ನವದೆಹಲಿ: ಕರ್ನಾಟಕದಿಂದ (Karnataka) ತಮಿಳಿನಾಡಿಗೆ (Tamil Nadu) ಫೆಬ್ರವರಿಯಿಂದ ಮಾರ್ಚ್ ಅವಧಿಗೆ 2.50 ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ಇಂದು ದೆಹಲಿಯಲ್ಲಿ ಸಭೆ ನಡೆಸಿದ ಸಮಿತಿ ಸಸ್ಯವರ್ಗ, ಪ್ರಾಣಿಸಂಕುಲ ಮತ್ತು ಪರಿಸರ ಸಂರಕ್ಷಣೆಗಾಗಿ ಪರಿಸರದ ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದೆ.
ಸಭೆಯಲ್ಲಿ ದಿನಾಂಕ 01.06.2023 ರಿಂದ 09.02.2024 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವಿನ ಕೊರತೆಯು 52.43% ಇದ್ದು, ಅನಿಯಂತ್ರಿತ ಜಲಾನಯನ ಪ್ರದೇಶದಿಂದ ಉಂಟಾಗುವ ಕೊಡುಗೆಯನ್ನು ಹೊರತುಪಡಿಸಿ ಬಿಳಿಗುಂಡ್ಲು ತಲುಪಲು ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಕರ್ನಾಟಕ ಹೇಳಿತು. ಇದನ್ನೂ ಓದಿ: ʻದೆಹಲಿ ಚಲೋʼ ಪ್ರತಿಭಟಗೆ ತೆರಳುತ್ತಿದ್ದ ರಾಜ್ಯದ 100ಕ್ಕೂ ಹೆಚ್ಚು ರೈತರು ಪೊಲೀಸ್ ವಶಕ್ಕೆ
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತಮಿಳುನಾಡು 7.61 ಟಿಎಂಸಿ ಬಾಕಿ ಉಳಿಸಿಕೊಂಡ ನೀರಿನ ಜೊತೆಗೆ, ಫೆಬ್ರವರಿ 2024 ರಿಂದ ಮೇ 2024 ರ ತಿಂಗಳುಗಳಿಗೆ, ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿತು.
ಅಂತಿಮವಾಗಿ ಫೆಬ್ರವರಿ 2024 ಮತ್ತು ಮಾರ್ಚ್ 2024 ರ ಉಳಿದ ಅವಧಿಗೆ ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ CWDT ಯ ಆದೇಶದ ಪ್ರಕಾರ ಅಂತರರಾಜ್ಯ ಸಂಪರ್ಕ ಬಿಂದು ಬಿಳಿಗುಂಡ್ಲುನಲ್ಲಿ ಕರ್ನಾಟಕವು ನಿಗದಿತ ಪ್ರಮಾಣದ ನೀರು ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು CWRC ನಿರ್ಧರಿಸಿತು. ಕರ್ನಾಟಕವು ಫೆಬ್ರವರಿ 2024 ಹಾಗೂ ಮಾರ್ಚ್ 2024 ರ ತಿಂಗಳುಗಳಿಗೆ ಪ್ರತಿ ತಿಂಗಳು 2.50 ಟಿಎಂಸಿ ನೀರು ಹರಿಸಬೇಕು ಎಂದು ಶಿಫಾರಸು ಮಾಡಿತು. ಇದನ್ನೂ ಓದಿ: ಮಾತೃ ಭಾಷೆಯಲ್ಲಿ CAPF ಪರೀಕ್ಷೆ ಬರೆಯಲು ಅನುಮತಿ