿ ನೋಡಬೇಕಾದ ಅವಶ್ಯಕತೆ ಇಲ್ಲ. ಮುಸ್ಲಿಂ ರಾಜರ ಆಳ್ವಿಕೆಯಲ್ಲಿ ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಿದ್ದಾರೆ. ಸ್ವತಂತ್ರ ಭಾರತದಲ್ಲಿ ಸತ್ಯಕ್ಕೂ ಸಾಕ್ಷಿ ಬೇಕು. ಹಾಗಾಗಿ ಸಾಕ್ಷಿ ಒದಗಿಸುವ ಕೆಲಸ ನಡೆಯುತ್ತಿದೆ ಎಂದರು.

ಶ್ರೀರಂಗಪಟ್ಟಣ ಮೂಡಲಬಾಗಿಲಿನಲ್ಲಿ ಆಂಜನೇಯ ದೇವಸ್ಥಾನ ಇದ್ದ ಬಗ್ಗೆ ಸಾಕ್ಷಿ ಇದೆ. ಟಿಪ್ಪು ಅದರ ಮೇಲೆ ಜಾಮೀಯಾ ಮಸೀದಿ ಕಟ್ಟಿರುವುದು. ಅಲ್ಲಿನ ಮಕ್ಕಳಿಗೂ ಗೊತ್ತಿದೆ. ಅಲ್ಲಿನ ಸರ್ವೇಕ್ಷಣ ಮಾಡಿದರೆ, ಸತ್ಯ ಗೊತ್ತಾಗುತ್ತದೆ. ಟಿಪ್ಪು ಕನ್ನಡ ಪ್ರೇಮಿ ಅಂತಾರೆ, ಆದರೆ ಆತ ಆಡಳಿತ ಭಾಷೆಯನ್ನು ಪರ್ಷಿಯನ್ ಭಾಷೆ ಮಾಡಿದ್ದ. ಹಾಗಾಗಿ ಮೇಲಿನ ತೆರೆ ಸರಿಸಿದರೆ ಸತ್ಯ ಗೊತ್ತಾಗುತ್ತದೆ ಎಂದು ಹೇಳಿದರು.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಭಜರಂಗದಳ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದು, ಈ ವಿಚಾರವಾಗಿ ಮಾತನಾಡಿದ ಅವರು, ಭಜರಂಗದಳ ಪ್ರತಿ ವರ್ಷ ಅಭ್ಯಾಸ ವರ್ಗ ನಡೆಸುತ್ತದೆ. ಪೊಲೀಸ್ ಇಲಾಖೆ ಕೂಡಾ ತರಬೇತಿ ನೀಡುತ್ತದೆ. ಆದರೆ ಬಾಂಬ್ ಹಾಕುವ ತರಬೇತಿ ಕೊಟ್ಟಿಲ್ಲ. ಬದಲಾಗಿ ಏರ್ ಗನ್ ತರಬೇತಿ ನೀಡಿದೆ. ಅದರಲ್ಲಿ ತಪ್ಪೇನಿಲ್ಲ ಎಂದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಪರಿಸರವಾದಿಗಳ ತೀವ್ರ ವಿರೋಧ

ಕಾಂಗ್ರೆಸ್‍ಗೆ ನಿಯಮ ಮಾಡುವುದು ಗೊತ್ತು ಅದನ್ನು ಬೈಪಾಸ್ ಮಾಡುವುದು ಗೊತ್ತು. ಐದು ವರ್ಷ ಕಾರ್ಯಕರ್ತನಾಗಿ ದುಡಿದಿದ್ದರೆ, ಟಿಕೆಟ್ ನೀಡಬಹುದು ಎನ್ನುವ ಪರ್ಯಾಯ ಮಾರ್ಗವನ್ನು ಹುಡುಕಿ ಕೊಂಡಿದ್ದಾರೆ. ಕಾಂಗ್ರೆಸ್‍ನಿಂದ ಪ್ರಾಮಾಣಿಕತೆ, ದೇಶಭಕ್ತಿ ನಿರೀಕ್ಷೆ ಮಾಡಲೇಬೇಡಿ. ವಂಶವಾಹಿನಿ ಹೊರತಾದ ರಾಜಕಾರಣ. ಮತಿಯ ಓಲೈಕೆ ಇಲ್ಲದ ರಾಜಕಾರಣ, ಭ್ರಷ್ಟಾಚಾರ ರಹಿತ ಆಡಳಿತ ಕಾಂಗ್ರೆಸ್ ನಿಂದ ನಿರೀಕ್ಷೆ ಮಾಡಿದರೆ ಭ್ರಮ ನಿರಸನವಾಗುತ್ತದೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಬಿಜೆಪಿಯವರಿಗೆ ಸಂವಿಧಾನ ಕಲಿಸಬೇಕಾಗಿದೆ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ನಮಗೆ ಅಂಬೇಡ್ಕರ್ ಸಂವಿಧಾನದ ಬಗ್ಗೆ ಗೊತ್ತು. ಆದರೆ ಪ್ರಿಯಾಂಕ್ ಖರ್ಗೆ ಅವರ ಸಂವಿಧಾನದ ಬಗ್ಗೆ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ:  ಅಶ್ವತ್ಥನಾರಾಯಣ ಪ್ರಯೋಗ ಫೇಲ್ಯೂರ್ – ಹೈಕಮಾಂಡ್ ಅಸಮಾಧಾನದಿಂದ ಏಕಾಂಗಿಯಾದ ಸಚಿವ

