Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಡಾನಾ ಚಂಡಮಾರುತ | 14 ಜಿಲ್ಲೆಗಳಲ್ಲಿ ಶಾಲೆಗಳು ಬಂದ್‌, 800 ಪರಿಹಾರ ಕೇಂದ್ರ ಸ್ಥಾಪನೆ, ಒಡಿಶಾ-ಬಂಗಾಳದಲ್ಲಿ ಫುಲ್‌ ಅಲರ್ಟ್‌

Public TV
Last updated: October 22, 2024 5:17 pm
Public TV
Share
5 Min Read
Dana
SHARE

– ಏನಿದು ಡಾನಾ ಚಂಡಮಾರುತ? – ಚಂಡಮಾರುತಗಳಿಗೆ ಏಕೆ ಹೆಸರಿಡಬೇಕು?

Contents
ಚಂಡಮಾರುತ ಎಂದರೇನು?ʻಡಾನಾʼ ಎಂದರೇನು?ಚಂಡಮಾರುತಗಳಿಗೆ ಹೆಸರಿಡಲು ಕಾರಣ ಏನು?ಚಂಡಮಾರುತಗಳಿಗೆ ಏಕೆ ಹೆಸರಿಡಬೇಕು?ಚಂಡಮಾರುತ ಎದುರಿಸಲು ಒಡಿಶಾ ಸರ್ಕಾರ ಕೈಗೊಂಡಿರುವ ಕ್ರಮಗಳೇನು?800ಕ್ಕೂ ಹೆಚ್ಚು ಪರಿಹಾರ ಕೇಂದ್ರ ಸ್ಥಾಪನೆಒಡಿಶಾ, ಬಂಗಾಳದಲ್ಲಿ ಸರ್ಕಾರಗಳು ಫುಲ್‌ ಅಲರ್ಟ್‌ಗಣ್ಯರ ಭೇಟಿಯೂ ರದ್ದು

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರ ಪ್ರದೇಶಗಳಿಗೆ ʻಡಾನಾʼ ಚಂಡಮಾರುತ (Cyclone Dana) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂಗಾರು ಮಳೆ ಋತುವಿನ ನಂತರ ಉಷ್ಣವಲಯದ ಮೊದಲ ಚಂಡಮಾರುತ ಇದಾಗಿದೆ.

ಪೂರ್ವ– ಮಧ್ಯ ಬಂಗಾಳಕೊಲ್ಲಿ (Bengal) ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ‍ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಅಂದ್ರೆ ಅಕ್ಟೋಬರ್‌ 23ರ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ. ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ (ಅ.24) ರಾತ್ರಿ ಅಥವಾ ಶುಕ್ರವಾರ (ಅ.25) ಮುಂಜಾನೆ ಒಡಿಶಾದ ಪುರಿಗೆ ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

CYCLONE

ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗಲಿದೆ. ಅಕ್ಟೋಬರ್ 23 ರಿಂದಲೇ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 90 ರಿಂದ 120 ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಇದನ್ನು ತೀವ್ರ ಚಂಡಮಾರುತ ಎಂದು ವರ್ಗೀಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಮತ್ತು ಬಂಗಾಳದಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಸಿದೆ. ಹಲವೆಡೆ ಶಾಲಾ ಕಾಲೇಜುಗಳಿಗೆ ಸಂಪೂರ್ಣ ರಜೆ ಘೋಷಣೆ ಮಾಡಲಾಗಿದೆ. ಚಂಡಮಾರುತವನ್ನು ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಸಕಲ ತಯಾರಿ ಮಾಕೊಳ್ಳುತ್ತಿದೆ. ಅಷ್ಟಕ್ಕೂ ಡಾನಾ ಚಂಡ ಮಾರುತ ಎಂದರೇನು? ಡಾನಾ ಹೆಸರು ಬಂದಿದ್ದು ಹೇಗೆ? ಚಂಡಮಾರುತಗಳಿಗೆ ಏಕೆ ಹೆಸರಿಡಬೇಕು? ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ… ಅದಕ್ಕೂ ಮುನ್ನ ʻಚಂಡಮಾರುತʼ ಎಂದರೇನು? ಎಂಬುದನ್ನು ನೋಡೋಣ….

ಚಂಡಮಾರುತ ಎಂದರೇನು?

ಚಂಡಮಾರುತ ಎಂಬುದು ಹವಾಮಾನಕ್ಕೆ ಸಂಬಂಧಿಸಿದ ಒಂದು ವಿದ್ಯಮಾನ. ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಗಾಳಿ ಜೋರಾಗಿ ಪ್ರದಕ್ಷಿಣೆ ಇಲ್ಲವೇ ಅಪ್ರದಕ್ಷಿಣಾ ಪಥದಲ್ಲಿ ಸುರುಳಿ ಸುತ್ತುತ್ತಾ ಕಡಿಮೆ ಒತ್ತಡ ಇರುವ ಪ್ರದೇಶದತ್ತ ಮುನ್ನುಗ್ಗುವುದೇ ಚಂಡಮಾರುತ.

