ದಾವಣಗೆರೆ: ಪ್ರಜಾಪ್ರಭುತ್ವ ಎಂದರೆ ಸಂವಿಧಾನದಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ ಇರುವ ಸರ್ಕಾರ ಎಂಬ ಅರ್ಪಣೆಯಾಗಿದೆ. ಅದನ್ನು ಮತಾಂಧರಿಂದ, ಮತಾಂಧರಿಗಾಗಿ, ಮತಾಂಧರಿಗೋಸ್ಕರ ಇರುವ ಸರ್ಕಾರವೆಂದು ಕಾಂಗ್ರೆಸ್ನವರು (Congress) ತಿರುಚಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ ರವಿ (C.T Ravi) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯಲ್ಲಿ (Davanagere) ಬಿಜೆಪಿ (BJP) ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮೋದಿ ಪ್ರಧಾನಿಯಾದ ಮೇಲೆ ದೇಶ ಜಗತ್ತಿನ ಎದುರು ತಲೆ ಎತ್ತಿ ನಿಂತಿದೆ. ಗಾಯತ್ರಿ ಸಿದ್ದೇಶ್ವರ್ ಅವರನ್ನು ಗೆಲ್ಲಿಸಿ, ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಿ ಎಂದ ಮನವಿ ಮಾಡಿದ್ದಾರೆ. ಇದನ್ನೂ ಓದಿ: General Elections2024: ನೆಚ್ಚಿನ ಅಭ್ಯರ್ಥಿಗಳ ಮೇಲೆ ಲಕ್ಷ ಲಕ್ಷ ಬೆಟ್ಟಿಂಗ್ ಕಟ್ಟಿದ ವಕೀಲರು!
- Advertisement 2
- Advertisement 3
ನಗರದ ಅರಳಿಮರ ಸರ್ಕಲ್ನಿಂದ ರೋಡ್ ಶೋ ಪ್ರಾರಂಭವಾಗಿ ಆನೆಕೊಂಡ, ಮಟ್ಟಿಕಲ್ಲು, ಅಣ್ಣ ನಗರ, ಬಂಬೂ ಬಜಾರ್ ಸೇರಿ ವಿವಿಧ ಬಡಾವಣೆಗಳಲ್ಲಿ ನಡೆಯಿತು. ಸಾವಿರಾರು ಬಿಜೆಪಿ ಕಾರ್ಯಕರ್ತರು, ಮಹಿಳೆಯರು ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಿ.ಟಿ ರವಿ ಅವರಿಗೆ ಮಾಜಿ ಸಚಿವ ಭೈರತಿ ಬಸವರಾಜ್, ಎಂಎಲ್ಸಿ ಎನ್.ರವಿಕುಮಾರ್ ಸೇರಿ ಅನೇಕರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ನಾಡಾದಿಂದ ಕುಸ್ತಿಪಟು ಭಜರಂಗ್ ಪುನಿಯಾ ಅಮಾನತು
- Advertisement 4