ಚಿಕ್ಕಮಗಳೂರು ದತ್ತ ಪೀಠದ ಘೋರಿಗಳಿಗೆ ಮಾಂಸ ನೈವೇದ್ಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಅಕ್ಷಮ್ಯ ಅಪರಾಧ. ಇದರ ಹಿಂದೆ ಯಾರೇ ಇದ್ದರೂ ಕ್ರಮ ಆಗಬೇಕು. ನಿನ್ನೆ ರಾತ್ರಿಯಷ್ಟೇ ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಜಿಲ್ಲಾಧಿಕಾರಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದೇನೆ. 300 ಮೀಟರ್ ವ್ಯಾಪ್ತಿಯಲ್ಲಿ ಪ್ರಾಣಿ ಬಲಿ ನಿಶ್ಯಿದ್ಧವಾಗಿದೆ. ಆದರೂ ಹೇಗೆ ಅವಕಾಶ ಕೊಟ್ಟರೋ ಗೊತ್ತಿಲ್ಲ. ಪ್ರಾಣಿ ಬಲಿ ಮಾಡಿದವರ ವಿರುದ್ಧ ಮತ್ತು ನಿರ್ಲಕ್ಷ್ಯ ತೋರಿದ ಮುಜರಾಯಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಯಾರಿದ್ದಾರೆ, ಅವರ ವಿರುದ್ಧವೂ ಸೂಕ್ತ ಕ್ರಮ ಆಗಬೇಕು. ನಿಯಂತ್ರಣ ಜವಾಬ್ದಾರಿ ಹೊತ್ತವರು ನಿರ್ಲಕ್ಷ್ಯತನ ಮಾಡಿದ್ದು ಸರಿಯಲ್ಲ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು. ನಾನು ಊರಲ್ಲಿ ಇಲ್ಲದ ಸಮಯ ಈ ಘಟನೆ ನಡೆದಿದೆ. ನಾನು ಹೋದ ಮೇಲೆ ಪರಿಶೀಲಿಸುವೆ ಎಂದರು

TAGGED:congressCT RaviJamia MosqueKalaburagiಕಲಬುರಗಿಕಾಂಗ್ರೆಸ್ಜಾಮೀಯಾ ಮಸೀದಿಸಿ.ಟಿ ರವಿ
Share This Article
Facebook Whatsapp Whatsapp Telegram

Cinema Updates

Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories

You Might Also Like

Koppal KRIDL
Crime

ಕೊಪ್ಪಳ KRIDLನಲ್ಲಿ 72 ಕೋಟಿ ರೂ. ಭ್ರಷ್ಟಾಚಾರ

Public TV
By Public TV
4 hours ago
SIT
Bengaluru City

Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

Public TV
By Public TV
4 hours ago
Dharmasthala Mass Burials
Dakshina Kannada

ಶವಗಳನ್ನು ಹೂತಿಟ್ಟ ಪ್ರಕರಣ – ಎಸ್‌ಐಟಿ ತನಿಖೆ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರದ ವಕ್ತಾರ

Public TV
By Public TV
5 hours ago
CBI
Bengaluru City

SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

Public TV
By Public TV
5 hours ago
Shravan Singh 2
Latest

ಆಪರೇಷನ್ ಸಿಂಧೂರ ವೇಳೆ ಯೋಧರಿಗೆ ಸಹಾಯ – 10ರ ಬಾಲಕನ ಶಿಕ್ಷಣ ವೆಚ್ಚ ಭರಿಸಲು ಮುಂದಾದ ಸೇನೆ

Public TV
By Public TV
5 hours ago
Justice Yashwant Varma impeachment
Latest

ಜಸ್ಟಿಸ್ ವರ್ಮಾ ಪದಚ್ಯುತಿಗೆ 100 ಸಂಸದರ ಸಹಿ: ಕಿರಣ್ ರಿಜಿಜು

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?