Cyclone Remal

ʻಡಾನಾʼ ಎಂದರೇನು?

ಡಾನಾ ಎಂಬುದು ಅರೇಬಿಕ್‌ ಪದವಾಗಿದೆ. ಡಾನಾ ಎಂದರೆ ಅಮೂಲ್ಯ ಮತ್ತು ಸುಂದರವಾದ ಮುತ್ತು ಎಂದು ಹೆಸರು. ಈ ಹೆಸರನ್ನು ಪರ್ಷಿಯನ್‌ ಮತ್ತು ಕೊಲ್ಲಿಯ ಅರಬ್‌ ರಾಷ್ಟ್ರಗಳಲ್ಲಿ ಬಳಸಲಾಗುತ್ತದೆ. ಅಲ್ಲಿ ಪರ್ಲ್‌ ಡೈವಿಂಗ್‌ (ಸಮುದ್ರದಾಳದಲ್ಲಿ ಮುತ್ತು ಹುಡುಕುವ ಕೆಲಸ) ಮಹತ್ವದ ವೃತ್ತಿಯಾಗಿದೆ. ಪರ್ಷಿಯನ್‌ ಭಾಷೆಯಲ್ಲಿ ʻಡಾನಾʼ ಎಂದರೆ ದಾನಾ, ಅನುದಾನ, ಮುಂತಾದ ಅರ್ಥಗಳನ್ನು ಸೂಚಿಸುತ್ತದೆ. ಉಷ್ಣವಲಯದ ಚಂಡಮಾರುತಗಳಿಗೆ ಅಂತಾರಾಷ್ಟ್ರೀಯವಾಗಿ ಹೆಸರಿಸುವ ವ್ಯವಸ್ಥೆಯ ಭಾಗವಾಗಿ ಕತಾರ್ ಈ ಹೆಸರನ್ನಿಟ್ಟಿದೆ.

Cyclone Michaung

ಚಂಡಮಾರುತಗಳಿಗೆ ಹೆಸರಿಡಲು ಕಾರಣ ಏನು?

ಹಿಂದೂ ಮಹಾಸಾಗರದಲ್ಲಿ ಹುಟ್ಟುವ ಚಂಡಮಾರುತಗಳಿಗೆ ಹೆಸರಿಡುವ ಪ್ರಕ್ರಿಯೆ ಆರಂಭವಾಗಿದ್ದು 2000ನೇ ಇಸವಿಯಿಂದ. 2000ನೇ ಇಸವಿಯಲ್ಲಿ ಬಾಂಗ್ಲಾದೇಶ, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ಒಮನ್, ಪಾಕಿಸ್ತಾನ, ಶ್ರೀಲಂಕಾ ಮತ್ತು ಥೈಲ್ಯಾಂಡ್ ದೇಶಗಳನ್ನು ಒಳಗೊಂಡ WMO/ESCAP (ವಿಶ್ವ ಹವಾಮಾನ ಸಂಸ್ಥೆ/ಯುನೈಟೆಡ್ ನೇಷನ್ಸ್ ಎಕನಾಮಿಕ್ ಅಂಡ್ ಸೋಶಿಯಲ್ ಕಮಿಷನ್ ಫಾರ್ ಏಷ್ಯಾ ಮತ್ತು ಪೆಸಿಫಿಕ್) ಎಂಬ ಗುಂಪು ಚಂಡಮಾರುತಗಳಿಗೆ ಹೆಸರಿಡಲು ಪ್ರಾರಂಭಿಸಿತು. 2018ರಲ್ಲಿ WMO/ESCAP ಗುಂಪು ವಿಸ್ತರಿಸಿದ್ದರಿಂದ ಈ ಒಕ್ಕೂಟಕ್ಕೆ ಇರಾನ್, ಕತಾರ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಯೆಮೆನ್ ರಾಷ್ಟ್ರಗಳು ಸೇರ್ಪಡೆಯಾದವು. ಈ ಗುಂಪಿನ 13 ರಾಷ್ಟ್ರಗಳು ತಲಾ 13 ಹೆಸರುಗಳನ್ನ ಪಟ್ಟಿ ಮಾಡಿ ಸಲಹೆ ರೂಪದಲ್ಲಿ ಕಳುಹಿಸಿದ ನಂತರ WMO/ESCAP ಪ್ಯಾನೆಲ್ ಆನ್ ಟ್ರಾಪಿಕಲ್ ಸೈಕ್ಲೋನ್ಸ್ (PTC) ಪಟ್ಟಿಯನ್ನು ಅಂತಿಮಗೊಳಿಸಿತು. ಬಳಿಕ 2020ರ ಏಪ್ರಿಲ್‌ನಲ್ಲಿ ಭಾರತೀಯ ಹಮಾವಾನ ಇಲಾಖೆ 169 ಚಂಡಮಾರುತ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿತು.

