Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪು ಬದಲು ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ- ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಟಿಪ್ಪು ಬದಲು ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ- ಸಿ.ಟಿ.ರವಿ

Karnataka

ಟಿಪ್ಪು ಬದಲು ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ- ಸಿ.ಟಿ.ರವಿ

Public TV
Last updated: October 1, 2019 4:22 pm
Public TV
Share
2 Min Read
ct ravi
SHARE

ಉಡುಪಿ: ಟಿಪ್ಪು ಜಯಂತಿ ಕೈಬಿಟ್ಟಿರುವ ಯಡಿಯೂರಪ್ಪ ಸರ್ಕಾರ ಸಂತ ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ ನಡೆಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಮಾಹಿತಿ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಶುನಾಳ ಶರೀಫರ ಜಯಂತಿ ಆಚರಣೆ ಮಾಡುವ ಬಗ್ಗೆ ನನಗೆ ಅಪೇಕ್ಷೆ ಇದೆ. ಶಿಶುನಾಳ ಶರೀಫರು ಹಿಂದೂ ಮುಸಲ್ಮಾನರು ಒಪ್ಪಿಕೊಂಡ ವ್ಯಕ್ತಿ. ಎರಡೂ ಧರ್ಮ ಖುಷಿ ಪಡುವ ಆಚರಣೆ ಇದಾಗಬಹುದು. ಡಾ.ಎಪಿಜೆ ಅಬ್ದುಲ್ ಕಲಾಂ ಜಯಂತಿಯನ್ನೂ ಮಾಡಬಹುದು. ಕಲಾಂ ದೇಶದ ವಿದ್ಯಾರ್ಥಿಗಳಿಗೆ ಪ್ರೇರಣೆ ಕೊಟ್ಟ ವ್ಯಕ್ತಿ. ಮೊದಲು ರಾಜ್ಯಾದ್ಯಂತ ಎಲ್ಲ ಜಯಂತಿ ಆಚರಣೆಗಳ ಸ್ವರೂಪ ಸಂಗ್ರಹ ಮಾಡುತ್ತೇವೆ ಬಳಿಕ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದು ತಿಳಿಸಿದರು.

Tipu Jayanti copy

ನಮ್ಮ ದೇಶದಲ್ಲಿ ಎಲ್ಲ ಜಯಂತಿಗಳು ರಾಜಕೀಯಕರಣಗೊಳ್ಳುವುದರಿಂದ ಎಲ್ಲ ಪಕ್ಷಗಳ ನಾಯಕರ ಅಭಿಪ್ರಾಯ ಪಡೆಯುತ್ತೇನೆ. ನಂತರ ಕ್ಯಾಬಿನೆಟ್‍ನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಮಾಲೋಚನೆ ನಡೆಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಸಾಹಿತಿ ಎಸ್.ಎಲ್.ಭೈರಪ್ಪ ದಸರಾ ಉದ್ಘಾಟನಾ ಭಾಷಣಕ್ಕೆ ಪ್ರಗತಿಪರರ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಚಿವ ಸಿಟಿ ರವಿ, ನಾನೂ ಭೈರಪ್ಪ ಅವರ ಪಕ್ಕದಲ್ಲೇ ಇದ್ದೆ. ಅವರು ತಪ್ಪೇನೂ ಮಾತನಾಡಿಲ್ಲ. ನಾಡದೇವಿಗೆ ಕೈ ಮುಗಿಯದ ನಾಸ್ತಿಕರಿಗಿಂತ ತಮ್ಮ ಶ್ರದ್ಧೆ ತೋರ್ಪಡಿಸಿದ ಭೈರಪ್ಪ ಕೋಟಿ ಪಾಲು ಮೇಲಿದ್ದಾರೆ. ನಾಸ್ತಿಕರನ್ನು ಕರೆದು ಹಿಂದಿನ ಸರ್ಕಾರ ಅಪಮಾನ ಮಾಡಿತ್ತು. ಭೈರಪ್ಪ ಶಬರಿಮಲೆ ಬಗ್ಗೆ ಸಾಂದರ್ಭಿಕವಾಗಿ ಮಾತನಾಡಿದ್ದಾರೆ ಅಷ್ಟೇ. ದೇವಾಲಯಗಳಿಗೆ ಮಹಿಳೆಯರಿಗೆ ಪ್ರವೇಶ ಇಲ್ಲ ಎಂದೇನೂ ಹೇಳಿಲ್ಲ. ನಮ್ಮ ದೇಶದಲ್ಲಿ ಗಂಡು ದೇವತೆಗಳಿಗಿಂತ ಹೆಣ್ಣು ದೇವತೆಗಳೇ ಹೆಚ್ಚಿದ್ದಾರೆ. ಹೆಣ್ಣು ದೇವತೆಯೇ ಇಲ್ಲದಂತಹಾ ಮತದವರು ಅವರ ಬಗ್ಗೆ ಯೋಚನೆ ಮಾಡಲಿ ಸಾಕು ಎಂದು ತಿರುಗೇಟು ನೀಡಿದ್ದಾರೆ.

