Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ

Latest

ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ

Public TV
Last updated: August 8, 2022 11:56 am
Public TV
Share
3 Min Read
Divya Kakran 4
SHARE

ನವದೆಹಲಿ: ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕುಸ್ತಿಪಟು ದಿವ್ಯಾ ಕಕ್ರನ್‌ ಅವರು ಸರ್ಕಾರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ 20 ವರ್ಷಗಳಿಂದ ದೆಹಲಿಯಲ್ಲಿ ವಾಸವಾಗಿದ್ದು, ಸ್ಪರ್ಧೆಗಾಗಿ ಅಭ್ಯಾಸ ಮಾಡುತ್ತಿದ್ದೆ. ಆದರೆ ಈವರೆಗೂ ನನಗೆ ಯಾವುದೇ ಸರ್ಕಾರದಿಂದ ಸಹಾಯ ಸಿಗಲಿಲ್ಲ ಎಂದು ನೊಂದು ನುಡಿದಿದ್ದಾರೆ. ಇದನ್ನೂ ಓದಿ: ವಿಂಡೀಸ್ ವಿರುದ್ಧದ ಕೊನೆಯ T20 ಪಂದ್ಯಕ್ಕೆ ರೋಹಿತ್ ಚಕ್ಕರ್ – ಕಾಮನ್‍ವೆಲ್ತ್ ಫೈನಲ್ ನೋಡಲು ಹಾಜರ್

शाबाश पहलवानों।

हमारे पहलवानों ने कॉमनवेल्थ खेलों में धूम मचा दी है। कुश्ती में भारत को एक ही दिन में कुल 6 मेडल मिले, जिसमें 3 गोल्ड हैं। साक्षी मलिक और दीपक पुनिया को उनके गोल्ड 🥇 और दिव्या काकरन एवं मोहित ग्रेवाल को कांस्य पदक के लिए बहुत-बहुत बधाई। pic.twitter.com/2eyHQ15xXK

— Arvind Kejriwal (@ArvindKejriwal) August 6, 2022

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕುಸ್ತಿಪಟು ದಿವ್ಯಾ ಕಕ್ರನ್‌ ಕಂಚಿನ ಪದಕ ಗೆದ್ದರು. ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಟ್ವೀಟ್‌ ಮಾಡಿ ಅಭಿನಂದನೆ ತಿಳಿಸಿದ್ದರು. ಇದಕ್ಕೆ ಪ್ರತಿಯಾಗಿ ಟ್ವೀಟ್‌ ಮಾಡಿರುವ ದಿವ್ಯಾ ತನಗೆ ದೆಹಲಿ ಸರ್ಕಾರದಿಂದ ಸಹಾಯ ನೀಡಬೇಕು ಎಂದು ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಸ್ತಿಪಟು ದಿವ್ಯಾ, ನನ್ನನ್ನು ಅಭಿನಂದಿಸಿದ ಮಾನ್ಯ ಮುಖ್ಯಮಂತ್ರಿಗಳಿಗೆ ನನ್ನ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಕಳೆದ 20 ವರ್ಷಗಳಿಂದ, ನಾನು ದೆಹಲಿಯಲ್ಲಿ ವಾಸಿಸುತ್ತಿದ್ದೇನೆ. ಜೊತೆಗೆ ಕುಸ್ತಿಯನ್ನು ನಿರಂತರ ಅಭ್ಯಾಸ ಮಾಡುತ್ತಿದ್ದೇನೆ. ಆದರೆ ನನಗೆ ಯಾವುದೇ ಸರ್ಕಾರದಿಂದ ಸಹಾಯ ಸಿಗಲಿಲ್ಲ ಎಂದು ಬೇಸರಿಸಿದ್ದಾರೆ.

मेडल की बधाई देने पर दिल्ली के माननीय मुख्यमंत्री जी को तहे दिल से धन्यवाद मेराआपसे एक निवेदन है की मै पिछले 20 साल से दिल्ली मे रह रही हू ओर यही अपने खेल कुश्ती का अभ्यास कर रही हू परंतुअब तक मुझे राज्य सरकारसे किसी तरह की कोई इनाम राशि नही दी गई न कोई मदद दी गई @ArvindKejriwal

— Divya Kakran (@DivyaWrestler) August 7, 2022

ದೆಹಲಿಯವರೇ ಆಗಿದ್ದರೂ ಬೇರೆ ರಾಜ್ಯದ ಪರ ಆಡುತ್ತಿರುವ ಇತರ ಆಟಗಾರರನ್ನು ಗೌರವಿಸುವ ರೀತಿಯಲ್ಲಿಯೇ ನನ್ನನ್ನು ಗೌರವಿಸಬೇಕೆಂಬುದು ನನ್ನ ವಿನಂತಿ ಎಂದು ತಿಳಿಸಿದ್ದಾರೆ.