ಚಂಡಮಾರುತಗಳಿಗೆ ಏಕೆ ಹೆಸರಿಡಬೇಕು?

ಚಂಡಮಾರುತಗಳಿಗೆ ಹೆಸರಿಡುವುದರಿಂದ ಸುಲಭವಾಗಿ ಗುರುತಿಸಬಹುದು. ಚಂಡಮಾರುತಗಳನ್ನು ಸುಲಭವಾಗಿ ಗುರುತಿಸಲು ಮತ್ತು ಹವಾಮಾನ-ಸಂಬಂಧಿತ ಅಪಾಯಗಳ ಬಗ್ಗೆ ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸಲು ಸಹಾಯಕವಾಗುತ್ತದೆ. ವಿಪತ್ತು ನಿರ್ವಹಣೆ, ವೈಜ್ಞಾನಿಕ ವಿಷಯಗಳನ್ನ ಸರಳವಾಗಿ ಅರ್ಥೈಸಿಕೊಂಡು ವಿಪತ್ತು ನಿರ್ವಹಣೆಗೆ ಪೂರಕವಾಗಿ ಕೆಲಸ ಮಾಡಬಹುದು.

Cyclone Biparjoy 1

ಚಂಡಮಾರುತ ಎದುರಿಸಲು ಒಡಿಶಾ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

1. ಪ್ರವಾಸಿಗಳು ಮತ್ತು ಯಾತ್ರಾರ್ಥಿಗಳಿಗೆ ಅಕ್ಟೋಬರ್‌ 23ಕ್ಕೆ ಮುಂಚಿತವಾಗಿ ಪುರಿಯಿಂದ ಹೊರಡುವಂತೆ ಸೂಚನೆ ನೀಡಲಾಗಿದೆ.
2. ಅ.23 ರಿಂದ 25ರ ವರೆಗೆ ಮುನ್ನೆರಿಕಾ ಕ್ರಮವಾಗಿ 14 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
3. ಅಕ್ಟೋಬರ್ 23 ರಿಂದ 25ರ ವರೆಗೆ ಎಲ್ಲಾ ರಕ್ಷಣಾ ಸಿಬ್ಬಂದಿಗೆ ರಜೆ ಕಡಿತಗೊಳಿಸಿದೆ
4. ಅಣುಕು ಕಾರ್ಯಾಚರಣೆ ಮೂಲಕ ಜಾಗೃತಿ ಮೂಡಿಸುತ್ತಿದೆ
5. ಡಾನಾ ಚಂಡಮಾರುತಕ್ಕೆ ತುತ್ತಾಗುವ ಸಂಭಾವ್ಯ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
6. 10 ಜಿಲ್ಲೆಗಳಲ್ಲಿ ಒಟ್ಟು 17 ಒಡಿಆರ್‌ಎಎಫ್ ತಂಡಗಳನ್ನು ನಿಯೋಜಿಸಲು ಮುಂದಾಗಿದೆ. ಜೊತೆಗೆ ಮೂರು ODRAF ತಂಡಗಳನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗುತ್ತಿದೆ.
7. ಪಶ್ಚಿಮ ಬಂಗಾಳದಲ್ಲೂ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಸೇನೆಯ ರಕ್ಷಣಾ ತಂಡ, ಕೋಸ್ಟ್‌ ಗಾರ್ಡ್‌ ತಂಡಗಳೂ ಫೀಲ್ಡಿಗಿಳಿದಿವೆ.

800ಕ್ಕೂ ಹೆಚ್ಚು ಪರಿಹಾರ ಕೇಂದ್ರ ಸ್ಥಾಪನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತೀವ್ರ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇರುವುದರಿಂದ ಒಡಿಶಾ ಸರ್ಕಾರ 800ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು 250ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದ್ದು, ರಕ್ಷಣಾ ಸಿಬ್ಬಂದಿ ಹಾಗೂ ನೌಕರರಿಗೆ ಅಗತ್ಯ ಸೂಚನೆಗಳನ್ನು ಕೊಟ್ಟಿದ್ದಾರೆ.