s.l bhairappa 1

ಧ್ವನಿ ಎತ್ತುತ್ತೇವೆ
ಹತ್ತು ರಾಜ್ಯಗಳಲ್ಲಿ ಮಳೆಯಿಂದ ಹಾನಿಯಾಗಿದೆ, ಹತ್ತೂ ರಾಜ್ಯಕ್ಕೆ ಮಧ್ಯಂತರ ಪರಿಹಾರ ಕೊಟ್ಟಿದ್ದಾರೆ, ಪೂರ್ಣ ಪರಿಹಾರ ಕೊಟ್ಟಿಲ್ಲ. ಚುನಾವಣೆಗೆ ಹೋಗುವ ಮಹಾರಾಷ್ಟ್ರಕ್ಕೂ ಪರಿಹಾರ ಕೊಟ್ಟಿಲ್ಲ. ಪ್ರಧಾನಿಯ ದೃಷ್ಟಿಯಲ್ಲಿ ಎಲ್ಲಾ ರಾಜ್ಯಗಳೂ ಸಮಾನ. ದೇಶದ 132 ಕೊಟಿ ಜನರೂ ಅವರಿಗೆ ಸಮಾನ. ಈ ವಿಚಾರದಲ್ಲಿ ವಿಪಕ್ಷಗಳು ಅನಗತ್ಯ ರಾಜಕಾರಣ ಮಾಡುತ್ತಿದ್ದಾರೆ. ಒಂದೂ ಸೀಟು ಗೆಲ್ಲದ ಕೇರಳ, ಒಂದೇ ಸೀಟು ಗೆದ್ದ ತಮಿಳುನಾಡಿಗೂ ಪರಿಹಾರ ಕೊಟ್ಟಿದ್ದಾರೆ ಎಂದು ಸಿ.ಟಿ.ರವಿ ಮಾಹಿತಿ ನೀಡಿದರು.

ಕರ್ನಾಟಕಕ್ಕೆ ಪರಿಹಾರ ಮೊತ್ತ ಬರಲಿದೆ. ಒಂದು ರಾಜ್ಯಕ್ಕೆ ಕೊಟ್ಟು ಇನ್ನೊಬ್ಬರಿಗೆ ಕೊಡದೇ ಇದ್ರೆ ರಾಜಕಾರಣ ಅನ್ನಬಹುದು. ಹಾಗೇನಾದರೂ ಆಗಿದ್ದರೆ ನಾವೇ ಧ್ವನಿ ಎತ್ತುತ್ತೇವೆ ಸಂಶಯ ಬೇಡ. ಅವಶ್ಯಕತೆ ಬಿದ್ದರೆ ನಮ್ಮ ಸಂಸದರು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತಾರೆ. ಕರ್ನಾಟಕದ ಹಿತಾಸಕ್ತಿ ಬಿಟ್ಟು ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

blg ramadhurga flood

ಚಕ್ರವರ್ತಿ ಸೂಲಿಬೆಲೆ ಅವರು ಕೇಂದ್ರ ಸರ್ಕಾರ ಹಾಗೂ ಸಂಸದರ ವಿರುದ್ಧ ಹರಿಹಾಯ್ದ ಕುರಿತು ಪ್ರತಿಕ್ರಿಯಿಸಿದ ಅವರು, ಸೂಲಿಬೆಲೆ ಕೇಂದ್ರ ಸರ್ಕಾರವನ್ನು ಟೀಕೆ ಮಾಡಿಲ್ಲ. ರಾಷ್ಟ್ರೀಯ ಹಿತಾಸಕ್ತಿಗೆ ಪೂರಕ ಕೆಲಸ ಮಾಡಿರುವುದನ್ನು ಮೊದಲು ಪ್ರಶಂಸೆ ಮಾಡಿದ್ದಾರೆ. ತಮ್ಮ ಅಪೇಕ್ಷೆಯನ್ನು ವ್ತಕ್ಯಪಡಿಸಿದ್ದಾರೆ ಅಷ್ಟೇ, ಅದು ಟೀಕೆ ಅಲ್ಲ. ಪ್ರಧಾನಿ ಕರ್ನಾಟಕ್ಕೆ ಬರಬೇಕು, ಪರಿಹಾರ ಘೋಷಿಸಬೇಕು ಎನ್ನುವುದು ಅವರ ಅಪೇಕ್ಷೆ. ಇದುವೇ ಬ್ಯೂಟಿ ಆಫ್ ಡೆಮಾಕ್ರಸಿ. ನಮಗೂ ಅವರಂತೆ ಸಮಾನ ಅಪೇಕ್ಷೆ ಇದೆ ಎಂದು ರವಿ ತಿಳಿಸಿದರು.

TAGGED:BS YediyurappaCT RaviPublic TVShishunal Sharifa JayantiTippu Jayantiಟಿಪ್ಪು ಜಯಂತಿಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಶಿಶುನಾಳ ಶರೀಫರ ಜಯಂತಿಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
39 seconds ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
12 minutes ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
48 minutes ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
1 hour ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
2 hours ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?