Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ

Bengaluru City

ಮಿಚಾಂಗ್‌ ಚಂಡಮಾರುತ ಅಬ್ಬರ, ಕಾಳಹಸ್ತಿಗೆ ಜಲದಿಗ್ಬಂಧನ – ಕರ್ನಾಟಕದಲ್ಲೂ ಮುಂದಿನ 5 ದಿನ ಮಳೆ ಸಾಧ್ಯತೆ

Public TV
Last updated: December 6, 2023 7:55 am
Public TV
Share
3 Min Read
Rain
SHARE

ಚೆನ್ನೈ: ಭಾರೀ ನಷ್ಟ ಉಂಟು ಮಾಡಿದ ತೀವ್ರ ಸ್ವರೂಪದ ಮಿಚಾಂಗ್‌ ಚಂಡಮಾರುತ (Cyclone Michaung) ಆಂಧ್ರದ ಬಾಪಟ್ಲಾ ಸಮೀಪ ತೀರವನ್ನು ತಾಕಿದೆ. ತೂಫಾನ್ ಪರಿಣಾಮ ಕೋಸ್ತಾ ಆಂಧ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆಗಳು ಮಾತ್ರವಲ್ಲದೇ ಕೆಲ ಊರುಗಳೂ ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ತಿರುಮಲ ತಿರುಪತಿ (Tirumala Temple) ಜಲಮಯವಾಗಿದ್ದು, ಜಲಪಾತಗಳಿಗೆ ಜೀವಕಳೆ ಪಡೆದಿವೆ. ಕಾಳಹಸ್ತಿ ಜಲದಿಗ್ಬಂಧನದಲ್ಲಿದೆ. ಸಮುದ್ರದಲ್ಲಿ ಅಲೆಗಳಂತೂ ಎರಡು ಮೀಟರ್ ಎತ್ತರದವರೆಗೂ ಏಳುತ್ತಿದ್ದವು. ಮತ್ತೊಂದ್ಕಡೆ, ಚೆನ್ನೈ (Chennai Rain) ಮೇಲೆ ಮಿಚಾಂಗ್‌ ಪ್ರಭಾವ ಕಡಿಮೆ ಆಗಿದೆ. ಆದ್ರೆ ಕೆಲವು ಕಡೆ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಇದನ್ನೂ ಓದಿ: ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ

Rain 2

ನಟ ವಿಶಾಲ್ (Actor Vishal) ನಿವಾಸ ಜಲಾವೃತವಾಗಿದೆ. ವಿಶಾಲ್ ಮನೆಯಲ್ಲಿದ್ದ ನಟ ಅಮೀರ್ ಖಾನ್‌ರನ್ನು ರಕ್ಷಣಾ ಪಡೆಗಳು ರಕ್ಷಿಸಿವೆ. ಇಂದು (ಡಿ.6) ಸಹ ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದೆ. ಒಡಿಶಾ ಕೂಡ ಅಲರ್ಟ್ ಆಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ 26 ಜನ ಮೀನುಗಾರರ ರಕ್ಷಣೆ

ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ: ಕರ್ನಾಟಕದ ಹಲವು ಭಾಗದಲ್ಲಿ ಮೂರ್ನಾಲ್ಕು ದಿನದಿಂದ ಚಳಿಯ ವಾತಾವರಣವಿದೆ. ಮುಂದಿನ ಐದು ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ (Rain In Karnataka) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಪಾಂಡಿಚೇರಿ ರಾಜ್ಯಗಳಲ್ಲಿ ಆಗುತ್ತಿರುವ ಮಿಚಾಂಗ್‌ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಆಗುವ ಸಾಧ್ಯತೆಗಳಿಲ್ಲ.

Rain 3

ಆದಾಗ್ಯೂ ಕರ್ನಾಟಕದ ಕರಾವಳಿ ಜಿಲ್ಲೆಗಳೂ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್‌ 10ರವರಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿಸೆಂಬರ್‌ 6ರ ಬುಧವಾರ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯಲ್ಲಿ ಮಾತ್ರ ಒಣ ಹವೆಯ ವಾತಾವರಣ ಕಂಡು ಬರಲಿದೆ. ಇದನ್ನೂ ಓದಿ: ವಿಭಜನೆಯ ಸಿದ್ಧಾಂತ 70 ವರ್ಷದಿಂದ ಬಂದ ಅಭ್ಯಾಸ, ಜನ ಈಗ ಎಚ್ಚೆತ್ತಿದ್ದಾರೆ: ಕಾಂಗ್ರೆಸ್ಸನ್ನು ಕುಟುಕಿದ ಮೋದಿ  

ಡಿಸೆಂಬರ್‌ 7 ರ ಗುರುವಾರದಂದು ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗಬಹುದು. ಅದೇ ರೀತಿ ಕರಾವಳಿ ಜಿಲ್ಲೆಯಲ್ಲಿ ಮಾತ್ರ ಮಳೆ ಸಾಧ್ಯತೆ ಕಡಿಮೆ. ಈ ಭಾಗದಲ್ಲಿ ಒಣ ಹವೆಯ ವಾತಾವರಣ ಇರುವ ಸಾಧ್ಯತೆಗಳು ಅಧಿಕವಾಗಿವೆ.

CYCLONE

ಡಿಸೆಂಬರ್‌ 8ರ ಶುಕ್ರವಾರದಂದು ಕರ್ನಾಟಕ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಇದೆ. ಎಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ.

ಡಿಸೆಂಬರ್‌ 9ರ ಶನಿವಾರದಂದು ಕರಾವಳಿ ಭಾಗದ ಮೂರೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಬೆಂಗಳೂರು, ಮೈಸೂರು,ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಒಣಹವೆಯ ವಾತಾವರಣ ಕಂಡು ಬರಲಿದೆ.

ಡಿಸೆಂಬರ್‌ 10ರ ಭಾನುವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

TAGGED:Chennai Raincyclone michaungIMDkarnatakaRainfallweatherಕರ್ನಾಟಕಚೆನ್ನೈ ಮಳೆಮಳೆಮಿಚಾಂಗ್‌ ಚಂಡ ಮಾರುತಹರ್ನಾಟಕ ಹವಾಮಾನಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
8 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
24 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
42 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
52 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?