ಕಲ್ಟ್ ಚಿತ್ರತಂಡದ ಯಡವಟ್ಟು – ಸಚಿವ ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ದೂರು

Public TV
2 Min Read
Zaid Khan

– ಚಿತ್ರತಂಡದ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಕಲ್ಟ್‌ ಚಿತ್ರತಂಡದ (Cult Cinema Team) ಯಡವಟ್ಟಿನಿಂದಾಗಿ ಸಚಿವ ಜಮೀರ್ ಅಹ್ಮದ್ ಪುತ್ರ ಹಾಗೂ ಚಿತ್ರನಟ ಜೈದ್ ಖಾನ್ ವಿರುದ್ಧ ಮಾಗಡಿ ಪೊಲೀಸ್‌ ಠಾಣೆಯಲ್ಲಿ (Magadi Police Station) ದೂರು ದಾಖಲಾಗಿದೆ.

ಚಿತ್ರತಂಡದ ಯಡವಟ್ಟಿನಿಂದಾಗಿ ಬೆಂಗಳೂರಿನಲ್ಲಿ (Bengaluru) ಡ್ರೋನ್ ಟೆಕ್ನಿಷಿಯನ್ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದಕ್ಕೆ ಕಾರಣವಾದ ಕಲ್ಟ್ ಚಿತ್ರದ ನಾಯಕ ಜೈದ್ ಖಾನ್‌ ಹಾಗೂ ನಿರ್ದೇಶಕ ಅನಿಲ್ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ. ಇದನ್ನೂ ಓದಿ: Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

Drone

ಏನಿದು ಪ್ರಕರಣ?
ಇದೇ ತಿಂಗಳ ನ.25ರಂದು ಚಿತ್ರದುರ್ಗದಲ್ಲಿ ಕಲ್ಟ್‌ ಚಿತ್ರತಂಡ ಶೂಟಿಂಗ್‌ ನಡೆಸುತ್ತಿತ್ತು. ಕಲ್ಟ್ ಚಿತ್ರಕ್ಕೆ ಸಂತೋಷ್ ಡ್ರೋನ್ ಟೆಕ್ನಿಷಿಯನ್ (Drone Technician) ಆಗಿ ಕೆಲಸ ಮಾಡುತ್ತಿದ್ದರು. ಹಲವು ಸಿನಿಮಾಗಳಿಗೆ ಡ್ರೋನ್‌ ಟೆಕ್ನಿಷಿಯನ್‌ ಆಗಿ ಕೆಲಸ ಮಾಡಿರುವ ಸಂತೋಷ್‌ ಸ್ವಂತವಾಗಿ ಡ್ರೋನ್ ಹೊಂದಿದ್ದರು. 25 ಲಕ್ಷ ರೂ. ಸಾಲಸೋಲ ಮಾಡಿ ಡ್ರೋನ್‌ ಖರೀದಿಸಿದ್ದ ಸಂತೋಷ್‌ ಸಿನಿಮಾ ಶೂಟಿಂಗ್‌ಗಾಗಿ ದಿನಕ್ಕೆ 25,000 ರೂ. ಚಾರ್ಜ್‌ ಮಾಡುತ್ತಿದ್ದರು. ಇದನ್ನೂ ಓದಿ: ವಿಶೇಷ ಚೇತನರ ಅನುದಾನಕ್ಕೂ ಸರ್ಕಾರ ಕೊಕ್ಕೆ – 80% ರಷ್ಟು ಅನುದಾನ ಕಡಿತ ಆರೋಪ!