ನಾನು ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದಾಗ, ನನಗೆ ಯಾವ ಸಹಾಯವೂ ಸಿಗಲಿಲ್ಲ. ನಾನು ತುಂಬಾ ಕಠಿಣ ಪರಿಸ್ಥಿತಿಗಳಿಂದ ಬಂದಿದ್ದೇನೆ. ಬಡಮಕ್ಕಳನ್ನು ಬೆಂಬಲಿಸುವ ಬಗ್ಗೆ ಯೋಚಿಸಬೇಕು. ಇಂದು ನೀವು ನಮ್ಮನ್ನು ಇಲ್ಲಿಗೆ ಕರೆದಿದ್ದೀರಿ ಆದರೆ ನಮಗೆ ಹೆಚ್ಚು ಅಗತ್ಯವಿರುವಾಗ, ಯಾರೂ ನಮಗೆ ಸಹಾಯ ಮಾಡುವುದಿಲ್ಲ. ನಮಗೆ ಹೆಚ್ಚು ಅಗತ್ಯವಿರುವಾಗ ನಾವು ಬೆಂಬಲವನ್ನು ಪಡೆದರೆ, ನಾವು ಶೇ.100 ಪರಿಶ್ರಮವನ್ನು ಕ್ರೀಡೆಯಲ್ಲಿ ತೋರಿಸಬಹುದು. ಚಿನ್ನವನ್ನು ಸಹ ಗೆಲ್ಲಬಹುದು. CWG ಸಮಯದಲ್ಲಿ ನಾನು ಪದಕ ಗೆದ್ದಾಗ, ನೀವು ಕರೆ ಮಾಡಿ ನಮಗೆ ಸಹಾಯ ಮಾಡುವುದಾಗಿ ಹೇಳಿದ್ದೀರಿ. ನಾನು ಏಷ್ಯನ್ ಗೇಮ್ಸ್‌ಗೆ ತರಬೇತಿಗಾಗಿ ಬೆಂಬಲವನ್ನು ಕೇಳಿದ್ದೆ, ಆದರೆ ಏನೂ ಆಗಲಿಲ್ಲ. ಈ ಸಂಬಂಧ ಪತ್ರಗಳನ್ನೂ ಬರೆದೆ. ಆದರೆ ಅದರ ನಂತರ ಯಾರೂ ನನ್ನ ಕರೆಗಳನ್ನು ಸ್ವೀಕರಿಸಲಿಲ್ಲ. ಇಂದು ನಾನು ಪ್ರಶಂಸೆಗಳನ್ನು ಪಡೆಯುತ್ತಿದ್ದೇನೆ. ಆದರೆ ನಾನು ಬಯಸಿದಾಗ, ನನಗೆ ಬೆಂಬಲ ಸಿಗಲಿಲ್ಲ. ದಯವಿಟ್ಟು ಈಗಿನ ಮಕ್ಕಳ ಬಗ್ಗೆ ಯೋಚಿಸಿ. ದೆಹಲಿಯು ಕೆಲವೇ ಪದಕಗಳನ್ನು ಪಡೆದಿದೆ. ಹರಿಯಾಣವನ್ನು ನೋಡಿ, ಪದಕ ಗೆದ್ದವರಿಗೆ 3 ಕೋಟಿ ಕೊಡುತ್ತಾರೆ. ದೆಹಲಿ ಈಗ ಈ ಮೊತ್ತವನ್ನು 20 ಲಕ್ಷದಿಂದ 1 ಕೋಟಿಗೆ ಏರಿಸಲು ನಿರ್ಧರಿಸಿದೆ ಎಂದು ದಿವ್ಯಾ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: Well Done Girls: ಗೋಲ್ಡ್‌ ಜಸ್ಟ್‌ ಮಿಸ್‌ – ಚೊಚ್ಚಲ ಪ್ರಯತ್ನದಲ್ಲೇ ಬೆಳ್ಳಿಗೆದ್ದ ವನಿತೆಯರು

बहिन पूरे देश को आपपर गर्व है। लेकिन मुझे याद नहीं आता कि आप दिल्ली की तरफ से खेलती हैं। आप हमेशा उत्तर प्रदेश की तरफ से खेलती आईं है।
लेकिन खिलाड़ी देश को होता है।योगी आदित्यनाथ जी से आप को सम्मान की उम्मीद नहीं है।मुझे लगता है कि दिल्ली के मुख्यमंत्री आपकी बात जरूर सुनेंगे। https://t.co/WgxwpWJHR1

