Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

Latest

Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

Public TV
Last updated: November 30, 2024 9:13 am
Public TV
Share
2 Min Read
Cyclone Fengal 2
SHARE

– ಶಾಲಾ, ಕಾಲೇಜುಗಳು ಬಂದ್‌
– 2,229 ಪರಿಹಾರ ಕೇಂದ್ರಗಳ ಸ್ಥಾಪನೆ
– ಐಟಿ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಫೆಂಗಲ್‌ ಚಂಡಮಾರುತ (Cyclone Fengal) ತೀವ್ರತೆ ಪಡೆದಿದ್ದು, ಶನಿವಾರ (ಇಂದು) ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಮಳೆ ಎದುರಿಸುತ್ತಿರುವ ತಮಿಳುನಾಡು (Tamil Nadu) ಹಾಗೂ ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

Cyclone Fengal

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಜೊತೆಗೆ ರಾಣಿಪೇಟ್, ತಿರುವಣ್ಣಾಮಲೈ, ವೆಲ್ಲೂರು, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಿಣಂ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಅದಾನಿ ಬಂಧನಕ್ಕೆ ಅಮೆರಿಕದಿಂದ ಯಾವುದೇ ವಿನಂತಿ ಸ್ವೀಕರಿಸಿಲ್ಲ: ಕೇಂದ್ರ

Cyclone Dana Makes Landfall With Heavy Rain Strong Winds In Odisha Bengal

ಅಲ್ಲದೇ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಉಂಟುಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ತಮಿಳುನಾಡು, ಪುದುಚೇರಿಯ ಜೊತೆಗೆ ಆಂಧ್ರದ ನೆಲ್ಲೂರು, ತಿರುಪತಿ, ಚಿತ್ತೂರು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಿಸಿದೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರಾಜ್ಯದ ಯೋಜನೆಗಳಿಗೆ ಅನುದಾನ ಕೋರಿದ ಡಿಕೆಶಿ: ಏನೇನು ಮನವಿ ಮಾಡಲಾಗಿದೆ?

Cyclone Dana Makes Landfall With Heavy Rain Strong Winds In Odisha Bengal

ಈಗಾಗಲೇ ತಮಿಳುನಾಡಿನಲ್ಲಿ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಫೆಂಗಲ್‌ ಚಂಡಮಾರುತವು ಭಾರಿ ಮಳೆ ತರಲಿದ್ದು ಮತ್ತು ಗಂಟೆಗೆ 70 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ರಾಜ್ಯ ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಿದೆ. ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ನಿಯಮ ಜಾರಿಗೊಳಿಸುವಂತೆ ಸೂಚಿಸಿದೆ. ಮಳೆ ಮುನ್ಸೂಚನೆ ಹೊಂದಿರುವ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

remel cyclone

2,229ರ ಪರಿಹಾರ ಶಿಬಿರ ಸ್ಥಾಪನೆ:
ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕಾ ಕ್ರಮದ ಭಾಗವಾಗಿ ರಾಜ್ಯಾದ್ಯಂತ 2,229 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಆಶ್ರಯ ಅಗತ್ಯವಿರುವವರಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಲಾಗಿದೆ. ಈವರೆಗೆ ತಿರುವಳ್ಳೂರು ಮತ್ತು ನಾಗಪಟ್ಟಿಣಂ ಜಿಲ್ಲೆಗಳಲ್ಲಿ 164 ಕುಟುಂಬಗಳ 471 ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಲ್ಲಿ ಇರಿಸಲಾಗಿದೆ. ಸಂಭವನೀಯ ಪ್ರವಾಹದ ನಿರೀಕ್ಷೆಯಲ್ಲಿ ಸ್ಥಳೀಯ ಅಧಿಕಾರಿಗಳು ಮೋಟಾರ್‌ ಪಂಪ್‌ಗಳು, ಜನರೇಟರ್‌ಗಳು ಮತ್ತು ದೋಣಿಗಳು ಸೇರಿದಂತೆ ಅಗತ್ಯ ಸಾಧನಗಳನ್ನು ಚೆನ್ನೈ, ಕಡಲೂರು ಮತ್ತು ಮೈಲಾಡುತುರೈ ಮುಂತಾದ ಪೀಡಿತ ಪ್ರದೇಶಗಳಿಗೆ ನಿಯೋಜಿಸಿದ್ದಾರೆ.