Cyclone

ಒಡಿಶಾ, ಬಂಗಾಳದಲ್ಲಿ ಸರ್ಕಾರಗಳು ಫುಲ್‌ ಅಲರ್ಟ್‌

ಎರಡೂ ರಾಜ್ಯಗಳು ಚಂಡಮಾರುತ ಎದುರಿಸಲು ನಾನಾ ಕ್ರಮಗಳನ್ನು ಕೈಗೊಂಡಿವೆ. ಈಗಾಗಲೇ ಕರಾವಳಿ ಪ್ರದೇಶಗಳಲ್ಲಿರುವ ಜನರನ್ನು ಸ್ಥಳಾಂತರಿಸಲು ಮುಂದಾಗಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿವೆ. ಗಂಜಾಂ, ಪುರಿ, ಜಗತ್‌ಸಿಂಗ್‌ಪುರ್, ಕೇಂದ್ರಪಾರ, ಭದ್ರಕ್, ಬಾಲಸೋರ್, ಮಯೂರ್‌ಭಂಜ್, ಕಿಯೋಂಜರ್, ಧೆಂಕನಲ್, ಜಾಜ್‌ಪುರ್, ಅಂಗುಲ್, ಖೋರ್ಧಾ, ನಯಾಗರ್ ಮತ್ತು ಕಟಕ್ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಕರಾವಳಿ ಪ್ರದೇಶಗಳಲ್ಲಿ ಹೆದ್ದಾರಿ ಮತ್ತು ರೈಲು ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಗುರುವಾರ ಒಡಿಶಾದ ಪುರಿ, ಖುರ್ದಾ, ಗಂಜಾಂ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷನೆ ಮಾಡಿದೆ. ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪುರ್ಬಾ ಮತ್ತು ಪಶ್ಚಿಮ ಮೇದಿನಿಪುರ್ ಮತ್ತು ಉತ್ತರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳಲ್ಲಿ ಬುಧವಾರ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ಸ್ಥಳಾಂತರಗೊಂಡ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಪ್ರಮಾಣದ ದಾಸ್ತಾನು, ನೀರು ಇತ್ಯಾದಿ ಸೌಲಭ್ಯಗಳನ್ನು ಸೈಕ್ಲೋನ್‌ ಶೆಲ್ಟರ್‌ಗಳಲ್ಲಿ ಸಂಗ್ರಹಿಸಿಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಶೂನ್ಯ ಅಪಘಾತ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಗಣ್ಯರ ಭೇಟಿಯೂ ರದ್ದು

ಡಾನಾ ಚಂಡಮಾರುತ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೂರು ದಿನಗಳ ಒಡಿಶಾ ಭೇಟಿಯು ರದ್ದಾಗಿದೆ. ರಾಷ್ಟ್ರಪತಿಗಳು ಒಡಿಶಾದ ಬಂಗ್ರಿಪೋಸಿ, ಉಪರಬೇಡ, ರಾಯರಂಗಪುರ, ಪುರಿ ಮತ್ತು ಭುವನೇಶ್ವರಕ್ಕೆ ಭೇಟಿ ನೀಡಬೇಕಿತ್ತು. ಜೊತೆಗೆ ಭಾರತ-ಬಾಂಗ್ಲಾದೇಶ ಗಡಿಯಲ್ಲಿ 450 ಕೋಟಿ ರೂಪಾಯಿ ವೆಚ್ಚದ ಆಧುನಿಕ ಪ್ರಯಾಣಿಕ ಟರ್ಮಿನಲ್ ಅನ್ನು ಉದ್ಘಾಟಿಸಲು ಬುಧವಾರ ಪಶ್ಚಿಮ ಬಂಗಾಳದ ಪೆಟ್ರಾಪೋಲ್‌ಗೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಕೂಡ ಚಂಡಮಾರುತದಿಂದಾಗಿ ರದ್ದಾಗಿದೆ.

TAGGED:BengalCyclone Danacyclonic stormheavy rainIMDODISHAಒಡಿಶಾಡಾನಾ ಚಂಡಮಾರುತಪಶ್ಚಿಮ ಬಂಗಾಳಮಳೆ
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
4 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
7 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
8 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
8 hours ago

You Might Also Like

ramesh rai
Crime

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ

Public TV
By Public TV
3 hours ago
B.Dayananda and other 5 police officers suspended
Bengaluru City

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

Public TV
By Public TV
5 hours ago
seemanth kumar singh
Bengaluru City

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

Public TV
By Public TV
3 hours ago
Mahua Moitra Pinaki Misra 1
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
3 hours ago
rcb bengaluru stampede
Bengaluru City

ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

Public TV
By Public TV
4 hours ago
Sindoor Plant 1
Latest

ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?