— Saurabh Bharadwaj (@Saurabh_MLAgk) August 7, 2022

ದಿವ್ಯಾ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ವಕ್ತಾರ ಸೌರಭ್ ಭಾರದ್ವಾಜ್, ಸಹೋದರಿ, ಇಡೀ ದೇಶವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ. ಆದರೆ ನೀವು ದೆಹಲಿಯ ಪರ ಆಡಿದ್ದು ನನಗೆ ನೆನಪಿಲ್ಲ. ಆದರೆ ನೀವು ಉತ್ತರ ಪ್ರದೇಶವನ್ನು ಪ್ರತಿನಿಧಿಸಿ ಆಡಿದ್ದೀರಿ. ಆದರೆ ಒಬ್ಬ ಆಟಗಾರ ದೇಶಕ್ಕೆ ಸೇರಿದವನು. ಯೋಗಿ ಆದಿತ್ಯನಾಥ್ ಅವರಿಂದ ನೀವು ಯಾವುದೇ ಪ್ರಶಸ್ತಿಗಳನ್ನು ನಿರೀಕ್ಷಿಸುವುದಿಲ್ಲ. ದೆಹಲಿ ಸಿಎಂ ನಿಮ್ಮ ಮನವಿಗೆ ಸ್ಪಂದಿಸುತ್ತಾರೆಂಬ ಭರವಸೆ ನನಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ದೆಹಲಿ ಸರ್ಕಾರವು ದೇಶದ ಎಲ್ಲಾ ಕ್ರೀಡಾಪಟುಗಳನ್ನು ಗೌರವಿಸುತ್ತದೆ. ಅವರ ಉಜ್ವಲ ಭವಿಷ್ಯಕ್ಕಾಗಿ ಹಾರೈಸುತ್ತದೆ. ದಿವ್ಯಾ ಕಕ್ರನ್ ಸದ್ಯ ಉತ್ತರಪ್ರದೇಶ ಪರ ಆಡುತ್ತಿದ್ದಾರೆ. ಅವರು ದೆಹಲಿಯ ಪರವಾಗಿ ಆಡಿದ್ದರೆ ಅಥವಾ ದೆಹಲಿಯಲ್ಲಿ ಯಾವುದೇ ಕ್ರೀಡಾ ಯೋಜನೆಯ ಭಾಗವಾಗಿದ್ದರೆ ಅಥವಾ ಅಂತಹ ಯಾವುದೇ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ, ರಾಜ್ಯ ಸರ್ಕಾರ ಖಂಡಿತವಾಗಿಯೂ ಅದನ್ನು ಪರಿಶೀಲಿಸುತ್ತದೆ ಎಂದು ಸಹ ವಕ್ತಾರ ಪ್ರತಿಕ್ರಿಯಿಸಿದ್ದಾರೆ. ಕುಸ್ತಿಪಟು ದಿವ್ಯಾಗೆ ಅಗತ್ಯ ಸಹಾಯದ ಭರವಸೆಯನ್ನು ಸಿಎಂ ಕೇಜ್ರಿವಾಲ್‌ ಕೂಡ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Arvind KejriwalCommonwealth Games 2022CWG 2022Delhi GovernmentWrestler Divya Kakranಅರವಿಂದ್ ಕೇಜ್ರಿವಾಲ್ಕಾಮನ್‍ವೆಲ್ತ್ ಕ್ರೀಡಾಕೂಟಕುಸ್ತಿಪಟುದಿವ್ಯಾ ಕಕ್ರನ್‌ನವದೆಹಲಿ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

siddapur murder case
Crime

ಉ.ಕನ್ನಡ ಸಿದ್ದಾಪುರದಲ್ಲಿ ಕೊಲೆ ಕೇಸ್‌ – ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಪೊಲೀಸರ ವಶಕ್ಕೆ

Public TV
By Public TV
2 minutes ago
KAGODU THIMMAPPA
Districts

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Public TV
By Public TV
12 minutes ago
T Raghumurthy Challakere MLA
Chitradurga

ಚಿತ್ರದುರ್ಗದಲ್ಲಿ ಬರ ಪರಿಹಾರ ವಿತರಣೆಯಲ್ಲಿ ಅಕ್ರಮ – ಶೀಘ್ರ ಕ್ರಮಕ್ಕೆ ಚಳ್ಳಕೆರೆ ಶಾಸಕ ಒತ್ತಾಯ

Public TV
By Public TV
15 minutes ago
Madikeri Forest
Districts

ಕೊಡಗಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ – ರೆಸಾರ್ಟ್‌ಗಾಗಿ ಮರಗಳ ಮಾರಣಹೋಮ

Public TV
By Public TV
15 minutes ago
Jagannath Shegji
Bengaluru City

ಸಣ್ಣ ಗುತ್ತಿಗೆದಾರರಿಂದ ಕಮಿಷನ್‌ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು

Public TV
By Public TV
1 hour ago
Sunetra Pawar
Latest

ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?