ಶ್ರೀಲಂಕಾದಲ್ಲಿ 12 ಸಾವು:
ಶ್ರೀಲಂಕಾದಲ್ಲೂ ಫೆಂಗಲ್‌ ಹಾವಳಿಗೆ ಜನರು ತತ್ತರಿಸಿದ್ದು, 3 ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಮಳೆ ಸಂಬಂಧಿತ ದುರ್ಘ‌ಟನೆಗಳಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹೈಕೋರ್ಟ್‌ಗೆ ತೆರಳುವಂತೆ ಶಾಹಿ ಈದ್ಗಾ ಸಮಿತಿಗೆ ಸೂಚನೆ; ʻಹೈʼಆದೇಶ ಬರೋವರೆಗೆ ಮಸೀದಿ ಸಮೀಕ್ಷೆಗೆ ಸುಪ್ರೀಂ ತಡೆ

TAGGED:Cyclone FengalLandfallPuducherrySchools Shuttamil naduತಮಿಳುನಾಡುಫೆಂಗಲ್‌ ಚಂಡಮಾರುತಬಂಗಾಳಕೊಲ್ಲಿಭೂಕುಸಿತಶಾಲಾ-ಕಾಲೇಜುಗಳು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Ballari Student Crime
Bellary

ಬಳ್ಳಾರಿ | ವಿದ್ಯಾರ್ಥಿ ಹತ್ಯೆ ಕೇಸ್‌ – 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ ಬಾಲಕ

Public TV
By Public TV
11 minutes ago
Ishan Kishan
Cricket

ಬಾವನ ಸಾವಿನ ನೋವಿನಲ್ಲಿದ್ದರೂ ಟೀಂ ಇಂಡಿಯಾಗೆ ವಿಶ್ವಕಪ್‌ ಗೆಲುವಿನ ಸಂಭ್ರಮ ನೀಡಿದ ಇಶಾನ್‌ ಕಿಶನ್‌

Public TV
By Public TV
24 minutes ago
Mojtaba Khamenei 1
Latest

ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ – ಇರಾನ್‌ನಿಂದ ಅಧಿಕೃತ ಘೋಷಣೆ

Public TV
By Public TV
28 minutes ago
Gautam Gambhir with Sanju Samson
Cricket

ಟಿ20 ವಿಶ್ವಕಪ್‌ ಗೆಲುವನ್ನು ಆ ಇಬ್ಬರು ವ್ಯಕ್ತಿಗಳಿಗೆ ಅರ್ಪಿಸಿದ ಗೌತಮ್‌ ಗಂಭೀರ್‌

Public TV
By Public TV
53 minutes ago
T20 World Cup Team India
Bidar

ಇತಿಹಾಸ ಬರೆದ ಟೀಂ ಇಂಡಿಯಾ – ರಾಜ್ಯದೆಲ್ಲೆಡೆ ಕ್ರೀಡಾಭಿಮಾನಿಗಳ ಸಂಭ್ರಮ

Public TV
By Public TV
1 hour ago
Iran Khamenei
Latest

9ಕ್ಕೆ ಹಿಜಾಬ್, 13ಕ್ಕೆ ಮದುವೆ – ಖಮೇನಿ ಆಡಳಿತದಲ್ಲಿ ಇರಾನ್ ಮಹಿಳೆಯರ ಸ್ಥಿತಿ ಹೇಗಿತ್ತು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?