Zaid Khan 2

ಮಾರ್ಟಿನ್, ಯುವ ಸೇರಿದಂತೆ ಹಲವು ಚಿತ್ರಗಳಿಗೆ ಕೆಲಸ ಮಾಡಿರುವ ಸಂತೋಷ್, ಕಲ್ಟ್‌ ಚಿತ್ರಕ್ಕೂ ಶೂಟಿಂಗ್‌ ಮಾಡುವ ಕೆಲಸಕ್ಕೆ ಒಪ್ಪಿಕೊಂಡಿದ್ದರು. ಡ್ರೋನ್‌ನಲ್ಲಿ ಚಿತ್ರೀಕರಣ ಮಾಡುವುದು ರಿಸ್ಕ್ ಇದೆ ಅಂತ ಎಚ್ಚರಿಕೆ ಕೊಟ್ಟಿದ್ದರೂ ನಿರ್ದೇಶಕ ಮಾಡಲೇಬೇಕು ಎಂದು ಒತ್ತಾಯ ಮಾಡಿದ್ರು ಎನ್ನಲಾಗಿದೆ. ಶೂಟಿಂಗ್‌ ವೇಳೆ ಡ್ರೋನ್ ವಿಂಡ್ ಫ್ಯಾನ್‌ಗೆ ಟಚ್ ಆಗಿ ಪೀಸ್ ಪೀಸ್ ಆಗಿತ್ತು. ಇದಾದ ಬಳಿಕ ಸಂತೋಷ್‌ಗೆ ಕೊಂಚವೂ ನಷ್ಟ ಕಟ್ಟಿಕೊಡದ ಚಿತ್ರತಂಡ ಕಲ್ಟ್ ಚಿತ್ರವನ್ನ ಸಚಿವ ಜಮೀರ್ ಪುತ್ರ ಜೈದ್ ನಿರ್ಮಾಣ ಮಾಡುತ್ತಿದ್ರು. ಹೀಗಾಗಿ ಸಂತೋಷ್‌ ಜೈದ್‌ ಬಳಿಯೇ ಪರಿಹಾರ ನೀಡುವಂತೆ ಕೇಳಿಕೊಂಡಿದ್ದ. ಆದ್ರೆ ಸಂತೋಷ್ ಬಳಿ ವೈಟ್ ಪೇಪರ್ ಮೇಲೆ ಜಮೀರ್ ಪುತ್ರ ಜೈದ್ ಸಹಿ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಒಂದೂವರೆ ಲಕ್ಷ ರೂ. ಮೌಲ್ಯದ ಫುಟೇಜ್‌ ರೆಕಾರ್ಡಿಂಗ್‌ ಆಗಿದ್ದ ಮೆಮೊರಿ ಕಾರ್ಡ್‌ ಕಿತ್ತುಕೊಂಡಿದ್ದಾರೆ, ಆಧಾರ್‌ ಕಾರ್ಡ್‌ ನಂಬರ್‌ ಸಹ ಬರೆಸಿಕೊಂಡು ಅವಮಾನ ಮಾಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

ಘಟನೆ ಬಳಿಕ ಸಂತೋಷ್‌ ಸಹೋದರಿ ಮಾಗಡಿ ರಸ್ತೆ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಲು ಮುಂದಾದರು. ಆದ್ರೆ ಪೊಲೀಸರು ದೂರು ಸ್ವೀಕರಿಸದೇ ವಾಪಸ್‌ ಕಳುಹಿಸಿದ್ದರು ಅನ್ನೋ ಆರೋಪವೂ ಇದೆ. ನಂತರ ಆಸ್ಪತ್ರೆಯ ಮೇಮೊ ಮೇಲೆ ಎನ್‌ಸಿಆರ್ ದಾಖಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ʻಕಲ್ಟ್‌ʼ ಚಿತ್ರತಂಡವನ್ನ ಸಂಪರ್ಕಿಸಿದ್ದಾರೆ. ಘಟನೆ ಸಂಬಂಧ ಸಿನಿಮಾ ನಿರ್ದೇಶಕನಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಒಂದು ದೇಶ, ಒಂದು ಚಂದಾದಾರಿಕೆ – ಏನಿದು ಯೋಜನೆ? ವಿದ್ಯಾರ್ಥಿಗಳಿಗೆ ಸಿಗುವ ಪ್ರಯೋಜನಗಳೇನು?

Share This Article